13 ಗಂಟೆಗಳ ಕಾರ್ಯಾಚರಣೆ ನಂತರ ನಂದಿದ ಭೋಪಾಲ್ನ ಸಾತ್ಪುರ ಭವನದ ಆರು ಅಂತಸ್ತಿನ ಕಟ್ಟಡದ ಬೆಂಕಿ!
ಭೋಪಾಲ್, ಜೂನ್. 13: ಭೋಪಾಲ್ನ ಸಾತ್ಪುರ ಭವನದಲ್ಲಿ ಸಂಭವಿಸಿದ ಭಾರೀ ಬೆಂಕಿಯನ್ನು 13 ಗಂಟೆಗಳ ಅಗ್ನಿಶಾಮಕ ಕಾರ್ಯಾಚರಣೆಯ ನಂತರ ಕೊನೆಗೂ ನಂದಿಸಲಾಗಿದೆ. ಸೋಮವಾರ ಸಂಜೆಯಿಂದಲೇ ಹೊತ್ತಿ ಉರಿಯುತ್ತಿದ್ದ ಬೆಂಕಿ ಮಂಗಳವಾರ ಬೆಳಗಿನ ಜಾವದ ಹೊತ್ತಿಗೆ ನಂದಿಸಲಾಗಿದೆ. ಬೆಂಕಿ ಹರಡುವ ಮುನ್ನ ಅಧಿಕಾರಿಗಳು ಎಲ್ಲರನ್ನು ಸುರಕ್ಷಿತವಾಗಿ ಸ್ಥಳಾಂತರಿಸಿದ್ದರಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
"ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ. ಸಿಐಎಸ್ಎಫ್ ಮತ್ತು ಸೇನೆ ಸೇರಿದಂತೆ ಎಲ್ಲಾ ಏಜೆನ್ಸಿಗಳು ಬೆಂಕಿಯನ್ನು ನಂದಿಸಲು ಒಗ್ಗೂಡಿ ಅದನ್ನು ನಿಯಂತ್ರಿಸಿದ್ದಾರೆ" ಎಂದು ಭೋಪಾಲ್ ಜಿಲ್ಲಾಧಿಕಾರಿ ಆಶಿಶ್ ಸಿಂಗ್ ಹೇಳಿದ್ದಾರೆ ಎಂದು ಎಎನ್ಐ ವರದಿ ಮಾಡಿದೆ. ಗಿರಿಜನ ಕಲ್ಯಾಣ ಇಲಾಖೆಯ ಕಚೇರಿ ಕಟ್ಟಡದ ಮೂರನೇ ಮಹಡಿಯಲ್ಲಿ ಸೋಮವಾರ ಸಂಜೆ ಸುಮಾರು 4 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ.
#WATCH | Madhya Pradesh: Morning visuals from Bhopal's Satpura Bhawan, where a major fire broke out yesterday pic.twitter.com/w6ShWnWwGu
— ANI MP/CG/Rajasthan (@ANI_MP_CG_RJ) June 13, 2023
ಘಟನೆಗೆ ಎಸಿಯಲ್ಲಿನ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ನಂಬಲಾಗಿದೆ. ಆದರೆ ನಿಖರವಾದ ಕಾರಣವನ್ನು ನಿರ್ಧರಿಸಲು ವಿಚಾರಣೆ ನಡೆಸಲಾಗುವುದು. ಅದೃಷ್ಟವಶಾತ್ ಎಲ್ಲಾ ಇಲಾಖೆ ಸಿಬ್ಬಂದಿ ಹಾಗೂ ಅಧಿಕಾರಿಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದ್ದು, ಯಾವುದೇ ಪ್ರಾಣಹಾನಿ ನಡೆದಿಲ್ಲ. ಇದೊಂದು ದುರದೃಷ್ಟಕರ ಘಟನೆ ಎಂದು ಕರೆದಿರುವ ಮಧ್ಯಪ್ರದೇಶದ ಆರೋಗ್ಯ ಸಚಿವ ಪ್ರಭುರಾಮ್ ಚೌಧರಿ, ಘಟನೆಯ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಹೇಳಿದ್ದಾರೆ.

"ಇದೊಂದು ದುರದೃಷ್ಟಕರ ಘಟನೆ. ಬೆಂಕಿ ನಂದಿಸುವ ಕಾರ್ಯದಲ್ಲಿ ಆಡಳಿತ ನಿರತವಾಗಿದೆ. ಸಿಎಂ ಕೂಡ ಪ್ರಧಾನಿಯವರೊಂದಿಗೆ ಮಾತನಾಡಿದ್ದಾರೆ. ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ಘಟನೆಯ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಲಾಗುವುದು" ಎಂದು ಮಧ್ಯಪ್ರದೇಶದ ಆರೋಗ್ಯ ಸಚಿವ ಪ್ರಭುರಾಮ್ ಚೌಧರಿ ತಿಳಿಸಿದ್ದಾರೆ.
ಭೋಪಾಲ್ನ ಸಾತ್ಪುರ ಭವನದ ಆರು ಅಂತಸ್ತಿನ ಕಟ್ಟಡದ ಮೂರನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡ ನಂತರ, ಅದು ತ್ವರಿತವಾಗಿ ಆರನೇ ಮಹಡಿಗೆ ವ್ಯಾಪಿಸಿತು. ಬೆಂಕಿ ನಂದಿಸಲು ಅಗ್ನಿಶಾಮಕ ದಳಗಳನ್ನು ತಕ್ಷಣವೇ ಸ್ಥಳಕ್ಕೆ ರವಾನಿಸಲಾಯಿತು. ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಸಂಪರ್ಕಿಸಿ ವಾಯುಪಡೆಯಿಂದ ನೆರವು ಕೋರಿದರು. ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಮಾತನಾಡಿದ್ದು, ಪರಿಸ್ಥಿತಿಯನ್ನು ತಿಳಿಸಿ ಅಗತ್ಯ ನೆರವು ಕೋರಿದ್ದರು.
ರಕ್ಷಣಾ ಸಚಿವರ ಸೂಚನೆಗಳನ್ನು ಅನುಸರಿಸಿ, ಅಗ್ನಿಶಾಮಕ ಕಾರ್ಯಾಚರಣೆಗಾಗಿ ಐಎಎಫ್ ನ ಎಎನ್ 32 ಮತ್ತು ಎಂಐ-15 ವಿಮಾನಗಳನ್ನು ಭೋಪಾಲ್ಗೆ ಕಳುಹಿಸಲಾಯಿತು. ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ದೂರವಾಣಿ ಕರೆ ಮಾಡಿ ಬೆಂಕಿ ಅವಘಡದ ಬಗ್ಗೆ ಮಾಹಿತಿ ನೀಡಿದ್ದರು.
ಅವ್ಯವಹಾರದ ಆರೋಪ ಹೊರಿಸಿದ ಕಾಂಗ್ರೆಸ್
ಪ್ರತಿಪಕ್ಷ ಕಾಂಗ್ರೆಸ್ ನಾಯಕರು "ಚುನಾವಣಾ ವರ್ಷದಲ್ಲಿ" ಬೆಂಕಿ ಅವಘಡದ ಸಮಯವನ್ನು ಪ್ರಶ್ನಿಸಿದ್ದಾರೆ. ಇದು ಹಗರಣಗಳ ಪುರಾವೆಗಳನ್ನು ನಾಶಮಾಡುವ ಸಂಚು ಎಂದು ಆರೋಪಿಸಿದ್ದಾರೆ. "ಮಧ್ಯಪ್ರದೇಶದಲ್ಲಿ ಸರ್ಕಾರಿ ಕಡತಗಳು ಉರಿಯಲಾರಂಭಿಸಿದವು. ಚುನಾವಣೆಗೂ ಮುನ್ನ ಶುರುವಾದ ಈ ಬೆಂಕಿ ಬಿಜೆಪಿ ಸರಕಾರಕ್ಕೆ ರಣಕಹಳೆ ಮೊಳಗಿದೆ ಎನ್ನುವುದನ್ನು ತೋರಿಸುತ್ತದೆ. ಭ್ರಷ್ಟಾಚಾರದ ಕಡತಗಳು ಉರಿಯಲಾರಂಭಿಸಿವೆ" ಎಂದು ಪಕ್ಷವು ತನ್ನ ಅಧಿಕೃತ ಖಾತೆಯಿಂದ ಟ್ವೀಟ್ ಮಾಡಿದೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications