ವಿಮಾನ ಸಂಸ್ಥೆಗಳಿಗೆ ಭಾರೀ ಶಾಕ್: 9 ದಿನದಲ್ಲಿ ಬರೋಬ್ಬರಿ 600 ಕೋಟಿ ಲಾಸ್!
Bomb Threat: ಭಾರತದಲ್ಲಿ ಇತ್ತೀಚಿನ ದಿನಗಳಲ್ಲಿ ವಿಮಾನ ಸೇವೆ ಸಾಕಷ್ಟು ಮುಂದುವರಿದಿದೆ. ಕಳೆದ ಐದು ವರ್ಷದ ಅವಧಿಯಲ್ಲೂ ಸಹ ವಿಮಾನಗಳ ಸೇವೆ ಹಾಗೂ ಬೆಲೆಯಲ್ಲಿ ಸಾಕಷ್ಟು ಬದಲಾವಣೆಗಳು ಆಗಿದ್ದು, ಇದರಿಂದ ಮಧ್ಯಮ ವರ್ಗದವರು ಸಹ ವಿಮಾನಗಳಲ್ಲಿ ಪ್ರಯಾಣ ಮಾಡುವ ಅವಕಾಶ ಸಿಗುತ್ತಿದೆ. ಆದರೆ, ಕಳೆದ 15 ದಿನಗಳಿಂದ ನಡೆಯುತ್ತಿರುವ ಬೆಳವಣಿಗೆ ವಿಮಾನಯಾನದ ಲೆಕ್ಕಾಚಾರ ತಲೆಕೆಳಗಾಗಿಸಿದೆ.
ಕಳೆದ 15 ದಿನಗಳ ಅವಧಿಯಲ್ಲಿ ಭಾರತದಲ್ಲಿ ಈ ಹಿಂದೆ ಎಂದೂ ಕೇಳದಷ್ಟು ಪ್ರಮಾಣದಲ್ಲಿ ಬೆದರಿಕೆ ಕರೆಗಳು ಬರುತ್ತಿವೆ. ಕಳೆದ 9 ದಿನಗಳ ಅವಧಿಯಲ್ಲೇ ಬರೋಬ್ಬರಿ 170 ಬೆದರಿಕೆ ಕರೆಗಳು ಬಂದಿವೆ. ಈ ರೀತಿ ಬೆದರಿಕೆಯ ಕರೆಗಳು ಮುಂದುವರಿದರೆ ವಿಮಾನಯಾನ ಸಂಸ್ಥೆಗಳಿಗೆ ಇನ್ನಷ್ಟು ನಷ್ಟವಾಗುವ ಸಾಧ್ಯತೆ ಇದೆ.

ವಿಮಾನ ನಿಲ್ದಾಣಗಳು ಹಾಗೂ ವಿಮಾನಗಳನ್ನು ಸ್ಫೋಟಿಸುವ ಹಾಗೂ ಬಾಂಬ್ ಬೆದರಿಕೆಯ ಕರೆಗಳು ನಿರಂತರವಾಗಿ ಬರುತ್ತಿವೆ. ನಿರಂತರ ಬಾಂಬ್ ಬೆದರಿಕೆಯ ಕರೆಗಳಿಂದ ಭಾರತದ ವಿಮಾನಯಾನ ಸಂಸ್ಥೆಗಳಿಗೆ ಕೋಟ್ಯಾಂತರ ರೂಪಾಯಿ ನಷ್ಟವಾಗುತ್ತಿದೆ. ಕಳೆದ 9 ದಿನಗಳಿಂದ ಭಾರತೀಯ ವಿಮಾನ ಸಂಸ್ಥೆಗಳಿಗೆ ನಿರಂತರವಾಗಿ ಬಾಂಬ್ ಬೆದರಿಕೆಯ ದೂರುಗಳು ಬರುತ್ತಿದ್ದು, ಬರೋಬ್ಬರಿ 600 ಕೋಟಿ ರೂಪಾಯಿ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.
ಪ್ರತಿಷ್ಠಿತ ವಿಮಾನಗಳಿಗೆ ಬೆದರಿಕೆ: ದೇಶದ ಪ್ರತಿಷ್ಠಿತ ವಿಮಾನಗಳಿಗೆ ನಿರಂತರವಾಗಿ ಬಾಂಬ್ ಬೆದರಿಕೆ ಕರೆಗಳು ಬರುತ್ತಲ್ಲೇ ಇವೆ. ಭಾರತದ ಪ್ರತಿಷ್ಠಿತ ವಿಮಾನಯಾನ ಸಂಸ್ಥೆಗಳಾದ ಇಂಡಿಗೋ, ವಿಸ್ತಾರ, ಆಕಾಸಾ ಹಾಗೂ ಏರ್ ಇಂಡಿಯಾ ವಿಮಾನಗಳಿಗೆ ನಿರಂತರವಾಗಿ ಬಾಂಬ್ ಬೆದರಿಕೆ ಕರೆಗಳು ಬರುತ್ತಿದೆ. ಇದರಿಂದ ವಿಮಾನ ಸೇವೆಯಲ್ಲಿ ಭಾರೀ ವ್ಯತ್ಯಾಸವಾಗುತ್ತಿದೆ.
ಕರ್ನಾಟಕದ ವಿಮಾನ ನಿಲ್ದಾಣಕ್ಕೂ ಬೆದರಿಕೆ: ಕರ್ನಾಟಕದ ಪ್ರಮುಖ ವಿಮಾನ ನಿಲ್ದಾಣಗಳಿಗೂ ನಿರಂತರವಾಗಿ ಹುಸಿ ಬಾಂಬ್ ಬೆದರಿಕೆಯ ಕರೆಗಳು ಬರುತ್ತಿವೆ. ರಾಜ್ಯದ ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ಒಂದಾಗಿರುವ ಕೆಂಪೇಗೌಡ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಗಳಿಗೂ ಹುಸಿ ಬಾಂಬ್ ಬೆದರಿಕೆ ಕರೆ ಬಂದಿತ್ತು.

ದೇಶದಲ್ಲಿ 10 ದಿನಗಳಲ್ಲಿ ಅಂತರದಲ್ಲಿ 170ಕ್ಕೂ ಹೆಚ್ಚು ವಿಮಾನಗಳಿಗೆ ಈ ರೀತಿ ಬೆದರಿಕೆಯ ಕರೆಗಳು ಬರುತ್ತಿರುವುದರಿಂದ ಭಾರೀ ನಷ್ಟವಾಗುತ್ತಿದೆ. ದೇಶೀಯ ಮತ್ತು ಅಂತಾರಾಷ್ಟ್ರೀಯ ವಿಮಾನಗಳೆರಡಕ್ಕೂ ಬೆದರಿಕೆ ಕರೆಗಳನ್ನು ಕಡಿಗೇಡಿಗಳು ಮಾಡುತ್ತಿದ್ದಾರೆ. ಆದರೆ, ಈ ರೀತಿ ಏಕಾಏಕಿ ಮತ್ತು ನಿರಂತರವಾಗಿ ಹುಸಿ ಬಾಂಬ್ ಬೆದರಿಕೆ ಕರೆಗಳು ಬರುತ್ತಿರುವುದು ಏಕೆ ಇದರ ಹಿನ್ನೆಲೆ ಏನು ಎನ್ನುವುದು ಇನ್ನಷ್ಟೇ ತಿಳಿಯಬೇಕಿದೆ.
ವಿಮಾನಯಾನ ಸಂಸ್ಥೆಗೆ ನಷ್ಟ ಯಾಕೆ: ವಿಮಾನಗಳಲ್ಲಿ ಬಾಂಬ್ ಇರಿಸಲಾಗಿದೆ ಎನ್ನುವ ಬೆದರಿಕೆ ಕರೆಗಳು ಬಂದಾಗ ವಿಮಾನದ ಹಾರಾಟದಲ್ಲಿ ವ್ಯತ್ಯಾಸವಾಗುತ್ತದೆ. ಆಯಿಲ್, ವಿಮಾನ ಪಾರ್ಕಿಂಗ್ ಫೀಸ್, ಫ್ಲೈಟ್ ನೆಟ್ವರ್ಕ್ ಹಾಗೂ ಭದ್ರತೆ ಸೇರಿದಂತೆ ಹಲವು ವಿಷಯಗಳಿಗೆ ಹೆಚ್ಚು ಹಣ ಖರ್ಚಾಗುತ್ತದೆ. ವಿಮಾನಗಳ ಸೇವೆಯಲ್ಲಿ (ಹಾರಾಟ) ಭಾರೀ ವ್ಯತ್ಯಾಸವೂ ಆಗುತ್ತಿದೆ. ಈ ಎಲ್ಲಾ ಕಾರಣಗಳಿಂದ 9 ದಿನಗಳಲ್ಲಿ ಬರೋಬ್ಬರಿ 600 ಕೋಟಿ ರೂಪಾಯಿ ನಷ್ಟವಾಗಿದೆ ಎಂದು ಹೇಳಲಾಗಿದೆ.
ಭದ್ರತೆ ಹೆಚ್ಚಳ: ವಿಮಾನ ಕೇಂದ್ರ ಹಾಗೂ ವಿಮಾನಯಾನ ಸಂಸ್ಥೆಗಳಿಗೆ ನಿರಂತರವಾಗಿ ಬೆದರಿಕೆಯ ಕರೆಗಳು ಬರುತ್ತಿರುವ ಹಿನ್ನೆಲೆಯಲ್ಲಿ ಭಾರತದ ಪ್ರಮುಖ ವಿಮಾನಯಾನ ಸಂಸ್ಥೆಗಳು ಹಾಗೂ ವಿಮಾನ ಕೇಂದ್ರಗಳಿಗೆ ಭಾರೀ ಭದ್ರತೆ ಕಲ್ಪಿಸಲಾಗಿದೆ.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications