ಸೋನಾಕ್ಷಿ, ಇಶಾ ಕೊಪ್ಪಿಕರ್ ಮೇಲೆ ಬಿತ್ತು ಎಫ್ ಐಆರ್
ಉದಯಪುರ(ರಾಜಸ್ಥಾನ), ಏ.16: ಬಾಲಿವುಡ್ ನಟಿ ಸೋನಾಕ್ಷಿ ಸಿನ್ಹಾ, ನಟಿ ಕಮ್ ರೂಪದರ್ಶಿ ಇಶಾ ಕೊಪ್ಪಿಕರ್ ಹಾಗೂ ಇನ್ನೂ ಮೂವರ ವಿರುದ್ಧ ಸ್ಥಳೀಯ ಪೊಲೀಸರು ಎಫ್ ಐಆರ್ ದಾಖಲಿಸಿಕೊಂಡಿದ್ದಾರೆ. ಕಿರುತೆರೆ ನಟಿ, ಬಿಗ್ ಬಾಸ್ 5ರ ಸ್ಪರ್ಧಿ ಪೂಜಾ ಮಿಶ್ರಾಗೆ ಕಿರುಕುಳ ಕೊಟ್ಟ ಆರೋಪವನ್ನು ಹೊರೆಸಲಾಗಿದೆ.
ಕಿರುತೆರೆ ನಟಿ ಪೂಜಾ ಮಿಶ್ರಾ ಅವರು ಕೊಟ್ಟಿರುವ ದೂರಿನ ಅನ್ವಯ ನಟಿ ಸೋನಾಕ್ಷಿ ಸಿನ್ಹಾ ಹಾಗೂ ಅವರ ತಾಯಿ ಪೂನಂ ಸಿನ್ಹಾ, ಮಾಡೆಲ್ ಇಶಾ ಕೊಪ್ಪಿಕರ್ ಹಾಗೂ ಅವರ ಪತಿ ಮತ್ತು ಮತ್ತೊಂದು ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಎಫ್ ಐಆರ್ ಹಾಕಲಾಗಿದೆ. ತನಿಖೆ ಮುಂದುವರೆದಿದೆ ಎಂದು ರಾಜಸ್ಥಾನ ಪೊಲೀಸರು ಹೇಳಿದ್ದಾರೆ.

ಉದಯಪುರ್ ನ ಹೋಟೆಲ್ ವೊಂದರಲ್ಲಿ ನೆಲೆಸಿದ್ದಾಗ ಆರೋಪಿರೆಲ್ಲರೂ ಸೇರಿ ನನ್ನ ವಿರುದ್ಧ ಪಿತೂರಿ ಮಾಡಿ ನನಗೆ ಕಿರುಕುಳ ನೀಡಿದ್ದಾರೆ. ನನ್ನ ಅನುಮತಿ ಇಲ್ಲದೆ ನನ್ನ ರೂಮಿಗೆ ಅನಾಮಿಕರು ಬಂದು ಹೋಗಿ ಮಾಡಿದ್ದಾರೆ. ನನ್ನ ವಸ್ತುಗಳು ಕಳುವಾಗಿದೆ ಎಂದು ದೂರಿನಲ್ಲಿ ಪೂಜಾ ಆರೋಪಿಸಿದ್ದಾರೆ.
ನನ್ನ ರೂಮಿನಲ್ಲಿದ್ದ ಬೆಲೆಬಾಳುವ ಪರ್ಸ್ ಹಾಗೂ ಸಿಗರೇಟ್ ಗಳನ್ನು ಯಾರೋ ಕದ್ದು ಹೋಗುವುದನ್ನು ನಾನು ಕಂಡೆ. ಏ.11ರಿಂದ ಏ.14ರ ತನಕ ನಾನು ಇಲ್ಲಿನ ಹೋಟೆಲ್ ವೊಂದರಲ್ಲಿ ತಂಗಿದ್ದೆ. ಅನಾಮಿಕ ವ್ಯಕ್ತಿಯೊಬ್ಬ ಅನುಮತಿ ಇಲ್ಲದೆ ರೂಮಿಗೆ ನುಗ್ಗಿ ನನ್ನನ್ನು ಮುಟ್ಟಲು ಯತ್ನಿಸಿದ ಎಂದು ಪೂಜಾ ವಿವರಣೆ ನೀಡಿದ್ದಾರೆ.
ಉದಯ್ ಪುರ್ ನ ಅಂಬಾ ಮಠ ಪೊಲೀಸರು ಐಪಿಸಿ ಸೆಕ್ಷನ್ 379 ಹಾಗೂ 354 ಅನ್ವಯ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. (ಪಿಟಿಐ)
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications