ಬಿಹಾರ:110 ಅಡಿ ಆಳದ ಕೊಳವೆ ಬಾವಿಯಲ್ಲಿ ಪುಟ್ಟ ಕಂದನ ಆರ್ತನಾದ
ಮುಂಗೇರ್, ಆಗಸ್ಟ್ 01: ಮೂರು ವರ್ಷ ವಯಸ್ಸಿನ ಬಾಲಕಿಯೊಬ್ಬಳು 110 ಅಡಿ ಆಳದ ತೆರೆದ ಕೊಳವೆ ಬಾವಿಗೆ ಬಿದ್ದ ಘಟನೆ ಬಿಹಾರದ ಮುಂಗೇರ್ ಎಂಬಲ್ಲಿ ನಡೆದಿದೆ.
ಮಂಗಳವಾರ ಮಧ್ಯಾಹ್ನದ ಸಮಯದಲ್ಲಿ ಬಾಲಕಿ ಬಾವಿಗೆ ಬಿದ್ದಿದ್ದು, ರಕ್ಷಣಾ ಕಾರ್ಯ ನಡೆಯುತ್ತಿದೆ. ಬಾಲಕಿ ಸುರಕ್ಷಿತವಾಗಿದ್ದಾಳೆ ಎಂದು ರಕ್ಷಣಾ ತಂಡ ತಿಳಿಸಿದೆ.
ಬಿಹಾರದ ಮುಂಗೇರ್ ನ ಮುರ್ಜಿಯಾಚಕ್ ಎಂಬಲ್ಲಿ ಈ ಘಟನೆ ನಡೆದಿದ್ದು, ಬಾವಿಗೆ ಬಿದ್ದ ಮೂರು ವರ್ಷ ವಯಸ್ಸಿನ ಬಾಲಕಿಯನ್ನು ಸನ್ನೋ ಎಂದು ಗುರುತಿಸಲಾಗಿದೆ.

ಮಗುವಿಗೆ ಈಗಾಗಲೇ ಆಮ್ಲಜನಕ ಪೂರೈಕೆ ಮಾಡಲಾಗಿದ್ದು, ರಕ್ಷಣೆಗೆ ಸಾಧ್ಯವಿರುವ ಎಲ್ಲಾ ಕ್ರಮಗಳನ್ನೂ ಕೈಗೊಳ್ಳಲಾಗಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ದಳದ ಅಧಿಕಾರಿ ಸಂಜೀವ್ ಕುಮಾರ್ ತಿಳಿಸಿದ್ದಾರೆ.
ಕಳೆದ ವರ್ಷ ಆಗಸ್ಟ್ ನಲ್ಲಿ ಆಂಧ್ರಪ್ರದೇಶದ ಗುಂಟೂರಿನಲ್ಲಿ ಕೊಳವೆ ಬಾವಿಗೆ ಬಿದ್ದಿದ್ದ ಎರಡು ವರ್ಶಶ ವಯಸ್ಸಿನ ಮಗುವನ್ನು ಸತತ 12 ಗಂಟೆಯ ಕಾರ್ಯಾಚರಣೆಯ ನಂತರ ರಕ್ಷಿಸಲಾಗಿತ್ತು.
Rescue operations underway for a 3-year-old girl who is stuck in a 110 feet borewell in Munger since yesterday afternoon. DIG Jitendra Mishra says, 'SDRF (State Disaster Response Force) team has dug up to 40 feet. The girl is safe'. #Bihar pic.twitter.com/weSJUrpuzC
— ANI (@ANI) August 1, 2018
2017 ರ ಏಪ್ರಿಲ್ ನಲ್ಲಿ ಬೆಳಗಾವಿಯ ಅಥಣಿಯಲ್ಲಿ 6 ವರ್ಶಶ ವಯಸ್ಸಿನ ಕಾವೇರಿ ಎಂಬ ಮಗು ಕೊಳವೆ ಬಾವಿಗೆ ಬಿದ್ದಿದ್ದಳು. ಸತತ 54 ಗಂಟೆಗಳ ಕಾರ್ಯಾಚರಣೆಯ ನಂತರವೂ ಆಕೆಯನ್ನು ಉಳಿಸಿಕೊಳ್ಳುವುದಕ್ಕೆ ಸಾಧ್ಯವಾಗಿರಲಿಲ್ಲ. ತೆರೆದ ಕೊಳವೆ ಬಾವಿಯಿಂದಾಗಿ ಅಮಾಯಕ ಮಕ್ಕಳು ಜೀವ ಕಳೆದುಕೊಳ್ಳುವಂಥ ಸನ್ನಿವೇಶಗಳು ಪದೇ ಪದೇ ನಡೆಯುತ್ತಲೇ ಇದ್ದರೂ ಇವುಗಳನ್ನು ಮುಚ್ಚಿಸುವ ಕುರಿತು ಆಯಾ ಜಮೀನಿನ ಮಾಲಿಕರು, ಸರ್ಕಾರಗಳು ಯೋಚಿಸುತ್ತಿಲ್ಲ ಎಂಬುದು ಖೇದಕರ ವಿಷಯ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications