Bihar Assembly Election 2025: ಮತ ಚಲಾಯಿಸಿದ 111 ವರ್ಷದ ವೃದ್ಧೆ
Bihar Assembly Election 2025: ಬಿಹಾರ ವಿಧಾಸಭೆಯ 122 ಕ್ಷೇತ್ರಗಳಿಗೆ ಎರಡನೇ ಹಂತದ ಮತದಾನ ನಡೆಯುತ್ತಿದೆ. ಛಟಾಪುರ ವಿಧಾನಸಭಾ ಕ್ಷೇತ್ರದಲ್ಲಿ 111 ವರ್ಷದ ವೃದ್ಧೆ ಮಹಿಳೆಯೊಬ್ಬರು ಮತಗಟ್ಟೆಗೆ ಬಂದು ಮತ ಚಲಾವಣೆ ಮಾಡಿ ಗಮನ ಸೆಳೆದಿದ್ದಾರೆ. ಈ ಮೂಲಕ ಇತರರಿಗೆ ಮಾದರಿ ಆಗಿದ್ದಾರೆ.
ಈಗಾಗಲೇ ಬಿಹಾರ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ 121 ಕ್ಷೇತ್ರಗಳಿಗೆ ನವೆಂಬರ್ 6ರಂದು ನಡೆದಿದ್ದು, ಇಂದು (ನವೆಂ11) 122 ಕ್ಷೇತ್ರಗಳಿಗೆ ಎರಡನೇ ಹಾಗೂ ಕೊನೇ ಹಂತದ ಮತದಾನ ನಡೆಯುತ್ತಿವೆ. ಇನ್ನೂ ಇಂದು 111 ವರ್ಷದ ನಸೀಮಾ ಖತುನ್ ಎಂಬ ವೃದ್ಧೆ ಮಹಿಳೆ ಮತಗಟ್ಟೆಗೆ ತೆರಳಿ ಮತದಾನ ಮಾಡಿದ ಘಟನೆ ಛಟಾಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ.

111 ವರ್ಷದ ವೃದ್ಧೆ ಹೇಳಿದ್ದೇನು?: ಬಿಹಾರ ವಿಧಾನಸಭಾ ಚುನಾವಣೆಯ 2ನೇ ಹಂತದ ಮತದಾನ ನಡೆಯುತ್ತಿದ್ದು, ಛಾತಾಪುರ ಕ್ಷೇತ್ರದಲ್ಲಿ 111 ವರ್ಷದ ನಸೀಮಾ ಖತುನ್ ಎಂಬ ವೃದ್ಧೆ ಮತ ಚಲಾಯಿಸಿದರು. ಬಳಿಕ ಮಾತನಾಡಿದ ಅವರು "ನಾನು ನನ್ನ ಮತ ಚಲಾಯಿಸಿ ನನ್ನ ಕರ್ತವ್ಯವನ್ನು ಪೂರೈಸಿದ್ದೇನೆ," ಎಂದು ಹೇಳಿದರು.
ದೆಹಲಿ ಸ್ಫೋಟ ಪರಿಣಾಮ ಬೀರಬಹುದು: ಸೋಮವಾರ ನಡೆದ ದೆಹಲಿ ಸ್ಫೋಟ ಬಿಹಾರ ಚುನಾವಣೆ ಮೇಲೆ ಪರಿಣಾಮ ಬೀರಬಹುದು. ಅದೂ ಸಹ ಬಿಜೆಪಿ ವಿರುದ್ಧವಾಗಿ ಪರಿಣಾಮ ಬೀರಬಹುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಭದ್ರತಾ ವೈಫಲ್ಯ ಆಗಿದ್ದು, ಇದಕ್ಕೆ ಕೇಂದ್ರವೇ ತನಿಖೆ ನಡೆಸಿ ಉತ್ತರಿಸಲಿ. ಬಾಂಬ್ ಬ್ಲಾಸ್ಟ್ಗಳು ಆಗಬಾರದು. ಇದರಿಂದ ಆಗುವ ಅಮಾಯಕರ ಜೀವಹಾನಿ ಆಗುವುದು ತುಂಬಾ ಬೇಸರದ ಸಂಗತಿ ಎಂದು ಹೇಳಿದರು.
ಜೊತೆಗೆ ದೆಹಲಿ ಭೇಟಿ ಹಾಗೂ ನಿನ್ನೆ ಮೈಸೂರಿನಲ್ಲಿ ಸತತ 10 ಗಂಟೆಗಳ ಕಾಲ ನಡೆದ ಕೆಡಿಪಿ ಸಭೆಯ ಪ್ರಮುಖ ವಿಚಾರಗ ಬಗ್ಗೆ ವಿವರಣೆ ನೀಡಿದರು. ಪೊಲೀಸ್ ಅಧಿಕಾರಿಗಳಿಗೆ ಗೊತ್ತಿಲ್ಲದೆ, ಸಂಘಟಿತ ಅಪರಾಧಗಳು ನಡೆಯಲು ಸಾಧ್ಯ ಇಲ್ಲ. ಆದ್ದರಿಂದ ಅಪರಾಧ ಪ್ರಮಾಣಗಳು ಹೆಚ್ಚಳ ಆದ್ರೆ, ಪೊಲೀಸ್ ಅಧಿಕಾರಿಗಳೇ ಹೊಣೆ ಆಗುತ್ತಾರೆ. ಮೈಸೂರು ಜಿಲ್ಲೆಯನ್ನು ಡ್ರಗ್ಸ್ ಮುಕ್ತ ಜಿಲ್ಲೆ ಮಾಡಲು ಸೂಚನೆ ನೀಡಿದ್ದೇನೆ ಎಂದರು.
ಕೋಮುಗಲಭೆ ಪೀಡಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಬ್ಬರು ಅಧಿಕಾರಿಗಳನ್ನು ಬದಲಾಯಿಸಿದ ತಕ್ಷಣ ಇಡೀ ಜಿಲ್ಲೆಯಲ್ಲಿ ಇದೀಗ ಅನಾಗರಿಕ ಘಟನೆಗಳು ಬಂದ್ ಆಗಿವೆ. ಅಲ್ಲಿ ಇಬ್ಬರು ಅಧಿಕಾರಿಗಳಿಂದ ಇಷ್ಟೆಲ್ಲಾ ಸಾಧ್ಯವಾಗುತ್ತದೆ ಎನ್ನುವುದಾದರೆ ಉಳಿದ ಕಡೆಗಳಲ್ಲೂ ಸಾಧ್ಯ ಇದೆ. ಪೊಲೀಸ್ ಅಧಿಕಾರಿಗಳು ಮನಸ್ಸು ಮಾಡಿ, ವೃತ್ತಿಪರವಾಗಿ ನಡೆದುಕೊಂಡರೆ ಸಾಕು ಎನ್ನುವ ಸೂಚನೆ ನೀಡಿದ್ದೇನೆ ಎಂದು ಸಿಎಂ ತಿಳಿಸಿದರು.
ಡಿಸಿ, ಎಸಿ, ತಹಶಿಲ್ದಾರ್ ನ್ಯಾಯಾಲಯಗಳಲ್ಲಿನ ಪ್ರಕರಣಗಳನ್ನು ಶೀಘ್ರ ಇತ್ಯರ್ಥಪಡಿಸಲು ಸೂಚನೆ ನೀಡಿದ್ದೇನೆ. ಮೈಸೂರು ಜಿಲ್ಲೆಯಲ್ಲಿ ಕಳೆದ ಎರಡೂ ವರ್ಷಗಳಲ್ಲಿ ಇದ್ದ 8 ಸಾವಿರ ಪ್ರಕರಣಗಳಲ್ಲಿ ಈಗಾಗಲೇ 7,540ರಷ್ಟು ಪ್ರಕಣಗಳು ಇತ್ಯರ್ಥ ಆಗಿವೆ. ಉಳಿದವೂ ಬೇಗ ಇತ್ಯರ್ಥ ಆಗಬೇಕು ಹಾಗೂ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಹಾಸ್ಟೆಲ್ಗಳಿಗೆ ದಿಢೀರ್ ಭೇಟಿ ನೀಡಿ ಊಟ ಮತ್ತು ಹಾಸ್ಟೆಲ್ ಗುಣಮಟ್ಟ ಪರಿಶೀಲಿಸಲು ಸೂಚನೆ ನೀಡಲಾಗಿದೆ ಎಂದರು.
ನಾನು ಮೈಸೂರು ಜಿಲ್ಲೆಯವನೇ ಆಗಿರುವುದರಿಂದ ನಾನೇ ಕೆಡಿಪಿ ಸಭೆ ನಡೆಸುತ್ತೇನೆ. ಪೊಲೀಸ್ ಅಧಿಕಾರಿಗಳು ಘಟನಾ ಸ್ಥಳಕ್ಕೆ ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಅಪರಾಧಿಗಳು, ರಿಯಲ್ ಎಸ್ಟೇಟ್, ರೌಡಿಗಳನ್ನು ಹೊರತುಪಡಿಸಿ ಪೊಲೀಸರು ಸಾರ್ವಜನಿಕರ ಜೊತೆ ಉತ್ತಮವಾಗಿ ವರ್ತಿಸುವಂತೆ ಹೇಳಲಾಗಿದೆ ಎಂದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications