Bihar P-Marq Exit Polls: ಪಿ-ಮಾರ್ಕ್ಯೂ ಸಮೀಕ್ಷೆ ಪ್ರಕಾರ ಬಿಹಾರದಲ್ಲಿ ಚುಕ್ಕಾಣಿ ಹಿಡಿಯಲಿರುವ ಪಕ್ಷ ಯಾವ್ದು ಗೊತ್ತಾ?
Bihar Election 2025 P-Marq Exit Poll: ಬಿಹಾರ ವಿಧಾನಸಭಾ ಚುನಾವಣೆ 2025ರ ಮತದಾನ ಮುಕ್ತಾಯವಾಗಿದೆ. ಇದರ ಬೆನ್ನಲ್ಲೇ ಇದೀಗ ಚುನಾವಣೋತ್ತರ ಸಮೀಕ್ಷೆಗಳು ಹೊರಬಿದ್ದಿವೆ. ಹಾಗಾದ್ರೆ, ಪಿ-ಪಿ-ಮಾರ್ಕ್ (P-Marq) ನಡೆಸಿದ ಸಮೀಕ್ಷೆ ಪ್ರಕಾರ ಯಾವ ಪಕ್ಷ ಅಧಿಕಾರಕ್ಕೆ ಬರಲಿದೆ ಹಾಗೂ ಎಷ್ಟು ಸ್ಥಾನಗಳು ಬರಲಿವೆ ಎನ್ನುವ ಸಂಪೂರ್ಣ ಅಂಕಿಅಂಶಗಳನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಬಿಹಾರ ವಿಧಾಸಭೆ ಚುನಾವಣೋತ್ತರ ಸಮೀಕ್ಷೆಯ ಫಲಿತಾಂಶ ಹೊರಬಿದ್ದಿದೆ. ಪಿ-ಪಿ-ಮಾರ್ಕ್ ನಡೆಸಿದ ಸಮೀಕ್ಷೆ ಪ್ರಕಾರ, ಬಿಜೆಪಿ ನೇತೃತ್ವದ ಎನ್ಡಿಎ ಗೆಲುವಿನ ನಗೆ ಬೀರಲಿದೆ. ಎನ್ಡಿಎ 142-162 ಸೀಟುಗಳನ್ನು ಪಡೆಯಲಿದ್ದು, ಮಹಾಘಟಬಂಧನ್ (MGB) 80-98, JSP 1-4, ಪಕ್ಷೇತರ ಮೂರು ಸ್ಥಾನಗಳನ್ನು ಪಡೆಯಲಿದೆ.

ಪಿ-ಮಾರ್ಕ್ಯೂ ಸಮೀಕ್ಷೆ: ಪಕ್ಷವಾರು ಸ್ಥಾನಗಳು
* NDA - 142-162
* MGB - 80-98
* JSP - 1-4
* OTH - 0-3
ಬಿಹಾರ ವಿಧಾನಸಭೆ ಚುನಾವಣೆ ಮೊದಲ ಹಂತದ ಮತದಾನ ನೆವಂಬರ್ 6ರಂದು ನಡೆದಿದ್ದು, ನವೆಂಬರ್ 11ರಂದು ಎರಡನೇ ಹಾಗೂ ಕೊನೇ ಹಂತದಲ್ಲಿ ಮತದಾನ ನಡೆದಿದೆ. ಇದರ ಬೆನ್ನಲ್ಲೇ ಚುನಾವಣೋತ್ತರ ಫಲಿತಾಂಶ ಕೂಡ ಹೊರಬಿದ್ದಿದೆ. ಅಧಿಕೃತವಾಗಿ ಚುನಾವಣಾ ಆಯೋಗವು ನವೆಂಬರ್ 14ರಂದು ಮತ ಎಣಿಕೆ ನಡೆಸಲಿದ್ದು, ಅಂದೇ ನಿಜವಾದ ಫಲಿತಾಂಶ ಹೊರಬೀಳಿಲಿದೆ.
ಎಲ್ಲೆಲ್ಲಿ ಎಷ್ಟು ಮತದಾನ?: ರಾಜ್ಯ ವಿಧಾನಸಭೆಗೆ ಇಂದು ನಡೆದ ಎರಡನೇ ಹಂತದ ಮತದಾನ ಮುಕ್ತಾಯವಾಗಿದೆ. ಕೇಂದ್ರ ಚುನಾವಣಾ ಆಯೋಗ ನೀಡಿರುವ ಮಾಹಿತಿಯ ಪ್ರಕಾರ, ಎರಡನೇ ಹಂತದಲ್ಲಿ ದಾಖಲೆಯ ಶೇಕಡಾ 67.14ರಷ್ಟು ಮತದಾನ ಆಗಿದೆ.
ನವೆಂಬರ್ 6ರಂದು ಮೊದಲ ಹಂತದಲ್ಲಿ ಶೇಕಡಾ 65.09ರಷ್ಟು ಮತದಾನ ಆಗಿತ್ತು. ಎರಡನೇ ಹಂತದಲ್ಲಿ ಇದಕ್ಕೂ ಮೀರಿ ಅತ್ಯಧಿಕ ಪ್ರಮಾಣದಲ್ಲಿ ಜನರು ಮತ ಚಲಾವಣೆ ಮಾಡಿದ್ದಾರೆ. 122 ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾರರು ಉತ್ಸಾಹದಿಂದ ಮತ ಚಲಾಯಿಸಿದ್ದಾರೆ. ಈ ಕ್ಷೇತ್ರಗಳಲ್ಲಿ ಒಟ್ಟು 3.70 ಕೋಟಿ ಮತದಾರರಿದ್ದರು.
ರಾಜ್ಯದ ಏಕೈಕ ಮುಸ್ಲಿಂ ಬಹುಸಂಖ್ಯಾತ ಜಿಲ್ಲೆಯಾದ ಕಿಶನ್ಗಂಜ್ನಲ್ಲಿ ಇದುವರೆಗೆ ಅತಿ ಹೆಚ್ಚು ಮತದಾನ ಆಗಿರುವ ಬಗ್ಗೆ ವರದಿಯಾಗಿದೆ. ಇಲ್ಲಿ ಶೇಕಡ 76.26ರಷ್ಟು ಮತ ದಾಖಲಾಗಿದೆ. ಅದರ ಪಕ್ಕದ ಕತಿಹಾರ್ ಕ್ಷೇತ್ರದಲ್ಲಿ ಶೇಕಡ 75.23, ಪುರ್ನಿಯಾದಲ್ಲಿ ಶೇಕಡ 73.79, ಸುಪೌಲ್ನಲ್ಲಿ ಶೇಕಡ 70.69, ಅರಾರಿಯಾದಲ್ಲಿ ಶೇಕಡ 67.79ರಷ್ಟು ಮತದಾನ ಆಗಿರುವ ಬಗ್ಗೆ ವರದಿಯಾಗಿದೆ.
ಇನ್ನು ದಕ್ಷಿಣ ಬಿಹಾರ ಜಿಲ್ಲೆಗಳಾದ ಜಮುಯಿ ಕ್ಷೇತ್ರದಲ್ಲಿ ಶೇಕಡ 67.81, ಗಯಾದಲ್ಲಿ ಶೇಕಡ 67.50, ಕೈಮೂರ್ನಲ್ಲಿ ಶೇಕಡ 67.22 ಮತದಾನ ಆಗಿದೆ. ನವಾಡಾದಲ್ಲಿ ಅತ್ಯಂತ ಕಡಿಮೆ ಶೇಕಡಾ 57.31ರಷ್ಟು ಮತದಾನ ಆಗಿದೆ. ಎರಡನೇ ಹಂತದ ಚುನಾವಣೆಯಲ್ಲಿ 1,302 ಅಭ್ಯರ್ಥಿಗಳಿದ್ದರು. ಗಯಾ, ಭಾಗಲ್ಪುರ್, ಮಧುಬನಿ, ಕಟಿಹಾರ್, ಪೂರ್ಣಿಯಾ ಮತ್ತು ಪಶ್ಚಿಮ ಚಂಪಾರಣ್ ಸೇರಿದಂತೆ 20 ಜಿಲ್ಲೆಗಳ ಸಾವಿರಾರು ಬೂತ್ಗಳಲ್ಲಿ ಮತದಾನ ನಡೆದಿದೆ. ಇನ್ನೂ ಅಧಿಕೃತವಾಗಿ ನವೆಂಬರ್ 14ರಂದು ಫಲಿತಾಂಶ ಹೊರಬೀಳಲಿದೆ.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications