ಸಮರಕ್ಕೂ ಮುನ್ನವೇ ಹಿಂದೆಸರಿದ ಮೈತ್ರಿ ಕೂಟದ ಕಿಂಗ್
ನವದೆಹಲಿ, ಸೆ. 03: ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರದ ವಿರುದ್ಧ ತೊಡೆ ತಟ್ಟಿ ನಿಂತ ಜನತಾ ಪರಿವಾರದಲ್ಲಿ ಒಡಕು ಮೂಡಿದೆ. ಬಿಹಾರ ಚುನಾವಣೆ ಮಹಾ ಸಮರಕ್ಕೂ ಮುನ್ನವೇ ಮೈತ್ರಿಕೂಟದ ಕಿಂಗ್ ಮುಲಾಯಂ ಸಿಂಗ್ ಯಾದವ್ ಅವರು ಶಸ್ತ್ರತ್ಯಾಗ ಮಾಡಿದ್ದಾರೆ.
ಆರು ಪಕ್ಷಗಳ ಅಧಿಕೃತ ವಿಲೀನಗೊಂಡು ನಾಲ್ಕು ತಿಂಗಳುಗಳು ಕಳೆಯುವಷ್ಟರಲ್ಲೇ ಸಮಾಜವಾದಿ ಪಕ್ಷ ಭಿನ್ನರಾಗ ಹಾಡಿದೆ. ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ ಸ್ವತಂತ್ರವಾಗಿ ಸ್ಪರ್ಧೆಗಿಳಿಯಲಿದೆ ಎಂದು ಮುಲಾಯಂ ಸಿಂಗ್ ಗುರುವಾರ ಘೋಷಿಸಿದ್ದಾರೆ. ಇದರಿಂದ ಬಿಜೆಪಿ ನೇತೃತ್ವದ ಮೈತ್ರಿಕೂಟಕ್ಕೆ ಭಾರಿ ಮುನ್ನಡೆ ದೊರೆತಂತಾಗಿದೆ.

ರಾಷ್ಟ್ರೀಯ ಜನತಾ ದಳ, ಜನತಾ ದಳ ಸೆಕ್ಯುಲರ್, ಸಮಾಜವಾದಿ ಜನತಾ ಪಕ್ಷ, ಭಾರತೀಯ ರಾಷ್ಟ್ರೀಯ ಲೋಕದಳ, ಸಮಾಜವಾದಿ ಪಕ್ಷ, ಜನತಾದಳ ಯುನೈಟೆಡ್ ಮುಖಂಡರು ಒಗ್ಗೂಡಿ ಸೇರಿಸಿದ್ದ ಮೈತ್ರಿಕೂಟಕ್ಕೆ ಸಮಾಜವಾದಿ ಪಕ್ಷದ ಅಧ್ಯಕ್ಷ ಮುಲಾಯಂ ಸಿಂಗ್ ಯಾದವ್ ಅವರನ್ನು ನಾಯಕರನ್ನಾಗಿಸಲಾಗಿತ್ತು. ಪಕ್ಷದ ಸಂಸದೀಯ ಸಮಿತಿ ಮುಖ್ಯಸ್ಥರಾಗಿ ಸಂಸತ್ತಿನ ನಾಯಕರಾಗಿ ಕೂಡಾ ಮುಲಾಯಂ ಅವರನ್ನೇ ಆರಿಸಲಾಗಿತ್ತು.[6 ಪಕ್ಷಗಳ ವಿಲೀನ, ಜನತಾ ಪರಿವಾರಕ್ಕೆ ಮುಲಾಯಂ ಕಿಂಗ್]
ಅದರೆ, ಬಿಹಾರದಲ್ಲಿ ಎಸ್ ಪಿ ಸ್ವಂತಬಲದಿಂದ ಸ್ಪರ್ಧಿಸಲಿದೆ ಎಂದು ಪಕ್ಷದ ನಾಯಕ ರಾಮ್ ಗೋಪಾಲ್ ಯಾದವ್ ಲಕ್ನೋದಲ್ಲಿ ಹೇಳಿದ್ದಾರೆ. ಆರ್ ಜೆ ಡಿ ಹಾಗೂ ಜೆಡಿಯು 100ಸ್ಥಾನಗಳಲ್ಲಿ ಸ್ಪರ್ಧಿಸಲಿದ್ದು, ಕಾಂಗ್ರೆಸಿಗೆ 40 ಸ್ಥಾನ ಬಿಟ್ಟುಕೊಡಲಾಗುವುದು ಎಂದು ಬಿಹಾರ ಸಿಎಂ ನಿತೀಶ್ ಕುಮಾರ್ ಘೋಷಿಸಿದ್ದರು.
ಮೈತ್ರಿಕೂಟದಲ್ಲಿರುವ ಎನ್ ಸಿಪಿ ಹಾಗೂ ಐಎನ್ ಎಲ್ ಡಿ ಕೂಡಾ ಇದಕ್ಕೆ ಬಹುತೇಕ ಸಮ್ಮತಿಸಿತ್ತು. ಆದರೆ, ಸೀಟು ಹಂಚಿಕೆ ಬಗ್ಗೆ ಅಪಸ್ವರ ತೆಗೆದಿರುವ ಸಮಾಜವಾದಿ ಪಕ್ಷ ಬಿಹಾರದಲ್ಲಿ ಏಕಾಂಗಿಯಾಗಿ ಕಣಕ್ಕಿಳಿಯಲು ನಿರ್ಧರಿಸಿದೆ.
ಸಂಸತ್ತಿನಲ್ಲಿ ಎಸ್ ಪಿ 6 ಜನ ಸದಸ್ಯರನ್ನು ಹೊಂದಿದೆ.ಆರ್ ಜೆ ಡಿ ನಾಲ್ಕು ಜೆಡಿಯು,ಜೆಡಿಎಸ್ ಹಾಗೂ ಐಎನ್ ಎಲ್ ಡಿ ತಲಾ 2 ಸಂಸದರನ್ನು ಹೊಂದಿದೆ. ಲೋಕಸಭೆಯಲ್ಲಿ ಜನತಾ ಪರಿವಾರದ ಬಲ 15. ರಾಜ್ಯಸಭೆಯಲ್ಲಿ ಎಸ್ ಪಿ 15, ಜೆಡಿಯು 12, ಐಎನ್ ಎಲ್ ಡಿ, ಜೆಡಿಎಸ್ ಹಾಗೂ ಆರ್ ಜೆಡಿ ತಲಾ ಒಬ್ಬ ಸದಸ್ಯರನ್ನು ಹೊಂದಿದೆ. ಮೇಲ್ಮನೆಯಲ್ಲಿ ಜನತಾ ಪರಿವಾರದ ಬಲ 30.
-
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Viral: ಬೆಂಗಳೂರಿಗೆ ಕಾಲಿಟ್ಟಿತೇ ಡೇಂಜರಸ್ 'ಜಾಂಬಿ ಡ್ರಗ್'?: ಯುವಕನ ವಿಡಿಯೋ ನೋಡಿ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನ -
PUC Results: 2026ರ ದ್ವಿತೀಯ PUC ಪರೀಕ್ಷೆ ಫಲಿತಾಂಶ ಪ್ರಕಟ, ಇವರೇ ನೋಡಿ ಟಾಪರ್ -
Dhurandhar-2 OTT: ನೆಟ್ಫ್ಲಿಕ್ಸ್ ಅಲ್ಲ, ಈ ಒಟಿಟಿಯಲ್ಲಿ 'ಧರಂಧರ-2' ಅಬ್ಬರ, ಯಾವಾಗ? -
Ragi Price Today: ಕರ್ನಾಟಕದ ಮಾರುಕಟ್ಟೆಗಳಲ್ಲಿ ಇಂದಿನ "ರಾಗಿ' ಬೆಲೆ ಎಷ್ಟಿದೆ? ಲೇಟೆಸ್ಟ್ ಅಪ್ಡೇಟ್ -
Rain in Karnataka: ಕರ್ನಾಟಕದ ಕರಾವಳಿಯಲ್ಲಿ ಭಾರೀ ಬಿಸಿಲು; ಬೆಂಗಳೂರು ಸೇರಿ ಈ ಭಾಗಗಳಲ್ಲಿ ಮಳೆ: ಐಎಂಡಿ -
Election Commission: ಚುನಾವಣೆ ಸಮಯದಲ್ಲೇ ಭಾರತೀಯ ಚುನಾವಣಾ ಆಯೋಗದ ಟ್ವೀಟ್ ಎಡವಟ್ಟು, ಬಿಜೆಪಿ ಪರ ಎಂದ ವಿರೋಧ ಪಕ್ಷಗಳು -
Dhurandhar 2: ದುರಂಧರ್ 2 ಸಿನಿಮಾ: ಬಾಕ್ಸ್ ಆಫೀಸ್ನಲ್ಲಿ 1,000 ಕೋಟಿ ದಾಖಲೆಯ ನಡುವೆ ಹೊಸ ಸಂಕಷ್ಟ -
Zombis Drug: ಬೆಂಗಳೂರಲ್ಲಿ ಜಾಂಬಿ ಡ್ರಗ್ಸ್ ಸೇವಿಸಿ ಯುವಕನ ವಿಚಿತ್ರ ವರ್ತನೆ: ನಟ ದುನಿಯಾ ವಿಜಯ್ ವಿಡಿಯೋ ವೈರಲ್ -
Assembly Elections 2026: ಕೇರಳಂ, ಅಸ್ಸಾಂ, ಪುದುಚೇರಿ ವಿಧಾನಸಭೆ ಚುನಾವಣೆ ಮತದಾನ ಪ್ರಾರಂಭ -
Karnataka 2nd Puc Results 2026: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ ಯಾವ ಜಿಲ್ಲೆ ಎಷ್ಟನೇ ಸ್ಥಾನ? -
Chandrika Dixit: ಒಂದು ರಾತ್ರಿ ನನ್ನ ಜೊತೆ ಮಲಗಿದ್ರೆ 50 ಲಕ್ಷ ಕೊಡ್ತೇನೆ; ಚಂದ್ರಿಕಾಗೆ ಖ್ಯಾತ ಉದ್ಯಮಿ ಆಫರ್












Click it and Unblock the Notifications