ಸಮರಕ್ಕೂ ಮುನ್ನವೇ ಹಿಂದೆಸರಿದ ಮೈತ್ರಿ ಕೂಟದ ಕಿಂಗ್
ನವದೆಹಲಿ, ಸೆ. 03: ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರದ ವಿರುದ್ಧ ತೊಡೆ ತಟ್ಟಿ ನಿಂತ ಜನತಾ ಪರಿವಾರದಲ್ಲಿ ಒಡಕು ಮೂಡಿದೆ. ಬಿಹಾರ ಚುನಾವಣೆ ಮಹಾ ಸಮರಕ್ಕೂ ಮುನ್ನವೇ ಮೈತ್ರಿಕೂಟದ ಕಿಂಗ್ ಮುಲಾಯಂ ಸಿಂಗ್ ಯಾದವ್ ಅವರು ಶಸ್ತ್ರತ್ಯಾಗ ಮಾಡಿದ್ದಾರೆ.
ಆರು ಪಕ್ಷಗಳ ಅಧಿಕೃತ ವಿಲೀನಗೊಂಡು ನಾಲ್ಕು ತಿಂಗಳುಗಳು ಕಳೆಯುವಷ್ಟರಲ್ಲೇ ಸಮಾಜವಾದಿ ಪಕ್ಷ ಭಿನ್ನರಾಗ ಹಾಡಿದೆ. ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ ಸ್ವತಂತ್ರವಾಗಿ ಸ್ಪರ್ಧೆಗಿಳಿಯಲಿದೆ ಎಂದು ಮುಲಾಯಂ ಸಿಂಗ್ ಗುರುವಾರ ಘೋಷಿಸಿದ್ದಾರೆ. ಇದರಿಂದ ಬಿಜೆಪಿ ನೇತೃತ್ವದ ಮೈತ್ರಿಕೂಟಕ್ಕೆ ಭಾರಿ ಮುನ್ನಡೆ ದೊರೆತಂತಾಗಿದೆ.

ರಾಷ್ಟ್ರೀಯ ಜನತಾ ದಳ, ಜನತಾ ದಳ ಸೆಕ್ಯುಲರ್, ಸಮಾಜವಾದಿ ಜನತಾ ಪಕ್ಷ, ಭಾರತೀಯ ರಾಷ್ಟ್ರೀಯ ಲೋಕದಳ, ಸಮಾಜವಾದಿ ಪಕ್ಷ, ಜನತಾದಳ ಯುನೈಟೆಡ್ ಮುಖಂಡರು ಒಗ್ಗೂಡಿ ಸೇರಿಸಿದ್ದ ಮೈತ್ರಿಕೂಟಕ್ಕೆ ಸಮಾಜವಾದಿ ಪಕ್ಷದ ಅಧ್ಯಕ್ಷ ಮುಲಾಯಂ ಸಿಂಗ್ ಯಾದವ್ ಅವರನ್ನು ನಾಯಕರನ್ನಾಗಿಸಲಾಗಿತ್ತು. ಪಕ್ಷದ ಸಂಸದೀಯ ಸಮಿತಿ ಮುಖ್ಯಸ್ಥರಾಗಿ ಸಂಸತ್ತಿನ ನಾಯಕರಾಗಿ ಕೂಡಾ ಮುಲಾಯಂ ಅವರನ್ನೇ ಆರಿಸಲಾಗಿತ್ತು.[6 ಪಕ್ಷಗಳ ವಿಲೀನ, ಜನತಾ ಪರಿವಾರಕ್ಕೆ ಮುಲಾಯಂ ಕಿಂಗ್]
ಅದರೆ, ಬಿಹಾರದಲ್ಲಿ ಎಸ್ ಪಿ ಸ್ವಂತಬಲದಿಂದ ಸ್ಪರ್ಧಿಸಲಿದೆ ಎಂದು ಪಕ್ಷದ ನಾಯಕ ರಾಮ್ ಗೋಪಾಲ್ ಯಾದವ್ ಲಕ್ನೋದಲ್ಲಿ ಹೇಳಿದ್ದಾರೆ. ಆರ್ ಜೆ ಡಿ ಹಾಗೂ ಜೆಡಿಯು 100ಸ್ಥಾನಗಳಲ್ಲಿ ಸ್ಪರ್ಧಿಸಲಿದ್ದು, ಕಾಂಗ್ರೆಸಿಗೆ 40 ಸ್ಥಾನ ಬಿಟ್ಟುಕೊಡಲಾಗುವುದು ಎಂದು ಬಿಹಾರ ಸಿಎಂ ನಿತೀಶ್ ಕುಮಾರ್ ಘೋಷಿಸಿದ್ದರು.
ಮೈತ್ರಿಕೂಟದಲ್ಲಿರುವ ಎನ್ ಸಿಪಿ ಹಾಗೂ ಐಎನ್ ಎಲ್ ಡಿ ಕೂಡಾ ಇದಕ್ಕೆ ಬಹುತೇಕ ಸಮ್ಮತಿಸಿತ್ತು. ಆದರೆ, ಸೀಟು ಹಂಚಿಕೆ ಬಗ್ಗೆ ಅಪಸ್ವರ ತೆಗೆದಿರುವ ಸಮಾಜವಾದಿ ಪಕ್ಷ ಬಿಹಾರದಲ್ಲಿ ಏಕಾಂಗಿಯಾಗಿ ಕಣಕ್ಕಿಳಿಯಲು ನಿರ್ಧರಿಸಿದೆ.
ಸಂಸತ್ತಿನಲ್ಲಿ ಎಸ್ ಪಿ 6 ಜನ ಸದಸ್ಯರನ್ನು ಹೊಂದಿದೆ.ಆರ್ ಜೆ ಡಿ ನಾಲ್ಕು ಜೆಡಿಯು,ಜೆಡಿಎಸ್ ಹಾಗೂ ಐಎನ್ ಎಲ್ ಡಿ ತಲಾ 2 ಸಂಸದರನ್ನು ಹೊಂದಿದೆ. ಲೋಕಸಭೆಯಲ್ಲಿ ಜನತಾ ಪರಿವಾರದ ಬಲ 15. ರಾಜ್ಯಸಭೆಯಲ್ಲಿ ಎಸ್ ಪಿ 15, ಜೆಡಿಯು 12, ಐಎನ್ ಎಲ್ ಡಿ, ಜೆಡಿಎಸ್ ಹಾಗೂ ಆರ್ ಜೆಡಿ ತಲಾ ಒಬ್ಬ ಸದಸ್ಯರನ್ನು ಹೊಂದಿದೆ. ಮೇಲ್ಮನೆಯಲ್ಲಿ ಜನತಾ ಪರಿವಾರದ ಬಲ 30.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications