Bihar Results: ಬಿಹಾರದಲ್ಲಿ ವಿರೋಧ ಪಕ್ಷಗಳು ಹೀನಾಯವಾಗಿ ಸೋಲಲು ಕಾರಣ ಏನು?
ಬಿಹಾರ ವಿಧಾನಸಭೆ ಚುನಾವಣೆ 2025 ಫಲಿತಾಂಶ ಬಹುತೇಕ ಹೊರಬಿದ್ದಿದ್ದು, ಈ ಚುನಾವಣೆ ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳ ಪಾಲಿಗೆ ದೊಡ್ಡ ಆಘಾತವನ್ನೇ ನೀಡಿದೆ. ಅಂದಹಾಗೆ ಈ ಚುನಾವಣೆಯಲ್ಲಿ ಗೆದ್ದು ಬೀಗುವ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್ & ಆರ್ಜೆಡಿ ನೇತೃತ್ವದ ಒಕ್ಕೂಟವು ಹೀನಾಯ ಸೋಲಿನ ಕಡೆಗೆ ಮುಖ ಮಾಡಿದೆ. ಮತ್ತೊಂದು ಕಡೆಯಲ್ಲಿ ಏನೆಲ್ಲಾ ಸರ್ಕಸ್ ಮಾಡಿ ಮತದಾರರ ಮನಸ್ಸು ಗೆಲ್ಲಲು ಪ್ರಯತ್ನ ಮಾಡಿದರೂ ಅದು ಫಲ ನೀಡಲೇ ಇಲ್ಲ ವಿಪಕ್ಷಗಳಿಗೆ. ಹಾಗಾದರೆ ಬಿಹಾರದಲ್ಲಿ ವಿರೋಧ ಪಕ್ಷಗಳು ಹೀನಾಯವಾಗಿ ಸೋಲಲು ಕಾರಣ ಏನು?
ಬಿಹಾರ ವಿಧಾನಸಭೆ ಚುನಾವಣೆ 2025 ಫಲಿತಾಂಶ ಪ್ರಕಟಣೆ ಶುರುವಾಗಿದ್ದು, ಎನ್ಡಿಎ ಹಾಗೂ ಮಹಾಘಟ್ ಬಂಧನ್ ನಡುವೆ ಜಿದ್ದಾಜಿದ್ದಿ ಜೋರಾಗಿತ್ತು. ಬಿಹಾರ ವಿಧಾನಸಭೆ ಚುನಾವಣೆ 2025ರ ಚುನಾವಣೋತ್ತರ ಸಮೀಕ್ಷೆಗಳು ಈಗಾಗಲೇ ಎನ್ಡಿಎ ಗೆಲುವು ಗ್ಯಾರಂಟಿ ಅಂತಾ ಹೇಳಿದ್ದರೂ, ಆರಂಭಿಕ ಹಂತದಲ್ಲೇ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿತ್ತು. ಆದರೆ ಆ ನಂತರ ಅಂತಿಮವಾಗಿ ಬಿಹಾರ ವಿಧಾನಸಭೆ ಚುನಾವಣೆ 2025 ರಿಸಲ್ಟ್ ಪೂರ್ತಿ ಎನ್ಡಿಎ ಪರವಾಗಿಯೇ ತಿರುಗಿಬಿಟ್ಟಿದೆ. ಈ ಮೂಲಕ ಮತ್ತೊಮ್ಮೆ ದಾಖಲೆ ಬರೆಯಲು ಬಿಜೆಪಿ ಮತ್ತು ಜೆಡಿಯು ಸಜ್ಜಾಗಿವೆ. ಆದರೆ ಹೀಗೆ ಹೀನಾಯವಾಗಿ ವಿರೋಧ ಪಕ್ಷಗಳು ಸೋಲು ಕಂಡಿದ್ದು ಏಕೆ?

ಸಮೀಕ್ಷೆಗಳ ಮಾತು ನಿಜವಾಯ್ತು!
ಬಿಹಾರ ವಿಧಾನಸಭೆಯಲ್ಲಿ ಒಟ್ಟು 243 ಸ್ಥಾನ ಇದ್ದು, ಈ 243 ಸ್ಥಾನಗಳಿಗೆ 2 ಹಂತದಲ್ಲಿ ಮತದಾನ ನಡೆಸಲಾಗಿತ್ತು. 3-4 ತಿಂಗಳಿಂದ ಚುನಾವಣೆ ಪ್ರಚಾರ ಸಭೆಗಳಲ್ಲಿ ಭಾರಿ ಆರೋಪ & ಪ್ರತ್ಯಾರೋಪ ಸೇರಿ ಮತದಾರರನ್ನ ಸೆಳೆಯುವ ತಂತ್ರಗಳೇ ಬಿಹಾರದಲ್ಲಿ ಸೌಂಡ್ ಮಾಡಿದ್ದವು. ಕೊನೆಗೆ ಅದಕ್ಕೆಲ್ಲ ತೆರೆಬಿದ್ದು ಮತದಾನ ಮುಕ್ತಾಯ ಆಗುತ್ತಿದ್ದಂತೆ ಹೊರ ಬಿದ್ದಿದ್ದ ಚುನಾವಣೋತ್ತರ ಸಮೀಕ್ಷೆಗಳು ಎನ್ಡಿಎ ಗೆಲುವಿನ ಬಗ್ಗೆ ಭವಿಷ್ಯ ನುಡಿದಿದ್ದವು. ಇದೀಗ ಅದೇ ನಿಜವಾಗುತ್ತಿದ್ದು, ವಿಪಕ್ಷಗಳಿಗೆಲ್ಲಾ ದೊಡ್ಡ ಆಘಾತ ಎದುರಾಗುತ್ತಿದೆ.
ಸಿಎಂ ಸ್ಥಾನ ಯಾರಿಗೆ ಸಿಗಲಿದೆ?
ಬಿಹಾರದಲ್ಲಿ ಅಧಿಕಾರ ಉಳಿಸಿಕೊಳ್ಳಲು ಬಿಜೆಪಿ ಸಿಎಂ ಸ್ಥಾನವನ್ನು ತ್ಯಾಗ ಮಾಡುತ್ತಲೇ ಬಂದಿದೆ. ಬಿಜೆಪಿ ಪಾಲಿಗೆ ಸಿಎಂ ಸ್ಥಾನ ಸಿಗುವ ಸಾಧ್ಯತೆ ತೀರಾ ಕಡಿಮೆ ಎನ್ನಲಾಗುತ್ತಿದೆ. ಇದೇ ವಿಚಾರಕ್ಕೆ ಇದೀಗ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಜೊತೆಗೆ ಕಿರಿಕ್ ಆಗಲಿದೆ ಎಂಬ ಸುದ್ದಿ ಹಬ್ಬಿದೆ. ಹಾಗೇ ಮುಂದಿನ ದಿನಗಳಲ್ಲಿ ನಿತೀಶ್ ಕುಮಾರ್ ಅವರನ್ನು ಕೆಳಗೆ ಇಳಿಸುವ ಪ್ರಯತ್ನ ಆಗುತ್ತಾ? ಎಂಬ ಚರ್ಚೆ ಕೂಡ ಜೋರಾಗಿದೆ. ಇಷ್ಟೆಲ್ಲದರ ನಡುವೆ ಇದೀಗ ಸರ್ಕಾರ ರಚನೆ ಮಾಡೋದಕ್ಕೆ ಎನ್ಡಿಎ ಮಿತ್ರ ಪಕ್ಷಗಳು ಸಜ್ಜಾಗಿವೆ. ಇದೆಲ್ಲವನ್ನೂ ಮೀರಿ ಬಿಹಾರ ವಿಧಾನಸಭೆ ಚುನಾವಣೆಯ ಅಖಾಡದಲ್ಲಿ ದೊಡ್ಡ ಹೆಸರು ಮಾಡಿದೆ ಎನ್ಡಿಎ ಮೈತ್ರಿಕೂಟ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications