Bihar Results: ಬಿಹಾರ ವಿಧಾನಸಭೆ ಅತಂತ್ರ? ಕುದುರೆ ವ್ಯಾಪಾರ ನಡೆಯುತ್ತಾ?
ಬಿಹಾರ ವಿಧಾನಸಭೆ ಚುನಾವಣೆ 2025 ಫಲಿತಾಂಶ ಪ್ರಕಟಣೆ ಶುರುವಾಗಿದ್ದು, ಎನ್ಡಿಎ ಹಾಗೂ ಮಹಾಘಟ್ ಬಂಧನ್ ನಡುವೆ ಜಿದ್ದಾಜಿದ್ದಿ ಜೋರಾಗಿದೆ. ಬಿಹಾರ ವಿಧಾನಸಭೆ ಚುನಾವಣೆ 2025ರ ಚುನಾವಣೋತ್ತರ ಸಮೀಕ್ಷೆಗಳು ಈಗಾಗಲೇ ಎನ್ಡಿಎ ಗೆಲುವು ಗ್ಯಾರಂಟಿ ಅಂತಾ ಹೇಳಿದ್ದರೂ, ಆರಂಭಿಕ ಹಂತದಲ್ಲೇ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ. ಹೀಗಿದ್ದಾಗ ಬಿಹಾರ ವಿಧಾನಸಭೆ ಅತಂತ್ರ? ಕುದುರೆ ವ್ಯಾಪಾರ ನಡೆಯುತ್ತಾ?
ದೇಶದಲ್ಲೇ ಬಿಹಾರ ವಿಧಾನಸಭೆ ಚುನಾವಣೆ ಸಿಕ್ಕಾಪಟ್ಟೆ ಗಮನ ಸೆಳೆದ ರಾಜಕೀಯ ಬೆಳವಣಿಗೆ. ಬಿಹಾರ ಚುನಾವಣೆಯಲ್ಲಿ ಗೆಲುವು ಪಡೆಯಲು ಎನ್ಡಿಎ & ವಿಪಕ್ಷಗಳ ನಾಯಕರು ಭರ್ಜರಿ ಪ್ರಚಾರ ನಡೆಸಿದ್ರು. ಬಿಹಾರದಲ್ಲಿ ಈ ಬಾರಿ ಚುನಾವಣೆ ಗೆದ್ದು, ಅಧಿಕಾರ ಹಿಡಿಯುವುದು ಅಲ್ಲಿನ ಪಕ್ಷಗಳಿಗೆ ಪ್ರತಿಷ್ಠೆ ಆಗಿತ್ತು. ಯಾರಿಗೆ ಗೆಲುವು? ಯಾರಿಗೆ ಸೋಲು? ಎಂಬ ಲೆಕ್ಕಾಚಾರದ ನಡುವೆಯೇ ಇಂದು ಚುನಾವಣೆ ಫಲಿತಾಂಶ ಹೊರ ಬೀಳುತ್ತಿದೆ, ಆದರೆ ಆರಂಭಿಕ ಹಂತದಲ್ಲೇ ಬಿಹಾರದಲ್ಲಿ ಎನ್ಡಿಎ ಹಾಗೂ ಮಹಾಘಟ್ ಬಂಧನ್ ನಡುವೆ ಭಾರಿ ದೊಡ್ಡ ಹೋರಾಟವು ಶುರು ಆಗಿದೆ.

ಅತಂತ್ರ ವಿಧಾನಸಭೆ ಸೃಷ್ಟಿ ಗ್ಯಾರಂಟಿ?
ಬಿಹಾರದ ಈ ಎಲೆಕ್ಷನ್ ಲೋಕಸಭೆ ಚುನಾವಣೆ ಬಳಿಕ ಅತಿಹೆಚ್ಚು ಕುತೂಹಲ ಕೆರಳಿಸಿತ್ತು. ಹಲವು ವರ್ಷಗಳಿಂದಲೂ ನಿತೀಶ್ ಕುಮಾರ್ ಸಿಎಂ ಆಗಿದ್ದು, ಸಾಲು ಸಾಲು ಜಯ ಕಂಡರೂ ಬಿಹಾರದಲ್ಲಿ ಆಡಳಿತ ವಿರೋಧಿ ಅಲೆ ಇದೆ ಎಂಬುದು ವಿರೋಧ ಪಕ್ಷಗಳ ನಾಯಕರ ಆರೋಪ. ಇಷ್ಟೆಲ್ಲಾ ಒತ್ತಡ ಹಾಗೂ ಹೋರಾಟದ ನಡುವೆ ಎನ್ಡಿಎ ಮೈತ್ರಿಕೂಟ ಮತ್ತೆ ಗೆದ್ದು ಬೀಗುವ ನಿರೀಕ್ಷೆಯಲ್ಲೇ ಇತ್ತು. ಹೀಗಿದ್ದಾಗ ಆರಂಭಿಕ ಹಂತದಲ್ಲೇ ದೊಡ್ಡ ತಲ್ಲಣ ಸೃಷ್ಟಿಯಾಗಿದೆ. ಬಿಹಾರದಲ್ಲಿ ಅತಂತ್ರವಾಗಿ ವಿಧಾನಸಭೆಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಯಾಗುತ್ತಾ? ಎಂಬ ಚರ್ಚೆ ಆರಂಭಿಕ ಹಂತದಲ್ಲೇ ಶುರುವಾಗಿದೆ.
ಸಿಎಂ ಸ್ಥಾನ ಯಾರಿಗೆ ಸಿಗಲಿದೆ?
ಬಿಹಾರದಲ್ಲಿ ಅಧಿಕಾರ ಉಳಿಸಿಕೊಳ್ಳಲು ಬಿಜೆಪಿ ಸಿಎಂ ಸ್ಥಾನವನ್ನು ತ್ಯಾಗ ಮಾಡುತ್ತಲೇ ಬಂದಿದೆ. ಬಿಜೆಪಿ ಪಾಲಿಗೆ ಸಿಎಂ ಸ್ಥಾನ ಸಿಗುವ ಸಾಧ್ಯತೆ ತೀರಾ ಕಡಿಮೆ ಎನ್ನಲಾಗುತ್ತಿದೆ. ಇದೇ ವಿಚಾರಕ್ಕೆ ಇದೀಗ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಜೊತೆಗೆ ಕಿರಿಕ್ ಆಗಲಿದೆ ಎಂಬ ಸುದ್ದಿ ಹಬ್ಬಿದೆ. ಹಾಗೇ ಮುಂದಿನ ದಿನಗಳಲ್ಲಿ ನಿತೀಶ್ ಕುಮಾರ್ ಅವರನ್ನು ಕೆಳಗೆ ಇಳಿಸುವ ಪ್ರಯತ್ನ ಆಗುತ್ತಾ? ಎಂಬ ಚರ್ಚೆ ಕೂಡ ಜೋರಾಗಿದೆ. ಇಷ್ಟೆಲ್ಲದರ ನಡುವೆ ಇದೀಗ ಸರ್ಕಾರ ರಚನೆ ಮಾಡೋದಕ್ಕೆ ಎನ್ಡಿಎ ಮಿತ್ರ ಪಕ್ಷಗಳು ಸಜ್ಜಾಗಿವೆ. ಇದೆಲ್ಲವನ್ನೂ ಮೀರಿ ಬಿಹಾರ ವಿಧಾನಸಭೆ ಚುನಾವಣೆಯ ಅಖಾಡದಲ್ಲಿ ದೊಡ್ಡ ಹೆಸರು ಮಾಡಿದೆ ಎನ್ಡಿಎ ಮೈತ್ರಿಕೂಟ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications