ಬಿಹಾರ ವಿಧಾನಸಭೆ ಚುನಾವಣೆ: 12 ಕ್ಯಾಬಿನೆಟ್ ಸಚಿವರು ಕಣದಲ್ಲಿ, 1,302 ಅಭ್ಯರ್ಥಿಗಳು
Bihar Assembly Elections 2025: ಬಿಹಾರ ವಿಧಾನಸಭೆ ಚುನಾವಣೆ ರಂಗೇರಿದೆ. ಎರಡನೇ ಹಾಗೂ ಅಂತಿಮ ಹಂತದ ಬಿಹಾರ ವಿಧಾನಸಭೆ ಚುನಾವಣೆ 2025 ಮಂಗಳವಾರ ನಡೆಯುತ್ತಿದ್ದು, ಇಂದಿನ (ನವೆಂಬರ್ 11)ಚುನಾವಣೆಯಲ್ಲಿ ಬಿಹಾರದ 12 ಕ್ಯಾಬಿನೆಟ್ ಸಚಿವರ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ದೆಹಲಿಯ ಬಾಂಬ್ ಸ್ಫೋಟ ಪ್ರಕರಣದ ಹಿನ್ನೆಲೆಯಲ್ಲಿ ಭಾರೀ ಭದ್ರತೆಯ ನಡುವೆ ಚುನಾವಣೆ ನಡೆಯುತ್ತಿದೆ. ಇಲ್ಲಿನ ಪೂರ್ವ ಚಂಪಾರಣ್ನಲ್ಲಿ ಬಿಹಾರ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಮುನ್ನಾದಿನದಂದು ಚುನಾವಣಾ ಅಧಿಕಾರಿಗಳು ಇವಿಎಂಎಸ್ಗಳನ್ನು ಸಂಗ್ರಹಿಸಿದ್ದರು.
ಮಂಗಳವಾರ ಎರಡನೇ ಹಂತದ ಚುನಾವಣೆಗಳು ನಡೆಯುತ್ತಿದ್ದು, ಇಂದು 1,302 ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧಾರವಾಗಲಿದೆ. ಅವರಲ್ಲಿ 12 ಕ್ಯಾಬಿನೆಟ್ ಸಚಿವರು, ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ರಾಜೇಶ್ ರಾಮ್, ಮಾಜಿ ಉಪ ಮುಖ್ಯಮಂತ್ರಿ ಮತ್ತು 30 ಮಾಜಿ ಸಚಿವರು ಸಹ ಸೇರಿದ್ದಾರೆ ಎನ್ನುವುದು ವಿಶೇಷ. ನವೆಂಬರ್ 6 ರಂದು ನಡೆದ ಮೊದಲ ಹಂತದಲ್ಲಿ ದಾಖಲೆಯ 65% ಮತದಾನ ನಡೆದಿತ್ತು. ಎರಡನೇ ಹಂತದಲ್ಲೂ ಹೆಚ್ಚು ಪ್ರಮಾಣದ ಮತದಾನ ನಡೆಯಲಿದೆ ಎಂದು ನಿರೀಕ್ಷಿಸಲಾಗಿದೆ. ಇಂದು 45,399 ಕೇಂದ್ರಗಳಲ್ಲಿ ಮತದಾನ ನಡೆಯುತ್ತಿದ್ದು, 3.7 ಕೋಟಿಗೂ ಹೆಚ್ಚು ಮತದಾರರು ಮತದಾರರ ಪಟ್ಟಿಯಲ್ಲಿದ್ದಾರೆ.

ಬಿಹಾರ ವಿಧಾನಸಭೆ ಚುನಾವಣೆ ಪ್ರಾರಂಭಕ್ಕೂ ಮುಂಚೆ ಭಾರೀ ಹೈಡ್ರಾಮಾ ನಡೆದಿತ್ತು. ಮತದಾರರ ಪಟ್ಟಿ ಪರಿಷ್ಕರಣೆ ಸೇರಿದಂತೆ ಹಲವು ವಿಚಾರಗಳು ಭಾರೀ ಚರ್ಚೆಗೆ ಕಾರಣವಾಗಿತ್ತು. ಇದೀಗ ಅಂತಿಮವಾಗಿ ಅಂತಿಮ ಹಂತದ ಚುನಾವಣೆ ಪ್ರಕ್ರಿಯೆ ನಡೆಯುತ್ತಿದೆ. ಮುಖ್ಯ ಚುನಾವಣಾ ಅಧಿಕಾರಿ ವಿನೋದ್ ಸಿಂಗ್ ಗುಂಜಿಯಾಲ್ ಅವರು 20 ಜಿಲ್ಲೆಗಳಲ್ಲಿ ಎಲ್ಲಾ ಸಿದ್ಧತೆಗಳೊಂದಿಗೆ ಮತದಾನ ನಡೆಯಲಿದೆ ಎಂದಿದ್ದಾರೆ. 122 ಕ್ಷೇತ್ರಗಳಲ್ಲಿ ನಿಯೋಜಿಸಲಾದ ತಂಡಗಳಿಗೆ ಇವಿಎಂಗಳು ಮತ್ತು ವಿವಿಪಿಎಟಿ ಘಟಕಗಳನ್ನು ಎಲ್ಲಾ ಪರಿಶೀಲನೆಯ ನಂತರ ಹಂಚಲಾಗಿದೆ.
ಪ್ರಮುಖ ಆರು ಬಿಜೆಪಿ ಸಚಿವರು ಸ್ಪರ್ಧಾ ಕಣದಲ್ಲಿದ್ದಾರೆ. ಪ್ರೇಮ್ ಕುಮಾರ್ (ಗಯಾ ಟೌನ್), ರೇಣು ದೇವಿ (ಬೆಟ್ಟಿಯಾ), ನಿತೀಶ್ ಮಿಶ್ರಾ (ಝಂಝರ್ಪುರ್), ವಿಜಯ್ ಕುಮಾರ್ ಮಂಡಲ್ (ಸಿಕ್ತಿ), ಕೃಷ್ಣ ನಂದನ್ ಪಾಸ್ವ್ (ಹರ್ಸಿದ್ಧಿ ಸಿಂಗ್). ಸಿಪಿಐ(ಎಂಎಲ್) ಲಿಬರೇಶನ್ನ ಮೆಹಬೂಬ್ ಆಲಂ ಮತ್ತು ಕಾಂಗ್ರೆಸ್ನ ಶಕೀಲ್ ಅಹ್ಮದ್ ಖಾನ್ ಹಲವರ ರಾಜಕೀಯ ಭವಿಷ್ಯ ಇಂದು ನಿರ್ಧಾರವಾಗಲಿದೆ. ಕತಿಹಾರ್ನಿಂದ ಮಾಜಿ ಉಪ ಮುಖ್ಯಮಂತ್ರಿ ತಾರ್ ಕಿಶೋರ್ ಪ್ರಸಾದ್ ಅವರು ಐದನೇ ಬಾರಿ ಗೆಲುವಿನ ಹಾದಿಯಲ್ಲಿದ್ದಾರೆ.
ಎನ್ಡಿಎ ಸಣ್ಣ ಮಿತ್ರಪಕ್ಷಗಳಿಗೆ ಇದು ಸವಾಲಿನ ಚುನಾವಣೆಯಾಗಿದೆ. ಅಲ್ಲದೇ ಇಂಡಿಯಾ ಮೈತ್ರಿ ಕೂಟಕ್ಕೂ ಇದು ಸುಲಭವಾಗಿಲ್ಲ ಎಂದು ಹೇಳಲಾಗುತ್ತಿದೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications