ಬಿಹಾರ ವಿಧಾನಸಭೆ ಚುನಾವಣೆ: ಅಚ್ಚರಿಯ ಹೇಳಿಕೆ ನೀಡಿದ ಪ್ರಿಯಾಂಕಾ ಗಾಂಧಿ ವಾದ್ರಾ!
ಬಿಹಾರ ವಿಧಾನಸಭೆ ಚುನಾವಣೆ 2025ರ ಮೊದಲ ಹಂತದ ಮತದಾನ ಬಿರುಸಿನಿಂದ ನಡೆದಿದ್ದು. ಈ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕಿ ಹಾಗೂ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಅಚ್ಚರಿಯ ಹೇಳಿಕೆಯನ್ನು ನೀಡಿದ್ದಾರೆ. ಬಿಹಾರ ವಿಧಾನಸಭೆ ಚುನಾವಣೆಗೆ ಒಂದು ದಿನ ಬಾಕಿ ಇರುವಾಗ ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಅಂದಾಜು 25 ಲಕ್ಷ ಮತಗಳ್ಳತನ ಆಗಿದೆ ಎಂದು ಕಾಂಗ್ರೆಸ್ ನಾಯಕ ಹಾಗೂ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ದೂರಿದ್ದರು. ದಾಖಲೆಗಳ ಸಹಿತ ಅವರು ಪತ್ರಿಕಾಗೋಷ್ಠಿ ಮಾಡಿದ್ದರು. ಇದೀಗ ಪ್ರಿಯಾಂಕಾ ಗಾಂಧಿ ಅವರು ಸಹ ಚುನಾವಣೆ ಮುಕ್ತಾಯಕ್ಕೂ ಮುಂಚೆಯೇ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಈ ಹೇಳಿಕೆಯನ್ನು ನೋಡಿದರೆ ಬಿಹಾರ ವಿಧಾನಸಭೆ ಚುನಾವಣೆ ನಡೆಯುತ್ತಿರುವ ಬಗ್ಗೆ ಪ್ರಿಯಾಂಕಾ ಗಾಂಧಿ ಅವರು ಪರೋಕ್ಷವಾಗಿ ಅನುಮಾನ ವ್ಯಕ್ತಪಡಿಸುತ್ತಿರುವಂತೆಯೂ ಇದೆ. ಆದರೆ ಅವರು ಈ ಕುರಿತು ನಿರ್ದಿಷ್ಟವಾಗಿ ಏನನ್ನೂ ಹೇಳಿಲ್ಲ. ಅಲ್ಲದೇ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಮಿತ್ರ ಪಕ್ಷಗಳು ಗೆಲ್ಲುವ ಭರವಸೆಯನ್ನೂ ಅವರು ವ್ಯಕ್ತಪಡಿಸಿದ್ದಾರೆ. ಹಾಗಾದರೆ ಬಿಹಾರ ವಿಧಾನಸಭೆ ಚುನಾವಣೆ ಹಾಗೂ ಫಲಿತಾಂಶದ ಬಗ್ಗೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಹೇಳಿದ್ದೇನು ಎನ್ನುವ ವಿವರ ನೋಡೋಣ.

ಬಿಹಾರ ವಿಧಾನಸಭೆ ಚುನಾವಣೆಯನ್ನ ಮುಕ್ತ ಮತ್ತು ನ್ಯಾಯಸಮ್ಮತವಾಗಿ ನಡೆಸಿದ್ದೇ ಆದರೆ ಎನ್ಡಿಎ ಸರ್ಕಾರವು ಪತನವಾಗುವುದು ನಿಶ್ಚಿತ ಎಂದು ಅವರು ಹೇಳಿದ್ದಾರೆ. ಬಿಹಾರದಲ್ಲಿ ಎರಡು ಹಂತದಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿದೆ. ನವೆಂಬರ್ 06 ಗುರುವಾರದಂದು ಮೊದಲ ಹಂತದ ವಿಧಾನಸಭೆ ಚುನಾವಣೆ ನಡೆದಿದೆ. ಬಿಹಾರದಲ್ಲಿ ಎರಡನೇ ಹಂತದ ವಿಧಾನಸಭೆ ಚುನಾವಣೆ ಪ್ರದೇಶದಲ್ಲಿ ಆಯೋಜಿಸಲಾಗಿದ್ದ ಚುನಾವಣಾ ಸಮಾವೇಶದಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಮಾತನಾಡಿದ್ದಾರೆ.
ಬಿಹಾರದಲ್ಲಿ ಬಡವರು, ದಲಿತರು, ಮಹಿಳೆಯರು ಹಾಗೂ ಯುವಜನರನ್ನು ಒಳಗೊಂಡಿರುವ ಹಾಗೂ ಜನಪರ ಕೆಲಸ ಮಾಡುವ ಸರ್ಕಾರವನ್ನು ನಾವು ರಚನೆ ಮಾಡಲಿದ್ದೇವೆ ಎಂದು ಜನರಿಗೆ ಅವರು ಭರವಸೆ ನೀಡಿದ್ದಾರೆ. ದೇಶದ ಅಭಿವೃದ್ಧಿಗಾಗಿ ಅಪಾರ ಕೊಡುಗೆ ನೀಡಿರುವ ಬಿಹಾರದ ಜನರ ಬಗ್ಗೆ ಎನ್ಡಿಎ ಸರ್ಕಾರಕ್ಕೆ ಸ್ವಲ್ಪವೂ ಗೌರವವಿಲ್ಲ ಎಂದು ಅವರು ಬಿಜೆಪಿ ಹಾಗೂ ಮಿತ್ರಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮುಂದುವರಿದು ಬಿಹಾರದಲ್ಲಿ ಅಭಿವೃದ್ಧಿಯ ಬದಲಾಗಿ ಧರ್ಮದ ಆಧಾರದ ಮೇಲೆ ಮತ ಚಲಾಯಿಸುವಂತೆ ಜನರನ್ನು ಒತ್ತಾಯಿಸುತ್ತಿದ್ದಾರೆ. ಬಿಹಾರದಲ್ಲಿ ಕಳೆದ ಮೂರು ವರ್ಷಗಳ ಅವಧಿಯಲ್ಲಿ ಬರೋಬ್ಬರಿ 27 ಸೇತುವೆಗಳು ಕುಸಿದಿವೆ. ಈ ರಾಜ್ಯದಲ್ಲಿನ ಕಳಪೆ ಮೂಲಸೌಕರ್ಯವೇ ಇದಕ್ಕೆ ಕಾರಣ ಎಂದು ಅವರು ದೂರಿದ್ದಾರೆ. ಬಿಹಾರದಲ್ಲಿ ಕಳಪೆ ಮೂಲಸೌಕರ್ಯವು ಮಿತಿ ಮೀರಿದೆ ಎಂದು ಅವರು ಹೇಳಿದ್ದಾರೆ.
-
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ












Click it and Unblock the Notifications