ಬಿಹಾರದಲ್ಲಿ ಶಿಕ್ಷಕರ ಹುದ್ದೆಗೆ ನೇಮಕಾತಿ: ತೀವ್ರಗೊಂಡ ಪ್ರತಿಭಟನೆ, ಬಿಜೆಪಿ ಮುಖಂಡನ ಹತ್ಯೆ
ಪಾಟ್ನಾ, ಜುಲೈ. 13: ರಾಜ್ಯದಲ್ಲಿ ಶಿಕ್ಷಕರ ಹುದ್ದೆಗೆ ಸಂಬಂಧಿಸಿದಂತೆ ಬಿಹಾರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಪಾಟ್ನಾ ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ. ಈ ವೇಳೆ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕರೊಬ್ಬರು ಮೃತಪಟ್ಟಿದ್ದಾರೆ. ವಿವರಗಳ ಪ್ರಕಾರ, ಮೃತರನ್ನು ಬಿಜೆಪಿ ಮುಖಂಡ ವಿಜಯ್ ಕುಮಾರ್ ಸಿಂಗ್ ಎಂದು ಗುರುತಿಸಲಾಗಿದೆ.
ರಾಜ್ಯದಲ್ಲಿ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ ನಗರದ ದಕ್ಬಂಗ್ಲಾ ಚೌರಾಹಾದಲ್ಲಿ ಸಾವನ್ನಪ್ಪಿದ್ದಾರೆ. ಲಾಠಿಚಾರ್ಜ್ನಲ್ಲಿ ಗಾಯಗೊಂಡಿದ್ದ ವಿಜಯ್ ಕುಮಾರ್ ಸಿಂಗ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಅವರು ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಈ ಮಾಹಿತಿಯನ್ನು ರಾಜ್ಯಸಭಾ ಸಂಸದ ಸುಶೀಲ್ ಮೋದಿ ದೃಢಪಡಿಸಿದ್ದು, ಟ್ವಿಟರ್ನಲ್ಲಿ ಬಿಜೆಪಿ ನಾಯಕ ಮೃತಪಟ್ಟಿದ್ದಾರೆ ಎಂದು ಹೇಳಿದ್ದಾರೆ.

'ವಿಧಾನಸಭಾ ಮಾರ್ಚ್' ನಡೆಸುತ್ತಿದ್ದ ವೇಳೆ ಬಿಜೆಪಿ ಮುಖಂಡರ ಮೇಲೆ ಲಾಠಿಚಾರ್ಜ್ ಮಾಡಲಾಗಿದೆ. ಬಿಜೆಪಿ ಕಾರ್ಯಕರ್ತರನ್ನು ಚದುರಿಸಲು ಭದ್ರತಾ ಸಿಬ್ಬಂದಿ ಜಲಫಿರಂಗಿ ಮತ್ತು ಅಶ್ರುವಾಯು ಪ್ರಯೋಗಿಸಿದ್ದಾರೆ. ಘಟನೆಯ ನಂತರ ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಅವರು ಟ್ವಿಟರ್ನಲ್ಲಿ "ಪಾಟ್ನಾದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್ ಮಾಡಿರುವುದು ರಾಜ್ಯ ಸರ್ಕಾರದ ವೈಫಲ್ಯ ಮತ್ತು ಅದಕ್ಷತೆಯ ಪರಿಣಾಮವಾಗಿದೆ" ಎಂದು ಹೇಳಿದ್ದಾರೆ.
#WATCH | Patna: Security personnel use several rounds of tear gas shells to disperse BJP workers protesting against Bihar govt pic.twitter.com/4zKcFh0TH7
— ANI (@ANI) July 13, 2023
"ಭ್ರಷ್ಟಾಚಾರದ ಕೋಟೆಯನ್ನು ರಕ್ಷಿಸುವ ಸಲುವಾಗಿ ಮಹಾಘಟಬಂಧನ್ (ಮಹಾಮೈತ್ರಿಕೂಟ) ಸರ್ಕಾರವು ಪ್ರಜಾಪ್ರಭುತ್ವದ ಮೇಲೆ ದಾಳಿ ಮಾಡುತ್ತಿದೆ. ಬಿಹಾರದ ಮುಖ್ಯಮಂತ್ರಿ ಆರೋಪ ಎದುರಿಸುತ್ತಿರುವ ವ್ಯಕ್ತಿಯನ್ನು ರಕ್ಷಿಸಲು ಸ್ವಂತ ನೈತಿಕತೆಯನ್ನು ಮರೆತಿದ್ದಾರೆ" ಎಂದು ಜೆಪಿ ನಡ್ಡಾ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಇದೇ ವೇಳೆ ಬಿಹಾರ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದ್ದು, ಮುಂದಿನ ವಾರದವರೆಗೆ ಶಿಕ್ಷಣ ಇಲಾಖೆ ಅಧಿಕಾರಿಗಳ ರಜೆಗಳ ಮೇಲೆ ನಿಷೇಧ ಹೇರಿ ಆದೇಶ ಹೊರಡಿಸಿದ್ದಾರೆ. ಜಿಲ್ಲಾ ಶಿಕ್ಷಣಾಧಿಕಾರಿಗಳು, ಜಿಲ್ಲಾ ಕಾರ್ಯಕ್ರಮ ಅಧಿಕಾರಿಗಳು ಮತ್ತು ಇತರ ಅಧಿಕಾರಿಗಳ ರಜೆಗಳನ್ನು ಅಮಾನತುಗೊಳಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಇದಲ್ಲದೆ, ಶಿಕ್ಷಣ ಇಲಾಖೆಯ ಅಧಿಕಾರಿಗಳು ವಿಶೇಷ ಸಂದರ್ಭಗಳಲ್ಲಿ ರಜೆ ಪಡೆಯಲು ಉಪ ಕಾರ್ಯದರ್ಶಿ ಕೆಕೆ ಪಾಠಕ್ ಅವರಿಂದ ಅನುಮತಿ ಪಡೆಯಬೇಕು ಎಂದು ಸೂಚಿಸಲಾಗಿದೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications