ಬಿಹಾರ ಉಪಚುನಾವಣೆ: ಬಿಜೆಪಿ ಪರ ಪ್ರಚಾರ ಎಂದ ಚಿರಾಗ್ ಪಾಸ್ವಾನ್
ಪಾಟ್ನಾ, ಅ.30: ಬಿಹಾರದಲ್ಲಿ ಮುಂದಿನ ವಾರ ನಡೆಯಲಿರುವ ಒಂದೆರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸುವುದಾಗಿ ಲೋಕ ಜನಶಕ್ತಿ ಪಕ್ಷದ (ರಾಮ್ ವಿಲಾಸ್) ಮುಖ್ಯಸ್ಥ ಚಿರಾಗ್ ಪಾಸ್ವಾನ್ ಘೋಷಿಸಿದ್ದಾರೆ.
ದೆಹಲಿಯಿಂದ ಬಿಹಾರಕ್ಕೆ ಆಗಮಿಸಿದ ಚಿರಾಗ್ ಪಾಸ್ವಾನ್ ಅವರು ಪಾಟ್ನಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಮೊಕಾಮಾ ಮತ್ತು ಗೋಪಾಲ್ಗಂಜ್ನಲ್ಲಿ ಬಿಜೆಪಿಯ ಅಭ್ಯರ್ಥಿಗಳ ಪರ ಪ್ರಚಾರ ಮಾಡುವುದಾಗಿ ಹೇಳಿದ್ದಾರೆ. ಈ ಕ್ಷೇತ್ರಗಳಲ್ಲಿ ಆರ್ಜೆಡಿ ಮತ್ತು ಬಿಜೆಪಿ ನಡುವೆ ತೀವ್ರ ಸ್ಪರ್ಧೆಯಿದೆ.
ಎರಡು ತಿಂಗಳ ಹಿಂದೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಎನ್ಡಿಎಯನ್ನು ಬಿಟ್ಟು ಆರ್ಜೆಡಿ, ಕಾಂಗ್ರೆಸ್ ಜೊತೆಗೆ ಸೇರಿದ್ದಾರೆ. ಹೀಗಾಗಿ ರಾಜ್ಯದಲ್ಲಿ ದುರ್ಬಲಗೊಂಡಿರುವ ಬಿಜೆಪಿಗೆ ಉಪಚುನಾವಣೆ ಮೊದಲ ಶಕ್ತಿ ಪರೀಕ್ಷೆ ಎಂದು ಪರಿಗಣಿಸಲಾಗಿದೆ.

ಇನ್ನು, ಲೋಕ ಜನಶಕ್ತಿ ಪಕ್ಷ(ರಾಮ್ ವಿಲಾಸ್) ದ ನಾಯಕ ಚಿರಾಗ್ ಪಾಸ್ವಾನ್, ಗುಜರಾತ್ ಮತ್ತು ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಸ್ಪರ್ಧಿಸಲಿದೆ ಎಂದು ಘೋಷಿಸಿದ್ದಾರೆ.
ಎರಡು ರಾಜ್ಯಗಳಲ್ಲಿ ಸ್ಪರ್ಧಿಸುವ ಸ್ಥಾನಗಳ ಬಗ್ಗೆ ಪಕ್ಷವು ಇನ್ನೂ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಪಾಸ್ವಾನ್ ಹೇಳಿದ್ದು, ಈ ಸಂಬಂಧ ಸರ್ವಾನುಮತದಿಂದ ನಿರ್ಣಯವನ್ನು ಅಂಗೀಕರಿಸಿದ ನಂತರ ಬಿಜೆಪಿ ಆಡಳಿತದ ಎರಡು ರಾಜ್ಯಗಳಲ್ಲಿ ಚುನಾವಣಾ ಕಣಕ್ಕೆ ಇಳಿಯುವ ನಿರ್ಧಾರವನ್ನು ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

''ಗುಜರಾತ್ ಮತ್ತು ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಲೋಕ ಜನಶಕ್ತಿ ಪಕ್ಷವು ನಿರ್ಧರಿಸಿದೆ. ಗುಜರಾತ್ನಲ್ಲಿ ಪಕ್ಷವು ಸ್ಪರ್ಧಿಸುವ ಸ್ಥಾನಗಳ ಸಂಖ್ಯೆ ಮತ್ತು ಅಭ್ಯರ್ಥಿಗಳ ಪಟ್ಟಿಯ ಕುರಿತು ನಾವು ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಚಿರಾಗ್ ಪಾಸ್ವಾನ್ ಹೇಳಿದ್ದಾರೆ.
-
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ












Click it and Unblock the Notifications