Bihar Caste Census: ಬಿಹಾರ ಜಾತಿ ಗಣತಿ ವರದಿ ಮಂಡನೆ, ಬಡತನ, ಅಂಕಿ-ಸಂಖ್ಯೆ ತಿಳಿಯಿರಿ
ನವದೆಹಲಿ, ನವೆಂಬರ್ 07: ಬಿಹಾರ ರಾಜ್ಯ ವಿಧಾನಸಭೆಯಲ್ಲಿ ಜಾತಿ ಸಮೀಕ್ಷೆಯ ವಿವರವಾದ ವರದಿ ಮಂಡಿಸಲಾಗಿದೆ. ಈ ವರದಿ ಪ್ರಕಾರ ರಾಜ್ಯದಲ್ಲಿ ವಾಸಿಸುವ ಮೂರನೇ ಒಂದು ಭಾಗಕ್ಕಿಂತ ಹೆಚ್ಚು ಕುಟುಂಬಗಳು ಬಡತನದಲ್ಲಿಯೇ ಬದುಕುತ್ತಿದ್ದಾರೆ. ಈ ಬಡಕುಟುಂಬಗಳು ಅತ್ಯಧಿಕ ಕಡಿಮೆ ಆದಾಯ ಗಳಿಸುತ್ತಿವೆ ಎಂಬುದು ಸೇರಿದಂತೆ ಹಲವು ಅಂಶಗಳು ಬಹಿರಂಗಗೊಂಡಿವೆ.
ಸಂಸದೀಯ ವ್ಯವಹಾರಗಳ ಸಚಿವ ವಿಜಯ್ ಕುಮಾರ್ ಚೌಧರಿ ಅವರು ಸಮೀಕ್ಷೆ ವರದಿ ಮಂಡಿಸಿದರು. ಬಿಹಾರದಲ್ಲಿ ಒಟ್ಟು ಜನಸಂಖ್ಯೆಯ ಮೂರನೇ ಒಂದು ಭಾಗದಲ್ಲಿ ಬಡವರಿದ್ದು, ಅವರು ಮಾಸಿಕ 6,000 ಅಥವಾ ಅದಕ್ಕಿಂತ ಕಡಿಮೆ ಆದಾಯವನ್ನು ಹೊಂದಿದ್ದಾರೆ ಎಂದು ಸಮೀಕ್ಷೆ ವರದಿ ತಿಳಿಸಿದೆ.

ಮೇಲು ಜಾತಿಗಳಲ್ಲಿ ಸಹ ಗಣನೀಯ ಬಡತನ ಇರುವುದು ಕಂಡು ಬಂದಿದೆ. ಆದರೆ ಬಡತನದ ಪ್ರಮಾಣ ಹಿಂದುಳಿದ ವರ್ಗಗಳು, ದಲಿತರು ಮತ್ತು ಬುಡಕಟ್ಟು ಜನಾಂಗದವರಲ್ಲಿ ನಿರೀಕ್ಷಿತಲೂ ಹೆಚ್ಚಾಗಿರುವುದು ವರದಿಯಿಂದ ಗೊತ್ತಾಗಿದೆ.
2.97 ಕೋಟಿ ಕುಟುಂಬಗಳಿರುವ ಬಿಹಾರ
ಬಿಹಾರ ರಾಜ್ಯದಲ್ಲಿ ಸುಮಾರು 2.97 ಕೋಟಿ ಕುಟುಂಬಗಳು ನೆಲೆಸಿವೆ. ಇದರಲ್ಲಿ 94 ಲಕ್ಷಕ್ಕಿಂತಲೂ ಅಧಿಕ ಜನರು ಅಂದರೆ ಶೇಕಡಾ 34.13ರಷ್ಟು ಮಂದಿ ಬಡವರಿದ್ದಾರೆ. ಮತ್ತೊಂದು ಪ್ರತ್ಯೇಕ ಸಂಶೋಧನೆ ಪ್ರಕಾರ, 50 ಲಕ್ಷಕ್ಕೂ ಹೆಚ್ಚು ಬಿಹಾರಿ ನಿವಾಸಿಗಳು ಬದುಕು ಕಟ್ಟಿಕೊಳ್ಳಲು ಉದ್ಯೋಗ ಅರಸಿ ಮತ್ತು ಉನ್ನತ ಶಿಕ್ಷಣಕ್ಕಾಗಿ ಬಿಹಾರದಿಂದ ಹೊರಗಿದ್ದಾರೆ.
ಇತರ ರಾಜ್ಯಗಳಲ್ಲಿ ಜೀವನ ಸಾಗಿಸುತ್ತಿರುವವರು ಸುಮಾರು 46 ಲಕ್ಷ ಬಿಹಾರಿ ಜನರಿದ್ದಾರೆ. ಇದರಲ್ಲಿ 2.17 ಲಕ್ಷ ಜನರು ವಿದೇಶಗಳಲ್ಲಿ ನೆಲೆ ಕಂಡು ಕೊಂಡವರಿದ್ದಾರೆ. ಬಿಹಾರ ಬಿಟ್ಟು ಅನ್ಯ ರಾಜ್ಯಗಳಲ್ಲಿ ಶಿಕ್ಷಣ (ವ್ಯಾಸಂಗ) ಪಡೆಯುತ್ತಿರುವವ ಸಂಖ್ಯೆ ಸರಿಸುಮಾರು 5.52 ಲಕ್ಷ, 27,000 ಮಂದಿ ವಿದೇಶದಲ್ಲಿ ಅಧ್ಯಯನ ಮಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಅ.2 ರಂದು ವರದಿ ಅಂಶಗಳು ಬಿಡುಗಡೆ
ಬಿಹಾರ ರಾಜ್ಯದ ಈ ಜಾತಿ ಸಮೀಕ್ಷೆಯ ಪ್ರಾಥಮಿಕ ಫಲಿತಾಂಶಗಳನ್ನು ಕಳೆದ ತಿಂಗಳು ಅಕ್ಟೋಬರ್ 2 ರಂದು ಬಿಡುಗಡೆ ಮಾಡಲಾಗಿತ್ತು. ಜಾತಿ ಗಣತಿ ನಡೆಸಲು ಕೇಂದ್ರ ಸರ್ಕಾರ ಹಿಂದೇಟು ಹಾಕುತ್ತಿದೆ ಎಂದು ಈ ಹಿಂದೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ವಾಗ್ದಾಳಿ ನಡೆಸಿದ್ದರು. ಅದರ ಪ್ರತಿಫಲವೆಂಬಂತೆ ಸರ್ಕಾರ ಸಮೀಕ್ಷೆಗೆ ಆದೇಶಿಸಿತ್ತು.
ರಾಜ್ಯದ ಒಟ್ಟು ಜನಸಂಖ್ಯೆಯ ಶೇಕಡಾ 60 ಕ್ಕಿಂತ ಹೆಚ್ಚು ಹಿಂದುಳಿದ ವರ್ಗಗಳು (ಒಬಿಸಿ) ಮತ್ತು ಅತ್ಯಂತ ಹಿಂದುಳಿದ ವರ್ಗದ (ಇಬಿಸಿ) ಜನರಿದ್ದಾರೆ ಎಂದು ಜಾತಿ ಗಣತಿಯ ಪ್ರಾಥಮಿಕ ಸಂಶೋಧನೆ ತಿಳಿಸಿವೆ. ಮೇಲ್ಜಾತಿಗಳ ಜನಸಂಖ್ಯೆ ಶೇಕಡಾ 10 ರಷ್ಟಿದೆ.
ಬಿಹಾರದ ಮೇಲುಜಾತಿಗಳಲ್ಲಿ ಬಡತನದ ಪ್ರಮಾಣವು ಶೇಕಡಾ 25 ಕ್ಕಿಂತ ಹೆಚ್ಚಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಅತ್ಯಂತ ಸುಸ್ಥಿತಿಯಲ್ಲಿರುವ ಹಿಂದೂ ಮೇಲ್ಜಾತಿಯವರು ಸಂಖ್ಯಾತ್ಮಕವಾಗಿ ಸಣ್ಣ ಸಣ್ಣ ಉದ್ಯೋಗ ಹೊಂದಿದ್ದಾರೆ. ಒಟ್ಟು ಶೇಕಡಾ 13.83 ಕುಟುಂಬಗಳು ಬಡತನದಲ್ಲಿವೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications