ಯುದ್ದಕ್ಕೆ ಮುನ್ನವೇ ಶರಣು: ಬಿಹಾರ ಸಿಎಂ ಮಾಂಝಿ ರಾಜೀನಾಮೆ
ಪಾಟ್ನಾ, ಫೆ 20: ಅತ್ಯಂತ ನಾಟಕೀಯ ಬೆಳವಣಿಗೆಯೊಂದರಲ್ಲಿ ಬಿಹಾರದ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ಶುಕ್ರವಾರ (ಫೆ 20) ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಸದನದಲ್ಲಿ ವಿಶ್ವಾಸಮತ ಸಾಬೀತು ಪಡಿಸುವ ಮುನ್ನವೇ ರಾಜ್ಯಪಾಲ ಕೇಸರಿನಾಥ ತ್ರಿಪಾಠಿಯವರನ್ನು ಭೇಟಿ ಮಾಡಿದ ಮಾಂಝಿ ತನ್ನ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಬಿಹಾರ ಅಸೆಂಬ್ಲಿಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ.
ತನ್ನನ್ನು ಬೆಂಬಲಿಸುತ್ತಿರುವ ಶಾಸಕರಿಗೆ ಜೀವಬೆದರಿಕೆ ಕರೆಗಳು ಬರುತ್ತಿವೆ. ವಿಶ್ವಾಸಮತವನ್ನು ಗೌಪ್ಯವಾಗಿ ನಡೆಸಿದ್ದಲ್ಲಿ 140ಕ್ಕೂ ಹೆಚ್ಚು ಶಾಸಕರ ಬೆಂಬಲ ನನಗೆ ಸಿಗುತ್ತಿತ್ತು ಎಂದು ಮಾಂಝಿ ಹೇಳಿದ್ದಾರೆ (ರೆಬೆಲ್ ಸಿಎಂ ಮಾಂಝಿ ಉಚ್ಚಾಟನೆ)

ಭೀಷ್ಮ ಪಿತಾಮಹ ನಿತೀಶ್ ಕುಮಾರ್ ನನಗೆ ಆಡಳಿತ ನಡೆಸಲು ಸಹಕಾರವೇ ನೀಡಲಿಲ್ಲ, ನನ್ನನ್ನು ರಿಮೋಟ್ ಕಂಟ್ರೋಲ್ ನಂತೆ ಬಳಸಿಕೊಳ್ಳಲು ನೋಡಿದ್ದರು ಎಂದು ಮಾಂಝಿ, ನಿತೀಶ್ ಕುಮಾರ್ ವಿರುದ್ದ ಕಿಡಿಕಾರಿದ್ದಾರೆ.
ಬಿಜೆಪಿಯ ಮಾತನ್ನು ಕೇಳಿಕೊಂಡು ಮಾಂಝಿ ತನ್ನ ರಾಜಕೀಯ ಜೀವನವನ್ನೇ ಕತ್ತಲಿಗೆ ತಳ್ಳಿಕೊಂಡಿದ್ದಾರೆ. ಇದು ಅವರ ಸ್ವಯಂಕೃತ ಅಪರಾಧ, ಜೆಡಿಯು ಅಥವಾ ನನ್ನನ್ನು ದೂರಿದರೆ ಬಿಹಾರದ ಜನತೆ ಅವರನ್ನು ನಂಬುವ ಸ್ಥಿತಿಯಲ್ಲಿ ಇಲ್ಲ ಎಂದು ನಿತೀಶ್ ಕುಮಾರ್ ಲೇವಡಿ ಮಾಡಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಪಕ್ಷಕ್ಕಾದ ಹೀನಾಯ ಸೋಲಿನ ನೈತಿಕ ಹೊಣೆ ಹೊತ್ತು ನಿತೀಶ್ ಕುಮಾರ್ ಮಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು. ಮಹಾದಲಿತ ಸಮುದಾಯದ ಜಿತನ್ ರಾಮ್ ಮಾಂಝಿ ಅವರನ್ನು ಸಿಎಂ ಕುರ್ಚಿ ಮೇಲೆ ಕುಳ್ಳಿರಿಸಿದ್ದರು.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications