ಪ್ರತ್ಯೇಕ ರೈಲ್ವೇ ಬಜೆಟ್ ಮಂಡಿಸುವಂತೆ ಬಿಹಾರ ಸಿಎಂ ಆಗ್ರಹ
ಪಾಟ್ನಾ, ಜನವರಿ 21: ಸಾಮಾನ್ಯ ಬಜೆಟ್ನಿಂದ ಪ್ರತ್ಯೇಕ ರೈಲ್ವೆ ಬಜೆಟ್ ಅನ್ನು ಸದನದಲ್ಲಿ ಮಂಡಿಸಬೇಕೆಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಶುಕ್ರವಾರ ಒತ್ತಾಯಿಸಿದ್ದು, ಅದಕ್ಕೆ ಬಹಳ ಮಹತ್ವವಿದೆ ಎಂದು ಹೇಳಿದ್ದಾರೆ.
ಸಮಾಧಾನ್ ಯಾತ್ರೆಯಲ್ಲಿರುವ ಸಿಎಂ ನಿತೀಶ್ ಕುಮಾರ್ ಅವರು ನಳಂದದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, "ನಾನು ರೈಲ್ವೆ ಸಚಿವನಾಗಿದ್ದಾಗ, ನಾವು ಜನರಿಗೆ ಹಲವಾರು ಉದ್ಯೋಗಗಳನ್ನು ನೀಡುತ್ತಿದ್ದೆವು. ಸಂಸತ್ತಿನಲ್ಲಿ ರೈಲು ಬಜೆಟ್ ಮಂಡಿಸಿದಾಗ, ಎಲ್ಲಾ ಪತ್ರಿಕೆಗಳಲ್ಲಿ ಚರ್ಚೆಗಳು ನಡೆದವು. ನಾನು ಪ್ರತ್ಯೇಕ ರೈಲ್ವೆ ಬಜೆಟ್ ಅನ್ನು ಸದನದಲ್ಲಿ ಮಂಡಿಸಲು ಒತ್ತಾಯಿಸುತ್ತೇನೆ. ಅದಕ್ಕೆ ಹೆಚ್ಚಿನ ಪ್ರಾಮುಖ್ಯತೆ ಇದೆ ಎಂದು ನಿತೀಶ್ ಕುಮಾರ್ ತಿಳಿಸಿದರು.
ಕೇಂದ್ರ ಸರ್ಕಾರ ಬಿಹಾರಕ್ಕೆ ವಿಶೇಷ ಸ್ಥಾನಮಾನ ನೀಡಬೇಕು. ಬಿಹಾರ ಸರ್ಕಾರದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗಿದೆ. ನಾನು ಶಾಸಕನಾಗಿದ್ದಾಗಿನಿಂದಲೂ ಜನರ ಸಮಸ್ಯೆಗಳನ್ನು ಆಲಿಸುತ್ತಿದ್ದೇನೆ. ನಾನು ಅನೇಕ ಸ್ಥಳಗಳಿಗೆ ಭೇಟಿ ನೀಡುತ್ತೇನೆ. ಜನರೊಂದಿಗೆ ಕುಳಿತು ಅವರ ಸಮಸ್ಯೆಗಳನ್ನು ಕೇಳುತ್ತೇನೆ. ಹಾಗಾಗಿ ನಾನು ಯಾವಾಗಲೂ ಬಿಹಾರಕ್ಕೆ ವಿಶೇಷ ಸ್ಥಾನಮಾನಕ್ಕಾಗಿ ಒತ್ತಾಯಿಸುತ್ತಿದ್ದೇವೆ ಎಂದು ಸಿಎಂ ನಿತೀಶ್ ಕುಮಾರ್ ಹೇಳಿದ್ದಾರೆ.

ಫೆಬ್ರವರಿ 1ರಂದು ಮಂಡಿಸಲಿರುವ ಬಜೆಟ್ ದಾಖಲೆಯನ್ನು ಅಂತಿಮಗೊಳಿಸುವ ಪ್ರಕ್ರಿಯೆಯಲ್ಲಿ ಸರ್ಕಾರ ತೊಡಗಿದೆ. ಮುಂದಿನ ಹಣಕಾಸು ವರ್ಷಕ್ಕೆ ವಾರ್ಷಿಕ ಬಜೆಟ್ ಸಿದ್ಧಪಡಿಸುವ ಔಪಚಾರಿಕ ಕಸರತ್ತು ಅಕ್ಟೋಬರ್ 10ರಂದು ಆರಂಭವಾಗಿದೆ. 2023ರ ಬಜೆಟ್ 2024 ರ ಏಪ್ರಿಲ್-ಮೇ ನಲ್ಲಿ ಮುಂದಿನ ಲೋಕಸಭಾ ಚುನಾವಣೆಯೊಂದಿಗೆ ಮೋದಿ ಸರ್ಕಾರದ ಎರಡನೇ ಅವಧಿಯ ಕೊನೆಯ ಪೂರ್ಣ ಬಜೆಟ್ ಆಗಿರಬಹುದು.
ಕೇಂದ್ರ ಬಜೆಟ್ ಮಂಡಿಸುವ ಮುನ್ನ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮನ್ನು ಮಧ್ಯಮ ವರ್ಗದವರು ಮತ್ತು ಆ ವರ್ಗದ ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳುವುದಾಗಿ ಹೇಳಿದ್ದಾರೆ. ನಾನು ಮಧ್ಯಮ ವರ್ಗಕ್ಕೆ ಸೇರಿದ್ದೇನೆ ಮತ್ತು ನನ್ನನ್ನು ಮಧ್ಯಮ ವರ್ಗ ಎಂದು ಗುರುತಿಸಿಕೊಳ್ಳುತ್ತೇನೆ. ಆದ್ದರಿಂದ ನಾನು ಅವರನ್ನು ಅರ್ಥಮಾಡಿಕೊಳ್ಳಬಲ್ಲೆ. ಮೋದಿ ಸರ್ಕಾರ ಇದುವರೆಗೆ ಯಾವುದೇ ಬಜೆಟ್ನಲ್ಲಿ ಮಧ್ಯಮ ವರ್ಗದವರಿಗೆ ಹೊಸ ತೆರಿಗೆ ವಿಧಿಸಿಲ್ಲ. 5 ಲಕ್ಷದವರೆಗೆ ಸಂಬಳ ಪಡೆಯುವವರಿಗೆ ಯಾವುದೇ ತೆರಿಗೆ ವಿಧಿಸಲಾಗುವುದಿಲ್ಲ ಎಂದು ಸೀತಾರಾಮನ್ ಹೇಳಿದ್ದಾರೆ. ಫೆಬ್ರವರಿ 1 ರಂದು ಮಂಡಿಸಲಿರುವ ಬಜೆಟ್ ದಾಖಲೆಯನ್ನು ಅಂತಿಮಗೊಳಿಸುವ ಪ್ರಕ್ರಿಯೆಯಲ್ಲಿ ಸರ್ಕಾರ ತೊಡಗಿದೆ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications