ನನಗೆ ಪ್ರಧಾನಿ ಆಗುವ ಆಸೆಯಿಲ್ಲ ಎಂದ ನಿತೀಶ್ ಕುಮಾರ್!
ನವದೆಹಲಿ, ಸೆಪ್ಟೆಂಬರ್ 05: ಭಾರತದ ಪ್ರಧಾನಮಂತ್ರಿ ಹುದ್ದೆಗೆ ಏರಬೇಕು ಎಂಬ ಯಾವುದೇ ಮಹತ್ವಾಕಾಂಕ್ಷೆಯನ್ನು ತಾವು ಹೊಂದಿಲ್ಲ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಸ್ಪಷ್ಟವಾಗಿ ಹೇಳಿದ್ದಾರೆ.

ದೇಶದಲ್ಲಿ ಮುಂಬರುವ ಲೋಕಸಭಾ ಚುನಾವಣೆಗೆ ಪ್ರಬಲ ಪ್ರತಿಪಕ್ಷವನ್ನು ರಚಿಸುವ ಉದ್ದೇಶದಿಂದ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿದ ನಂತರದಲ್ಲಿ ಮಾಧ್ಯಮವನ್ನು ಉದ್ದೇಶಿಸಿ ಅವರು ಮಾತನಾಡಿದೆ. ಈ ವೇಳೆ ಪ್ರತಿಪಕ್ಷ ಕಾರ್ಯಾಚರಣೆ(Mission Opposition) ಬಗ್ಗೆ ಅವರು ಉಲ್ಲೇಖಿಸಿದರು."ಭಾರತದಲ್ಲಿ ಪ್ರಾದೇಶಿಕ ಪಕ್ಷಗಳನ್ನು ದುರ್ಬಲಗೊಳಿಸಲು ಒಂದು ಏಕೀಕೃತ ಪ್ರಯತ್ನವಿದೆ. ಸಾರ್ವತ್ರಿಕ ಚುನಾವಣೆಗೆ ಮುಂಚಿತವಾಗಿ ವಿರೋಧವನ್ನು ಒಂದುಗೂಡಿಸುವುದು ನನ್ನ ಪ್ರಯತ್ನವಾಗಿದೆ. ಪ್ರಧಾನ ಮಂತ್ರಿ ಅಭ್ಯರ್ಥಿಯಾಗಿ ನನ್ನನ್ನು ತೊಡಗಿಸಿಕೊಳ್ಳುವ ಉದ್ದೇಶ ನನಗಿಲ್ಲ" ಎಂದು ನಿತೀಶ್ ಕುಮಾರ್ ಹೇಳಿದ್ದಾರೆ.
ಬಿಜೆಪಿ ಜೊತೆಗೆ ಮುನಿಸಿಕೊಂಡ ನಿತೀಶ್:
ಬಿಹಾರದಲ್ಲಿ ಬಿಜೆಪಿ ಜೊತೆಗೆ ಸೇರಿಕೊಂಡೇ ಈ ಮೊದಲು ಸರ್ಕಾರವನ್ನು ರಚಿಸಿದ್ದ ಮುಖ್ಯಮಂತ್ರಿ ನಿತೀಶ್ ಕುಮಾರ್ ಕೇಸರಿ ಪಡೆಯೊಂದಿಗಿನ ಸ್ನೇಹಕ್ಕೆ ಗುಡ್ ಬೈ ಹೇಳಿದರು. ನಂತರದಲ್ಲಿ ಲಾಲೂ ಪ್ರಸಾದ್ ಯಾದವ್ ಪುತ್ರ ಹಾಗೂ ಆರ್ ಜೆಡಿ ಮುಖಂಡ ತೇಜಸ್ವಿ ಯಾದವ್ ಜೊತೆಗೆ ಮೈತ್ರಿ ಮಾಡಿಕೊಂಡು ನೂತನ ಸರ್ಕಾರವನ್ನು ರಚಿಸಿದರು. ಇದರ ಮಧ್ಯೆ ಬಿಜೆಪಿಗೆ ಸೆಡ್ಡು ಹೊಡೆದ ನಿತೀಶ್ ಕುಮಾರ್ ಅವರೇ ಮುಂದಿನ ಪ್ರಧಾನಮಂತ್ರಿ ಅಭ್ಯರ್ಥಿ ಎನ್ನುವ ಊಹಾಪೋಹಗಳು ಹರಿದಾಡುವುದಕ್ಕೆ ಶುರುವಾಯಿತು.
ಲ್ಲ ಊಹಾಪೋಹಗಳ ಮಧ್ಯೆ ನಿತೀಶ್ ಕುಮಾರ್ ಸ್ಪಷ್ಟನೆ:
ನರೇಂದ್ರ ಮೋದಿಗೆ ತಿರುಗೇಟು ನೀಡುವ ನಿಟ್ಟಿನಲ್ಲಿ ಪ್ರಬಲ ನಾಯಕರೊಬ್ಬರನ್ನು ಪ್ರತಿಪಕ್ಷಗಳು ಹುಡುಕಾಡುತ್ತಿವೆ. ಈ ಹಂತದಲ್ಲಿ ಬಿಜೆಪಿ ದೋಸ್ತಿಯಿಂದ ಹೊರ ಬಂದಿರುವ ನಿತೀಶ್ ಕುಮಾರ್ ಆ ಸ್ಥಾನಕ್ಕೆ ಸಮರ್ಥ ಅಭ್ಯರ್ಥಿ ಎಂಬ ಲೆಕ್ಕಾಚಾರವನ್ನು ಹಾಕಿಕೊಳ್ಳಲಾಗುತ್ತಿದೆ. ಹೀಗಾಗಿಯೇ ನಿತೀಶ್ ಕುಮಾರ್ ಮುಂಬರುವ ಲೋಕಸಭಾ ಚುನಾವಣೆಯ ಪ್ರಧಾನಮಂತ್ರಿ ಅಭ್ಯರ್ಥಿ ಎಂದು ಹೇಳಲಾಗುತ್ತಿದೆ. ಅದಾಗ್ಯೂ, ಈ ಎಲ್ಲಾ ಸುದ್ದಿಗಳನ್ನು ಸ್ವತಃ ನಿತೀಶ್ ಕುಮಾರ್ ತಳ್ಳಿ ಹಾಕಿದ್ದಾರೆ. ತಾವು ಪ್ರಧಾನಮಂತ್ರಿ ಅಭ್ಯರ್ಥಿಯಾಗುವ ಅಭಿಲಾಷೆ ಅಥವಾ ಮಹತ್ವಾಕಾಂಕ್ಷೆಯನ್ನು ಹೊಂದಿಲ್ಲ ಎಂಬು ತಿಳಿಸಿದ್ದಾರೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications