ಬಿಹಾರ ಜನತೆಯ ವಿಶ್ವಾಸ ಉಳಿಸಿಕೊಳ್ಳದ ನಿತೀಶ್ ರಾಜೀನಾಮೆ ನೀಡಲಿ: ಬಿಜೆಪಿ
ನವದೆಹಲಿ, ಜುಲೈ 15: ಬಿಹಾರದ ಜನರ ವಿಶ್ವಾಸವನ್ನು ಉಳಿಸಿಕೊಳ್ಳಲಾಗದ ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜೀನಾಮೆ ನೀಡಬೇಕೆಂದು ಬಿಜೆಪಿ ಒತ್ತಾಯಿಸಿದೆ.
ಬಿಹಾರದಲ್ಲಿ ಆರ್ ಜೆಡಿ ನಾಯಕ ಲಾಲೂ ಪ್ರಸಾದ್ ಯಾದವ್, ಅವರ ಪುತ್ರ ತೇಜಸ್ವಿ ಯಾದವ್ ಮತ್ತು ಅವರ ಕುಟುಂಬಸ್ಥರು ಎದುರಿಸಿತ್ತಿರುವ ಸಿಬಿಐ(ಕೇಂದ್ರ ತನಿಖಾ ದಳ) ತನಿಖೆಯನ್ನು ಉಲ್ಲೇಖಿಸಿದ ಬಿಜೆಪಿ ನಾಯಕ ರಾಮೇಶ್ವರ್ ಚೌರಾಸಿಯಾ, ಇಂಥ ಅನ್ನಿವೇಶದಲ್ಲಿ ಬಿಹಾರ ಬೆಳೆಯುವುದಕ್ಕೆ ಸಾಧ್ಯವೇ ಇಲ್ಲ.

ಜೆಡಿಯು ಮತ್ತು ಆರ್ ಜೆಡಿ ಮೈತ್ರಿ ಸರ್ಕಾರ ಬಿಹಾರದಲ್ಲಿಸಂಪೂರ್ಣ ವಿಫಲವಾಗಿದೆ. ಜನರು ನಿತೀಶ್ ಕುಮಾರ್ ಸರ್ಕಾರದ ಮೇಲೆ ಇಟ್ಟಿದ್ದ ವಿಶ್ವಾಸ ಮಣ್ಣುಪಾಲಾಗಿದೆ. ಜನರಿಗೆ ನೀಡೀದ ಭರವಸೆಯನ್ನು ಅವರು ಉಳಿಸಿಕೊಳ್ಳುತ್ತಿಲ್ಲ ಎಂದ ಅವರು, ಬಿಹಾರದ ಉಪಮುಖ್ಯಮಂತ್ರಿ, ಲಾಲೂ ಪುತ್ರ ತೇಜಸ್ವಿ ಯಾದವ್ ಅವರ ಮೇಲೆ ಭ್ರಷ್ಟಾಚಾರದ ಆರೋಪವಿದ್ದರೂ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡದಿರುವುದು ಸರಿಯೇ ಎಂದು ಅವರು ಪ್ರಶ್ನಿಸಿದರು.
ಈ ಎಲ್ಲ ಕಾರಣಗಳಿಂದ ನಿತೀಶ್ ಕುಮಾರ್ ರಾಜೀನಾಮೆ ನೀಡೀ ಮತ್ತೊಮ್ಮೆ ಚುನಾವಣೆ ಎದುರಿಸಬೇಕು ಎಂದು ಚೌರಾಸಿಯ ಹೇಳಿದರು.












Click it and Unblock the Notifications