ಪ್ರಧಾನಿ ಮೋದಿ ಒಬಿಸಿ ಸ್ಥಾನಮಾನ, ಕೇಂದ್ರ ಜಾತಿ ಗಣತಿ ಬಗ್ಗೆ ಜೆಡಿ(ಯು) ಹೇಳೋದೇನು?
ಪಾಟ್ನಾ, ಅಕ್ಟೋಬರ್ 16: ಕೇಂದ್ರ ಬಿಜೆಪಿ ಸರ್ಕಾರವು ಪ್ರಧಾನಮಂತ್ರಿಗಳ ಒಬಿಸಿ ಸ್ಥಾನಮಾನ ಬಗೆಗಿನ ಸುಳ್ಳು ಮಾಹಿತಿ ಬಹಿರಂಗಗೊಳ್ಳುತ್ತದೆ ಎಂಬ ಕಾರಣಕ್ಕೆ ಜಾತಿ ಜನಗಣತಿ ನಡೆಸಲು ಹಿಂದೇಟು ಹಾಕುತ್ತಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಜೆಡಿ (ಯು) ಪಕ್ಷವು ಆರೋಪಿಸಿದೆ.
ಪಾಟ್ನಾದಲ್ಲಿರುವ ಜೆಡಿ (ಯು) ಪ್ರಧಾನ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಜೆಡಿ (ಯು) ಪಕ್ಷದ ಎಂಎಲ್ಸಿ ಮತ್ತು ಮುಖ್ಯ ವಕ್ತಾರ ನೀರಜ್ ಕುಮಾರ್ ಅವರು, ಪ್ರಧಾನಿ ಮೋದಿಯವರು "ಅತಿ ಪಿಚ್ಡಾ" (ಅತ್ಯಂತ ಹಿಂದುಳಿದ ವರ್ಗಗಳು) ಸಮುದಾಯಕ್ಕೆ ಸೇರಿದವರು ಎಂದು ನೀಡಿದ್ದ ಹೇಳಿಕೆಯನ್ನು ಪ್ರಶ್ನೆ ಮಾಡಿದರು.

ಪ್ರಧಾನಿ ನರೇಂದ್ರ ಮೋದಿಯವರು 2002ರಲ್ಲಿ ಗುಜರಾತ್ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಮೋದಿ ಅವರ ಜಾತಿಯಾದ 'ಮೋದ್ ಘಾಂಚಿ'ಯನ್ನು ಒಬಿಸಿ ಪಟ್ಟಿಗೆ ಸೇರಿಸಿದ್ದಾರೆ ಎಂದು ಆರೋಪಿಸಲಾಗಿದೆ ಎಂಬ ವಿಚಾರ ಪ್ರಸ್ತಾಪಿಸಿದರು. 1994 ರಲ್ಲಿ ಗುಜರಾತ್ ಮತ್ತು ಕೇಂದ್ರದಲ್ಲಿ ಕಾಂಗ್ರೆಸ್ ಆಳ್ವಿಕೆ ನಡೆಸಿದ್ದಾಗಲೇ ಪಟ್ಟಿಗೆ ಸೇರಿಸಲಾಗಿದೆ ಎಂದು ಜೆಡಿಎಸ್ ನಾಯಕರು ಶನಿವಾರ ತಿಳಿಸಿದ್ದಾರೆ ಎಂದರು.
ಬಿಜೆಪಿಗೆ ಸವಾಲು ಹಾಕಿದ ಜೆಡಿಯು
ಕುಮಾರ್ ಅವರು ಆ ವರ್ಷದ ಗೆಜೆಟ್ ಆಫ್ ಇಂಡಿಯಾ ಸಂಬಂಧಿ ಪತ್ರಗಳನ್ನು ಪ್ರದರ್ಶಿಸಿ, ಹಿಂದುಳಿದ ವರ್ಗಗಳ (ಒಬಿಸಿ) ಜಾತಿಗಳನ್ನು ಉಲ್ಲೇಖಿಸಿದರು. ಘಾಂಚಿ ಜಾತಿಯು ಆರು ಉಪ ಗುಂಪುಗಳನ್ನು ಹೊಂದಿದೆ. ಅದರಲ್ಲಿ 1994 ರಲ್ಲಿ ಒಬಿಸಿಗಳ ಪಟ್ಟಿಯಲ್ಲಿ ಕೇವಲ ಒಂದಾಗಿದ್ದು, ಅದು ಘಾಂಚಿ (ಮುಸ್ಲಿಂ) ಎಂದಾಗಿದೆ. ಇದನ್ನು ಬಿಜೆಪಿ ನಿರಾಕರಿಸಲಿ ಎಂದು ಅವರು ಸವಾಲು ಹಾಕಿದರು.

ಚುನಾವಣಾ ಲಾಭದ ಗೀಳಿನಿಂದಾಗಿ ಪ್ರಧಾನಿ ಮೋದಿಯವರು 'ಮೋದ್ ಘಾಂಚಿ' ಎಂದು ಸೇರಿಸಿಕೊಂಡಿದ್ದಾರೆ. 1931ರ ಜನಗಣತಿಯ ಪ್ರಕಾರ, ಪ್ರಧಾನ ಮಂತ್ರಿಯ ಜಾತಿಯು ಬ್ರಾಹ್ಮಣರಿಗೆ ಸಮಾನವಾಗಿ ಮತ್ತು ರಜಪೂತರಿಗಿಂತ ಹೆಚ್ಚಿನ ಸಾಕ್ಷರತೆಯನ್ನು ಹೊಂದಿದೆ. ಆದ್ದರಿಂದ, OBC ಗಳಿಗೆ ವಿಸ್ತರಿಸುವ ಪ್ರಯೋಜನಗಳ ಅಗತ್ಯವಿಲ್ಲ ಎಂದು ಅವರು ಪ್ರತಿಪಾದಿಸಿದರು.
ಜೆಡಿ(ಯು) ಜಾತಿ ಸಮೀಕ್ಷೆಯಿಂದ ಸಂಚಲನ
19ನೇ ಶತಮಾನದ ಆರಂಭದಲ್ಲಿ, ಮೋದ್ ಘಾಂಚಿಗಳು ತಮ್ಮನ್ನು ಗಣತಿ ಮಾಡುವಂತೆ ಬ್ರಿಟಿಷ್ ಸರ್ಕಾರಕ್ಕೆ ಮನವಿ ಮಾಡಿದ್ದರು ಎಂಬುಕ್ಕೆ ದಾಖಲೆಗಳಿವೆ. ನಿತೀಶ್ ಕುಮಾರ್ ಅವರ ಸರ್ಕಾರ ನಡೆಸಿದ ಜಾತಿ ಸಮೀಕ್ಷೆ ದೇಶಾದ್ಯಂತ ಸಂಚಲನ ಮೂಡಿಸಿದೆ ಎಂದು ಜೆಡಿ (ಯು) ಪ್ರತಿಪಾದಿಸಿದೆ ಎಂದರು.
ಇನ್ನೂ ಗುಜರಾತ್ನಲ್ಲಿನ ಗಣತಿ, ಜಾತಿ ವಿಚಾರದಲ್ಲಿ ಸುಳ್ಳು ಬಹಿರಂಗವಾಗಬಾರದು ಎಂಬ ಕಾರಣಕ್ಕಾಗಿ ಕೇಂದ್ರ ಸರ್ಕಾರ ಜಾತಿ ಗಣತಿಯನ್ನು ನಡೆಸಲು ನಿರಾಕರಿಸುತ್ತಿದೆ ಎಂದು ಜೆಡಿಯು ವಕ್ತಾರರು ಪುನರುಚ್ಚರಿಸಿದರು.
-
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ












Click it and Unblock the Notifications