ಬಿಹಾರದಲ್ಲಿ ಕಚ್ಚಾ ಬಾಂಬ್ ಸ್ಫೋಟ: ಲೇಡಿ ಬಾಂಬರ್ ಕೃತ್ಯ?
ಬೆಂಗಳೂರು, ಜ. 23: ಬಿಹಾರದ ಅರಾಹ್ ಸಿವಿಲ್ ಕೋರ್ಟ್ ಬಳಿ ಶುಕ್ರವಾರ ಬೆಳಗ್ಗೆ ಕಚ್ಚಾ ಬಾಂಬ್ ಸ್ಫೋಟಗೊಂಡಿದ್ದು, ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ.
ಒಬ್ಬ ಪೊಲೀಸ್ ಪೇದೆ ಮತ್ತು ಮಹಿಳೆ ಮೃತಪಟ್ಟಿದ್ದು, ಒಟ್ಟು 10 ಜನ ಗಾಯಗೊಂಡಿದ್ದಾರೆ. ಸತ್ತ ಮಹಿಳೆಯೇ ಬಾಂಬ್ ತೆಗೆದುಕೊಂಡು ಹೋಗಿದ್ದಳು ಎಂದು ಹೇಳಲಾಗಿದ್ದು ಇದು ಆತ್ಮಾಹುತಿ ಬಾಂಬ್ ದಾಳಿಯೇ? ಎಂಬ ಶಂಕೆ ವ್ಯಕ್ತವಾಗಿದೆ.['ಪಶ್ಚಿಮ ಬಂಗಾಳ ಬಾಂಬ್ ರಾಜಧಾನಿ' ಎಂಬ ಟೀಕೆ ನಿಜವೇ?]

ಲೇಡಿ ಬಾಂಬರ್?
ಮಹಿಳೆ ನಿಜವಾಗಿಯೂ ಈ ಬಾಂಬ್ ಹೊತ್ತು ತಂದಿದ್ದಳೇ? ಇಲ್ಲವೇ? ಎಂಬುದನ್ನು ತನಿಖೆ ಮಾಡಲಾಗುತ್ತಿದೆ. ಆಕೆಯ ದೇಹ ಛಿದ್ರ ಛಿದ್ರವಾಗಿರುವುದನ್ನು ಗಮನಿಸಿದರೆ ಬಾಂಬ್ ಅವಳ ಮೈಮೇಲೆ ಇತ್ತು ಎಂಬುದು ಮೇಲ್ನೋಟಕ್ಕೆ ದೃಢಪಡುತ್ತದೆ ಎಂದು ಪೊಲೀಸರು ಹೇಳಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಚ್ಚಾ ಬಾಂಬ್ ಎಲ್ಲಿಂದ ಬಂತು?
ಸ್ಫೋಟವಾಗಿರುವುದು ಕಚ್ಚಾ ಬಾಂಬ್ ಎನ್ನುವುದರಲ್ಲಿ ಅನುಮಾನವಿಲ್ಲ. ಇದು ಉಗ್ರರ ಕೃತ್ಯವೋ? ಅಥವಾ ಹಿನ್ನೆಲೆ ಬೇರೆ ಇದೆಯೇ? ಎಂಬುದರ ಬಗ್ಗೆ ಈಗಲೇ ತೀರ್ಮಾನಕ್ಕೆ ಬರಲು ಸಾಧ್ಯವಿಲ್ಲ. ಇನ್ನು ಹೆಚ್ಚಿನ ಮಾಹಿತಿ ಸಿಗಬೇಕಿದೆ ಎಂದು ಬಿಹಾರದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.[ಕೋಲ್ಕೊತಾದಲ್ಲಿ ಕಚ್ಚಾ ಬಾಂಬ್ ಸ್ಫೋಟ, 2 ಮಕ್ಕಳಿಗೆ ಗಾಯ]
ಪೊಲೀಸರು ಮತ್ತು ಬಾಂಬ್ ತಪಾಸಣಾ ದಳದ ಅಧಿಕಾರಿಗಳು ಪ್ರದೇಶದಲ್ಲಿ ಇನ್ನು ಹೆಚ್ಚಿನ ಸ್ಫೋಟಕಗಳಿವೆಯೇ ಎಂಬುದರ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಮಹಿಳೆ ನ್ಯಾಯಾಲಯದ ಆವರಣ ಪ್ರವೇಶಿಸಿದ ಕೆಲವೇ ಕ್ಷಣದಲ್ಲಿ ಸ್ಫೋಟ ಸಂಭವಿಸಿದೆ. ಸ್ಫೋಟದ ರಭಸಕ್ಕೆ ಅನೇಕರು ನೆಲಕ್ಕೆ ಕುಸಿದು ಬಿದ್ದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications