Bihar Election Results 2025: ಮತ ಎಣಿಕೆಯಲ್ಲಿ ಈಗಲೂ NDA ಭಾರೀ ಮುನ್ನಡೆ, MGB ಹಿನ್ನಡೆ..updates
ನವದೆಹಲಿ, ನವೆಂಬರ್ 14: ಬಿಹಾರ ವಿಧಾನಸಭಾ ಚುನಾವಣೆ 2025 ಫಲಿತಾಂಶ ಪ್ರಕಟಗೊಳ್ಳಲಿದೆ. ಚುನಾವಣೆ ಸಿಬ್ಬಂದಿ ಮತ ಎಣಿಕೆ ಮುಂದುವರಿಸಿದ್ದಾರೆ. ಬೆಳಗ್ಗೆ 10.30ರ ಹೊತ್ತಿಗೆ NDA ಪಕ್ಷವೇ ಮುನ್ನಡೆ ಸಾಧಿಸಿಕೊಂಡು ಬರುತ್ತಿದೆ. ಹಿನ್ನಡೆ ಅನುಭವಿಸುತ್ತಿರುವ ಆರ್ಜೆಡಿ ಕಳೆದ ಬಾರಿಗಿಂತ ಈ ಬಾರಿ ಅಧಿಕ ಸ್ಥಾನ ಗೆಲ್ಲುವ ವಿಶ್ವಾಸದಲ್ಲಿದೆ. ಎರಡು ಕಡೆಯ ಕಾರ್ಯಕರ್ತರು, ನಾಯಕರು ಗೆಲ್ಲುವ ವಿಶ್ವಾಸದಲ್ಲಿದ್ದಾರೆ. ವಿಕ್ಟರಿ ವಿಜೃಂಭಿಸಲು ತಯಾರಿ ಮಾಡಿಕೊಂಡಿದ್ದಾರೆ.
ಇಂದು ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಯಿತು. ಅರಂಭದಿಂದಲೂ ಒಟ್ಟು 243 ಸೀಟುಗಳ ಪೈಕಿ ಮುನ್ನಡೆ ಕಾಯ್ದುಕೊಂಡಿದ್ದ ಎನ್ಡಿಎ 10 ಗಂಟೆ ಹೊತ್ತಿಗೆ ಬರೋಬ್ಬರಿ 168 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಇತ್ತ ಜೆಡಿಯು ಸಹ 70 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಮತ ಎಣಿಕೆ ಸುಸೂತ್ರವಾಗಿ ಮುಂದುವರಿದಿದೆ. ಹಿಂದೆ ಇದ್ದರೂ ಸಹಿತ ಈ ಸಲ ಹೆಚ್ಚಿನ ಸ್ಥಾನ ಗಳಿಸುವಲ್ಲಿ ಆರ್ಜೆಡಿ ತೀವ್ರ ಪೈಪೋಟಿ ಒಡ್ಡಿದೆ.

ಮೊದಲು ಬೆಳಗ್ಗೆ 9 ಗಂಟೆಯವರೆಗಿನ ಮತ ಎಣಿಕೆಯಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (NDA) 130 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ ಮತ್ತು ಮಹಾಘಟಬಂಧನ್ 111 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿತ್ತು. ನಂತರ ಬದಲಾವಣೆ ಆಯಿತು.
ಆರ್ಜೆಡಿ ನಾಯಕ ತೇಜಸ್ವಿ ಯಾದವ್ ಅವರು ಗೆಲ್ಲುವ ವಿಶ್ವಾಸದಲ್ಲಿದ್ದಾರೆ. ಇತ್ತ ಎನ್ಡಿಎ ನೇತೃತ್ವದಲ್ಲಿ ಜೆಡಿಯು ನಾಯಕ ಸಿಎಂ ನಿತೀಶ್ ಕುಮಾರ್ ಅವರು ಮತ್ತೊಮ್ಮೆ ಹತ್ತನೇ ಬಾರಿ ಸಿಎಂ ಆಗುವ ನಿರೀಕ್ಷೆಯಲ್ಲಿದ್ದಾರೆ. ಈ ಸಂಬಂಧ ರಾಜ್ಯದಲ್ಲಿ ಬ್ಯಾನರ್ ಹಾಕಿಸಿದ್ದಾರೆ. ಲಾಡು ಸಿಹಿ ತನಿಸುಗಳನ್ನು ಹಂಚಿ ಕಾರ್ಯಕರ್ತರು, ಬೆಂಬಲಿಗರು ಕುಣಿಯುತ್ತಿದ್ದಾರೆ.
ಇಂದು ಸಂಜೆ 05ಗಂಟೆವರೆಗ ಎತ ಎಣಿಕೆ ನೆಡೆಯಲಿದೆ. ಒಟ್ಟು 4,372 ಎಣಿಕೆ ಕೋಷ್ಟಕಗಳು ಮತ್ತು 18,000 ಕ್ಕೂ ಹೆಚ್ಚು ಎಣಿಕೆ ಏಜೆಂಟ್ಗಳು ಈ ಪ್ರಕ್ರಿಯೆಯನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಈಗಾಗಲೇ ಬಂದ ಚುನಾವಣೋತ್ತರ ಸಮೀಕ್ಷೆಗಳಲ್ಲಿ ಎನ್ಡಿಗೆ ಬಿಹಾರದ ಜನರು ಮತ್ತೆ ಅಧಿಕಾರ ನೀಡಲಿದ್ದಾರೆ. ಮಹಾಘಟಬಂಧನ್ ಮೈತ್ರಿಕೂಟವನ್ನು ಅಧಿಕಾರದಿಂದ ದೂರ ಇಡಲಿದ್ದಾರೆ. ಮತ್ತೊಮ್ಮ ಮೋದಿ ಸರ್ಕಾರ ತರಲು ಮನಸ್ಸು ಮಾಡಿದ್ದಾರೆ ಎಂಬ ಮುನ್ಸೂಚನೆ ಸಿಕ್ಕಿತ್ತು.
ಒಟ್ಟು 243 ಕ್ಷೇತ್ರಗಳಲ್ಲಿ 122 ಮ್ಯಾಜಿಕ್ ನಂಬರ್ ಆಗಿದೆ. ನವೆಂಬರ್ 06ರಂದು ಮೊದಲ ಹಂತದಲ್ಲಿ ಮತ್ತು ನವೆಂಬರ್ 11ರಂದು ಎರಡನೇ ಹಂತದಲ್ಲಿ ಮತದಾನ ಸುಸೂತ್ರವಾಗಿ ನಡೆದಿತ್ತು. ಸದ್ಯ ಮತ ಎಣಿಕೆ ಎಲ್ಲೆಡೆ ಸರಾಗವಾಗಿ ನಡೆದಿದೆ ಎಂದು ಚುನಾವಣೆ ಆಯೋಗ ಮಾಹಿತಿ ನೀಡಿದೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications