Bihar Exit Poll 2025: ಬಿಹಾರ ಗೆದ್ದು ಬೀಗಲಿರುವ ಬಿಜೆಪಿ & ಜೆಡಿಯು ಮೈತ್ರಿಕೂಟ, ಎನ್ಡಿಎ ಸಮೀಕ್ಷೆ!
ಬಿಹಾರ ರಾಜ್ಯದ ವಿಧಾನಸಭೆ ಚುನಾವಣೆ ಇಂದು ಭರ್ಜರಿಯಾಗಿ ಮುಕ್ತಾಯ ಕಂಡಿದ್ದು, ಈ ಬಾರಿ ಕೂಡ ಬಿಜೆಪಿ & ಜೆಡಿಯು ನೇತೃತ್ವದ ಎನ್ಡಿಎ ಮೈತ್ರಿಕೂಟ ಅಧಿಕಾರ ಹಿಡಿಯುವುದು ಬಹುತೇಕ ಗ್ಯಾರಂಟಿ ಆಗಿದೆ. ಅದರಲ್ಲೂ ಎನ್ಡಿಟಿವಿ ಸಮೀಕ್ಷೆ ಪ್ರಕಾರ ಕೂಡ ಬಿಜೆಪಿ & ಜೆಡಿಯು ನೇತೃತ್ವದ ಎನ್ಡಿಎ ಮೈತ್ರಿಕೂಟಕ್ಕೆ ಗೆಲುವು ಗ್ಯಾರಂಟಿ ಅಂತಾ ಹೇಳಲಾಗಿದೆ. ಹಾಗಾದ್ರೆ ಯಾವ ಪಕ್ಷಕ್ಕೆ ಎಷ್ಟು ಸ್ಥಾನ ಸಿಗಲಿದೆ? ಭರ್ಜರಿ ಹೋರಾಟ ನಡೆಸಿದ ಕಾಂಗ್ರೆಸ್ & ಆರ್ಜೆಡಿ ನೇತೃತ್ವದ ಮೈತ್ರಿಕೂಟಕ್ಕೆ ಸಿಗುವ ಸ್ಥಾನಗಳು ಎಷ್ಟು?
ಕಳೆದ 3-4 ತಿಂಗಳಿಂದ ಚುನಾವಣೆ ಪ್ರಚಾರ, ಆರೋಪ & ಪ್ರತ್ಯಾರೋಪ, ಮತದಾರರ ಸೆಳೆಯುವ ತಂತ್ರಗಳೇ ಬಿಹಾರದಲ್ಲಿ ಸೌಂಡ್ ಮಾಡಿದ್ದವು. ಇಂದು ಅದಕ್ಕೆಲ್ಲಾ ತೆರೆ ಬಿತ್ತು, ಸಂಜೆಯ ನಂತರ ಬಿಹಾರ ವಿಧಾನಸಭೆ ಚುನಾವಣೆಯ ಎಕ್ಸಿಟ್ ಪೋಲ್ ಹೊರ ಬಿದ್ದಿದೆ. ಹೀಗಿದ್ದಾಗ ಬಹುತೇಕ ಈಗಿನ ಚುನಾವಣೆಯಲ್ಲಿ ಎನ್ಡಿಎ ಸರ್ಕಾರ ಅಸ್ತಿತ್ವಕ್ಕೆ ಬರುವುದು ಗ್ಯಾರಂಟಿ ಆಗಿದೆ. ಎನ್ಡಿಟಿವಿ ಈಗ ನೀಡಿರುವ ಸಮೀಕ್ಷೆ ಮಾಹಿತಿಯಲ್ಲಿ ಕೂಡ ಬಿಜೆಪಿ & ಜೆಡಿಯು ನೇತೃತ್ವದ ಎನ್ಡಿಎ ಮೈತ್ರಿಕೂಟದ ಗೆಲುವು ಗ್ಯಾರಂಟಿ ಆಗಿದೆ. ಹಾಗಾದರೆ ಯಾರಿಗೆ ಎಷ್ಟು ಸ್ಥಾನ?

ಬಿಹಾರ ಅಧಿಕಾರ ಎನ್ಡಿಎ ಪಾಲು?
ಅಂದಹಾಗೆ ಇದೀಗ ಎನ್ಡಿಟಿವಿ ನೀಡಿರುವ ಚುನಾವಣೋತ್ತರ ಸಮೀಕ್ಷೆಯಲ್ಲಿ ಬಿಜೆಪಿ & ಜೆಡಿಯು ನೇತೃತ್ವದ ಎನ್ಡಿಎ ಮೈತ್ರಿಕೂಟ ಬರೋಬ್ಬರಿ 152 ಸ್ಥಾನಗಳಲ್ಲಿ ಗೆದ್ದು ಬೀಗುವುದು ಗ್ಯಾರಂಟಿ. ಜೊತೆಗೆ ಕಾಂಗ್ರೆಸ್ & ಆರ್ಜೆಡಿ ನೇತೃತ್ವದ ಮೈತ್ರಿಕೂಟ ಕೇವಲ 84 ಸ್ಥಾನಗಳನ್ನು ಪಡೆಯಬಹುದು ಎಂದು ಎನ್ಡಿಟಿವಿ ನೀಡಿದ ಚುನಾವಣೋತ್ತರ ಸಮೀಕ್ಷೆಯಿಂದ ತಿಳಿದು ಬಂದಿದೆ. ಇನ್ನುಳಿದಂತೆ ಇತರರು 7 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆ ಇದೆ.
ಮತ್ತೊಮ್ಮೆ ಎನ್ಡಿಎ ಸರ್ಕಾರ...
ಇಡೀ ದೇಶ ಬಿಹಾರ ಚುನಾವಣೆ ಫಲಿತಾಂಶಕ್ಕೆ ಕಾಯುತ್ತಾ ಕುಳಿತಿದ್ದು, ಬಿಹಾರ ರಾಜ್ಯದಲ್ಲಿ ಇಂದು ಅಂತಿಮ ಹಂತದ ಮತದಾನ ನಡೆದಿದೆ. ಅಲ್ಲದೆ ಫಲಿತಾಂಶ ಹೊರಬೀಳುವ ಮೊದಲು ಸಮೀಕ್ಷೆಗಳ ಮಾಹಿತಿ ಭಾರಿ ಸದ್ದು ಮಾಡುತ್ತಿದ್ದು, ಎನ್ಡಿಎ ಅಧಿಕಾರ ಹಿಡಿಯುವುದು ಬಹುತೇಕ ಗ್ಯಾರಂಟಿ ಎನ್ನಲಾಗುತ್ತಿದೆ.
ಹೀಗಾಗಿಯೇ ಬಿಹಾರದಲ್ಲಿ ಸರ್ಕಾರ ರಚನೆ ಮಾಡಲು ಎನ್ಡಿಎ ನಾಯಕರು ಈಗಲೇ ಸಿದ್ಧತೆಯನ್ನ ಆರಂಭಿಸುತ್ತಾರಾ? ಎಂಬುದನ್ನ ಕಾದು ನೋಡಬೇಕಿದೆ. ಮತ್ತೊಂದು ಕಡೆ ಚುನಾವಣೆಗೂ ಮುನ್ನ ಬಿಹಾರದಲ್ಲಿ ದೊಡ್ಡ ದೊಡ್ಡ ಬೆಳವಣಿಗೆ ನಡೆದಿದ್ದವು, ಅದ್ರಲ್ಲೂ ಮೊದಲ ಹಂತದ ಮತದಾನದ ಸಮಯದಲ್ಲೇ ಹಿಂಸಾಚಾರ ಕೂಡ ನಡೆದಿತ್ತು.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications