Bihar Election: ಬಿಹಾರ ವಿಧಾನಸಭೆಯಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣ? ಹಿಂಗಾದ್ರೆ ಮುಂದೆ ಹೆಂಗೆ?
ಇಡೀ ದೇಶ ಬಿಹಾರ ಚುನಾವಣೆ ಫಲಿತಾಂಶಕ್ಕೆ ಕಾಯುತ್ತಾ ಕುಳಿತಿದೆ. ಬಿಹಾರದಲ್ಲಿ ಇಂದು ಅಂತಿಮ ಹಂತದಲ್ಲಿ ಮತದಾನ ನಡೆಯುತ್ತಿದ್ದು ಇನ್ನೇನು ಫಲಿತಾಂಶವು ಹೊರ ಬೀಳಲಿದೆ. ಹೀಗಾಗಿ ಬಿಹಾರದಲ್ಲಿ ಸರ್ಕಾರ ರಚನೆ ಮಾಡಲು ಬಿಜೆಪಿ ಮತ್ತು ಕಾಂಗ್ರೆಸ್ ನೇತೃತ್ವದ ಒಕ್ಕೂಟಗಳ ಮಧ್ಯೆ ಭಾರಿ ದೊಡ್ಡ ಚರ್ಚೆ ಶುರು ಆಗಿದೆ. ಅದರಲ್ಲೂ ಹೇಗಾದರೂ ಮಾಡಿ ಈ ಬಾರಿ ಅಧಿಕಾರ ಹಿಡಿದೇ ತೀರಬೇಕು ಎಂದು ಕಾಂಗ್ರೆಸ್ & ಆರ್ಜೆಡಿ ನೇತೃತ್ವದ ಇಂಡಿಯಾ ಒಕ್ಕೂಟ ಎಲ್ಲಾ ರೀತಿಯಲ್ಲಿ ಪ್ರಯತ್ನ ಮಾಡುತ್ತಿದೆ. ಹೀಗಾಗಿ ಬಿಹಾರ ಚುನಾವಣೆ ತೀವ್ರ ಕುತೂಹಲ ಕೆರಳಿಸಿದೆ.
ಈಗಾಗಲೇ 1ನೇ ಹಂತದಲ್ಲಿ ಮತದಾನ ಮುಗಿಸಿದ್ದ ಬಿಹಾರ ಮತದಾರರು, ಇದೀಗ 122 ಸ್ಥಾನಗಳಿಗೆ 2ನೇ ಹಂತದಲ್ಲಿ ವೋಟಿಂಗ್ ಮಾಡುತ್ತಿದ್ದಾರೆ. ಈ ಮೂಲಕ ಇದೀಗ ಬಿಹಾರ ವಿಧಾನಸಭೆ ಚುನಾವಣೆ ಅಂತ್ಯ ಆಗಲಿದೆ. 74 ವರ್ಷದ ನಿತೀಶ್ ಕುಮಾರ್ ಅವರು ಬಿಹಾರದಲ್ಲಿ ಸತತವಾಗಿ ಅಧಿಕಾರವನ್ನು ನಡೆಸಿಕೊಂಡು ಬಂದಿದ್ದಾರೆ. ಹೀಗಿದ್ದಾಗ ಮತ್ತೊಮ್ಮೆ ನಿತೀಶ್ ಕುಮಾರ್ ಬಿಹಾರ ಸಿಎಂ ಆಗುವುದು ಬಹುತೇಕ ಗ್ಯಾರಂಟಿ ಎನ್ನಲಾಗುತ್ತಿದೆ. ಇಂತಹ ಸಮಯದಲ್ಲೇ ಹೊಸದೊಂದು ಚರ್ಚೆ ಶುರುವಾಗಿದ್ದು, ಭಾರಿ ಕುತೂಹಲ ಮನೆಮಾಡಿದೆ.

ಬಿಹಾರದಲ್ಲಿ ಅತಂತ್ರ ಪರಿಸ್ಥಿತಿ?
ದೇಶದ ಗಮನ ಸೆಳೆದಿರುವ ಬಿಹಾರ ವಿಧಾನಸಭೆ ಚುನಾವಣೆಗೆ ಮತದಾನ ಮುಕ್ತಾಯವಾಗಲು ಕೆಲವೇ ಗಂಟೆಗಳು ಮಾತ್ರ ಬಾಕಿ ಇದೆ. ದೆಹಲಿಯಲ್ಲಿ ಸ್ಫೋಟ ಸಂಭವಿಸಿದ ಹಿನ್ನೆಲೆ ಬಿಹಾರದಲ್ಲಿ ಕಟ್ಟೆಚ್ಚರ ವಹಿಸಿ ಮತದಾನ ನಡೆಸಲಾಗುತ್ತಿದೆ. ಇಂತಹ ಸಮಯದಲ್ಲೇ ಚರ್ಚೆಯೊಂದು ಶುರುವಾಗಿದ್ದು, 2025ರ ಫಲಿತಾಂಶ ಅತಂತ್ರವಾಗುತ್ತಾ? ಈ ಮೂಲಕ ಬಿಹಾರದಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣ ಆಗಲಿದೆಯಾ? ಎಂಬ ಮಾತುಕತೆ ಜೋರಾಗಿದೆ. ಇಷ್ಟೆಲ್ಲದರ ನಡುವೆ ಇಂದು ಚುನಾವಣೋತ್ತರ ಫಲಿತಾಂಶ ಕೂಡ ಹೊರಬೀಳಲಿದೆ.
ಅಭ್ಯರ್ಥಿಗಳ ಭವಿಷ್ಯ ನಿರ್ಧಾರ...
ಒಟ್ನಲ್ಲಿ ಕಳೆದ 3-4 ತಿಂಗಳಿಂದ ಚುನಾವಣಾ ಪ್ರಚಾರ, ಆರೋಪ & ಪ್ರತ್ಯಾರೋಪ, ಮತದಾರರನ್ನ ಸೆಳೆಯುವ ತಂತ್ರಗಳೇ ಬಿಹಾರದಲ್ಲಿ ಸೌಂಡ್ ಮಾಡಿದ್ದವು. ಇಂದು ಅದಕ್ಕೆಲ್ಲಾ ತೆರೆ ಬೀಳಲಿದ್ದು, ಸಂಜೆ ನಂತರ ಬಿಹಾರ ವಿಧಾನಸಭೆ ಚುನಾವಣೆಯ ಎಕ್ಸಿಟ್ ಪೋಲ್ ಹೊರ ಬೀಳಲಿದೆ. ಆದರೆ ಈಗಿರುವ ಏಕೈಕ ಪ್ರಶ್ನೆ, ಬಹುಮತದ ಸರ್ಕಾರ ಅಧಿಕಾರಕ್ಕೆ ಬರುತ್ತಾ? ಅಥವಾ ಬಿಹಾರ ವಿಧಾನಸಭೆ ಅತಂತ್ರ ಆಗುತ್ತಾ? ಎಂಬ ಚರ್ಚೆಯು ನಡೆಯುತ್ತಿದೆ. ಇದಕ್ಕೆಲ್ಲಾ ಇನ್ನು ಕೆಲವೇ ದಿನಗಳಲ್ಲಿ ಉತ್ತರ ಸಿಗಲಿದ್ದು, ಇಂದು ಬಿಹಾರದ ಅಭ್ಯರ್ಥಿಗಳ ಭವಿಷ್ಯ ಮತಪೆಟ್ಟಿಗೆ ಒಳಗೆ ಭದ್ರವಾಗಲಿದೆ.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications