Bihar Election 2025: ಬಿಹಾರದಲ್ಲಿ ರಾಜಕೀಯ ಪಕ್ಷಗಳ ಹಣೆಬರಹ ಬರೆಯಲು ಮತದಾರ ಪ್ರಭು ಸಜ್ಜು!
ಬಿಹಾರ ಚುನಾವಣೆಗೆ ಮತದಾನ ಆರಂಭವಾಗಿದೆ, ಇಡೀ ದೇಶದ ಗಮನ ಸೆಳೆದಿರುವ ಬಿಹಾರದ ವಿಧಾನಸಭೆ ಚುನಾವಣೆಗೆ ಮೊದಲ ಹಂತದಲ್ಲಿ ಇಂದು ಮತದಾನ ನಡೆಯುತ್ತಿದೆ. ಈ ಬಾರಿಯ ಬಿಹಾರ ಚುನಾವಣೆ ಹಲವು ಕಾರಣಕ್ಕೆ ಸದ್ದು ಮಾಡಿತ್ತು, ಹಾಗೇ ಕೊನೆಯ ಹಂತದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾಡಿದ್ದ ಮತಗಳವು ಆರೋಪ ತಲ್ಲಣ ಎಬ್ಬಿಸಿದೆ. ಇಷ್ಟೆಲ್ಲದರ ಮಧ್ಯೆ ಇದೀಗ 18 ಜಿಲ್ಲೆಗಳ 121 ಕ್ಷೇತ್ರಗಳ ಮತದಾರರು ಮೊದಲ ಹಂತದಲ್ಲಿ ತಮ್ಮ ಹಕ್ಕು ಚಲಾಯಿಸಲು ಮುಂದಾಗಿದ್ದಾರೆ.
ಲೋಕಸಭೆ ಚುನಾವಣೆ ನಂತರ ಅತಿಹೆಚ್ಚು ಕುತೂಹಲ ಕೆರಳಿಸಿರುವುದು ಬಿಹಾರದ ಈ ಎಲೆಕ್ಷನ್. ಬಿಹಾರದಲ್ಲಿ ಹಲವು ವರ್ಷಗಳಿಂದಲೂ ನಿತೀಶ್ ಕುಮಾರ್ ಮುಖ್ಯಮಂತ್ರಿ ಆಗಿದ್ದು, ಸಾಲು ಸಾಲು ಗೆಲುವು ಕಂಡಿದ್ದರೂ ಬಿಹಾರದಲ್ಲಿ ಆಡಳಿತ ವಿರೋಧಿ ಅಲೆ ಇದೆ ಎಂಬುದು ವಿರೋಧ ಪಕ್ಷಗಳ ನಾಯಕರ ಆರೋಪ. ಅದರಲ್ಲೂ ಕಾಂಗ್ರೆಸ್ ಮತ್ತು ಆರ್ಜೆಡಿ ನೇತೃತ್ವದಲ್ಲಿ ವಿರೋಧ ಪಕ್ಷಗಳ ಒಕ್ಕೂಟ ಬಿಜೆಪಿ & ಜೆಡಿಯು ನೇತೃತ್ವದ ಎನ್ಡಿಎ ವಿರುದ್ಧ ತೊಡೆತಟ್ಟಿದೆ.

ಬಿಹಾರದಲ್ಲಿ ಮತದಾನದ ಸಮಯ ಏನು?
ಹೀಗಾಗಿ ಯಾರಿಗೆ ಈ ಹೋರಾಟದಲ್ಲಿ ಗೆಲುವು? ಯಾರ ಪಾಲಿಗೆ ಸೋಲು? ಎಂಬ ಚರ್ಚೆ ಕೂಡ ಜೋರಾಗಿದೆ. ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆ ತನಕವೂ ಬಿಹಾರ ವಿಧಾನಸಭೆ ಚುನಾವಣೆಯ ಮೊದಲನೇ ಹಂತದ ಮತದಾನಕ್ಕೆ ವ್ಯವಸ್ಥೆ ಮಾಡಲಾಗಿದೆ. ಆದರೆ ಕೆಲವು ಸೂಕ್ಷ್ಮ ಪ್ರದೇಶಗಳಲ್ಲಿ ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆ ತನಕ ಮಾತ್ರ ವೋಟಿಂಗ್ ನಡೆಯಲಿದೆ. ಹೀಗಾಗಿ ಎಲ್ಲಾ ಮತಗಟ್ಟೆಗಳ ಬಳಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಅಹಿತಕರ ಘಟನೆಗಳು ನಡೆಯದ ರೀತಿ ಕ್ರಮ ಕೈಗೊಳ್ಳಲಾಗಿದೆ.
ಪ್ರಧಾನಿ ಮೋದಿ ಅವರಿಂದ ವಿಶೇಷ ಸಂದೇಶ
ಬಿಹಾರ ವಿಧಾನಸಭೆ ಚುನಾವಣೆಗೆ ಮೊದಲನೇ ಹಂತದಲ್ಲಿ ಮತದಾನ ಆರಂಭವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಸ್ಪೆಷಲ್ ಟ್ವೀಟ್ ಮಾಡಿದ್ದಾರೆ. 'ಬಿಹಾರದಲ್ಲಿ ಇಂದು ಪ್ರಜಾಪ್ರಭುತ್ವದ ಮೊದಲ ಹಂತವಾಗಿದೆ. ವಿಧಾನಸಭಾ ಚುನಾವಣೆಯ ಮೊದಲ ಹಂತದಲ್ಲಿ ಎಲ್ಲಾ ಮತದಾರರು ಉತ್ಸಾಹದಿಂದ ಮತ ಚಲಾಯಿಸುವಂತೆ ನಾನು ಮನವಿ ಮಾಡುತ್ತೇನೆ. ಹಾಗೂ ಇದೀಗ ಮೊದಲ ಬಾರಿ ಮತ ಚಲಾಯಿಸುತ್ತಿರುವ ರಾಜ್ಯದ ನನ್ನ ಎಲ್ಲಾ ಯುವ ಸ್ನೇಹಿತರಿಗೆ ನನ್ನ ವಿಶೇಷವಾದ ಅಭಿನಂದನೆ. ನೆನಪಿಡಿ: ಮೊದಲು ಮತ, ನಂತರ ಬ್ರೇಕ್ಫಾಸ್ಟ್!' ಎಂದು ಚುನಾವಣೆಯ ವಿಶೇಷ ಸಂದೇಶವನ್ನು ರವಾನಿಸಿದ್ದಾರೆ ಪ್ರಧಾನಿ ಮೋದಿ ಅವರು. ಈಗಾಗಲೇ ಮತದಾನ ಆರಂಭವಾಗಿದ್ದು, ಬಿಹಾರದಲ್ಲಿ ಬೆಳ್ಳಂಬೆಳಗ್ಗೆ ಮತದಾರರು ಅತ್ಯಂತ ಉತ್ಸಾಹದಿಂದ ಬಂದು ಮತ ಚಲಾಯಿಸುತ್ತಿದ್ದಾರೆ.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications