Bihar Election 2025: ಬಿಹಾರದಲ್ಲಿ ಮತದಾನ ಪ್ರಮಾಣ ಶೇ. 64.66, ಗೆಲುವು & ಸೋಲಿನ ಲೆಕ್ಕಾಚಾರ ಶುರು!
ಬಿಹಾರ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ ಪ್ರಕ್ರಿಯೆ ಮುಕ್ತಾಯವಾಗಿದೆ. ಬಿಹಾರ ಡಿಸಿಎಂ ಮೇಲೆ ಹಲ್ಲೆಗೆ ಯತ್ನ ಸೇರಿದಂತೆ ಹಲವು ಅಹಿತಕರ ಘಟನೆಗಳಿಗೆ ಬಿಹಾರ ಈ ಬಾರಿ ಕೂಡ ಸಾಕ್ಷಿಯಾಗಿತ್ತು. ಈ ಮೂಲಕ ಬಿಹಾರದಲ್ಲಿ ಒಂದಷ್ಟು ಹಿಂಸೆಯ ನಡುವೆ ಕೂಡ ಮತದಾನ ಮುಕ್ತಾಯವಾಗಿದ್ದು, ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ. ಆದರೆ ವೋಟ್ ಪರ್ಸಂಟೇಜ್ ಮಾತ್ರ ತೀವ್ರ ಹಿನ್ನಡೆ ಕಂಡಿದೆ ಎಂಬ ಚರ್ಚೆ ಶುರುವಾಗಿದೆ. ಮೊದಲ ಹಂತದಲ್ಲಿ ಕೇವಲ ಶೇಕಡಾ 64.66 ರಷ್ಟು ಮಾತ್ರ ಮತದಾನವಾಗಿದೆ.
ಲೋಕಸಭೆ ಚುನಾವಣೆಯ ನಂತರ ಅತಿಹೆಚ್ಚು ಕುತೂಹಲ ಕೆರಳಿಸಿರುವುದು ಬಿಹಾರದ ಎಲೆಕ್ಷನ್. ಬಿಹಾರದಲ್ಲಿ ಹಲವು ವರ್ಷಗಳಿಂದಲೂ ನಿತೀಶ್ ಕುಮಾರ್ ಮುಖ್ಯಮಂತ್ರಿ ಆಗಿದ್ದು, ಸಾಲು ಸಾಲು ಗೆಲುವು ಕಂಡಿದ್ದರೂ ಬಿಹಾರದಲ್ಲಿ ಆಡಳಿತ ವಿರೋಧಿ ಅಲೆ ಇದೆ ಎಂಬುದು ವಿಪಕ್ಷಗಳ ನಾಯಕರ ಆರೋಪ. ಅದ್ರಲ್ಲೂ ಕಾಂಗ್ರೆಸ್ ಮತ್ತು ಆರ್ಜೆಡಿ ನೇತೃತ್ವದಲ್ಲಿ ವಿರೋಧ ಪಕ್ಷಗಳ ಒಕ್ಕೂಟ ಬಿಜೆಪಿ & ಜೆಡಿಯು ನೇತೃತ್ವದ ಎನ್ಡಿಎ ವಿರುದ್ಧ ತೊಡೆತಟ್ಟಿದೆ. ಹೀಗಿದ್ದಾಗ ಸೋಲು & ಗೆಲುವಿನ ಬಗ್ಗೆ ಲೆಕ್ಕಾಚಾರ ಜೋರಾಗಿಯೇ ಇತ್ತು. ಆದರೆ ಮತದಾನ ಸಾಕಷ್ಟು ಕಡಿಮೆ ಪ್ರಮಾಣದಲ್ಲಿ ಆಗಿದ್ದು ಚರ್ಚೆಗೆ ವೇದಿಕೆ ಒದಗಿಸಿದೆ.

121 ಕ್ಷೇತ್ರಗಳಿಗೆ ಮತದಾನ ನಡೆದಿತ್ತು
2 ಹಂತಗಳಲ್ಲಿ ಬಿಹಾರ ವಿಧಾನಸಭೆ ಚುನಾವಣೆ ನಡೆಯುತ್ತಿದ್ದು, ಈಗ 18 ಜಿಲ್ಲೆಗಳ 121 ಕ್ಷೇತ್ರಗಳ ಮತದಾರರು ಮೊದಲ ಹಂತದಲ್ಲಿ ಹಕ್ಕು ಚಲಾಯಿಸಿದ್ದಾರೆ. ಹೀಗಾಗಿ ಬಿಹಾರದಲ್ಲಿ ಮತದಾನವು ನಡೆದ ಪ್ರದೇಶದಲ್ಲಿ ಭಾರಿ ಭದ್ರತೆ ಒದಗಿಸಲಾಗಿತ್ತು. ಹೀಗಿದ್ದರೂ ಬಿಹಾರದಲ್ಲಿ ಜನ ಡಿಸಿಎಂ ಕಾರ್ ಮೇಲೆ ಅಟ್ಯಾಕ್ ಮಾಡಿರುವ ಆರೋಪ ಕೇಳಿ ಬಂದಿದೆ. ದೇಶಾದ್ಯಂತ ಈ ಘಟನೆ ಬಗ್ಗೆ ಚರ್ಚೆಯು ಕೂಡ ನಡೆಯುತ್ತಿದೆ. ಮತ್ತೊಂದು ಕಡೆ ಮತದಾನ ಪ್ರಮಾಣ ಕೂಡ ಕಡಿಮೆ ಆಗಿರುವುದು ಈಗ ರಾಜಕೀಯ ನಾಯಕರ ಚಿಂತೆ ಹೆಚ್ಚು ಮಾಡಿದೆ.
ಮತದಾನ ಮಾಡಲು ಬಂದಿದ್ದೆಷ್ಟು ಜನ?
ಅಂದಹಾಗೆ ಬಿಹಾರದಲ್ಲಿ ಮೊದಲ ಹಂತದ ಮತದಾನ ಆರಂಭವಾದ ನಂತರ ಬೆಳಗ್ಗೆ 11 ಗಂಟೆ ತನಕ ಶೇ. 27.65 ರಷ್ಟು ಪ್ರಮಾಣದಲ್ಲಿ ಮತದಾನವಾಗಿತ್ತು. ಆ ನಂತರ ಕೂಡ ದೊಡ್ಡ ಮಟ್ಟದ ಚೇತರಿಕೆ ಕಂಡುಬರಲೇ ಇಲ್ಲ, ಮಧ್ಯಾಹ್ನ 3 ಗಂಟೆ ತನಕ ಶೇ. 53.77 ರಷ್ಟು ಮಾತ್ರ ಮತದಾನ ಆಗಿತ್ತು. ಅದೆಲ್ಲಾ ಮುಗಿದ ನಂತರ ಅಂತಿಮವಾಗಿ ಒಟ್ಟು ಮತದಾನ ಪ್ರಮಾಣ ಶೇಕಡಾ 64.66ಕ್ಕೆ ಕೊನೆಯಾಗಿದೆ.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications