ಬಿಹಾರ ಚುನಾವಣೆ ಫಲಿತಾಂಶ: ನರೇಂದ್ರ ಮೋದಿಗೆ ಅಗ್ನಿ ಪರೀಕ್ಷೆ, ಯಾಕೆ ?
ಬಿಹಾರ ವಿಧಾನಸಭೆ ಚುನಾವಣೆಯ ಫಲಿತಾಂಶದಲ್ಲಿ ಯಾವುದೇ ಪಕ್ಷ ಅಧಿಕಾರಕ್ಕೆ ಬಂದರೂ ಹೊಸ ಇತಿಹಾಸ ಸೃಷ್ಟಿ ಆಗಲಿದೆ. ಬಿಹಾರದಲ್ಲಿ ಈ ಬಾರಿ ಎನ್ಡಿಎ ಅಥವಾ ಮಹಾಘಟಬಂಧನ್ ಯಾವುದೇ ಮೈತ್ರಿ ಕೂಟ ಅಧಿಕಾರಕ್ಕೇರಿದರೂ ಅದು ಹೊಸ ರಾಜಕೀಯಕ್ಕೆ ಸಾಕ್ಷಿ ಆಗಲಿದೆ. ಇದಕ್ಕೆ ಮುಖ್ಯ ಕಾರಣ ಬಿಹಾರದ ರಾಜಕೀಯದಲ್ಲಿ ಇತ್ತೀಚಿನ ದಿನಗಳಲ್ಲಿ ಆಗಿರುವ ಪ್ರಮುಖ ಬದಲಾವಣೆಗಳು. ದೇಶದ ಎಲ್ಲರ ಗಮನವು ಈಗ ಬಿಹಾರದ ಫಲಿತಾಂಶದ ಮೇಲಿದೆ.
ಈ ಬಾರಿಯ ಬಿಹಾರದ ವಿಧಾನಸಭೆ ಚುನಾವಣೆಯು ಐವರಿಗೆ ಅತ್ಯಂತ ಮಹತ್ವದಾಗಿದೆ. ಕೇಂದ್ರದಲ್ಲೂ ಮೈತ್ರಿ ಹೊಂದಿರುವ ಜನತಾದಳ (ಸಂಯುಕ್ತ)ಕ್ಕೆ ಬಿಹಾರದ ವಿಧಾನಸಭೆ ಚುನಾವಣೆಯು ಅಗ್ನಿ ಪರೀಕ್ಷೆ ಎಂದೇ ಪರಿಗಣಿಸಲಾಗಿದೆ. ಪೂರ್ವ ಭಾರತದ ಪ್ರಮುಖ ರಾಜ್ಯಗಳಲ್ಲಿ ಬಿಹಾರವೂ ಒಂದಾಗಿದೆ. ಆರ್ಥಿಕವಾಗಿ ಹಾಗೂ ಶೈಕ್ಷಣಿಕವಾಗಿಯೂ ಹಿಂದುಳಿದಿರುವ ಈ ರಾಜ್ಯವು ಹೊಸ ಬದಲಾವಣೆಯ ನಿರೀಕ್ಷೆಯಲ್ಲಿದೆ. ಒಂದು ಕಾಲದಲ್ಲಿ ಗೂಂಡಾ ರಾಜ್ಯ, ಜಂಗಲ್ ರಾಜನ ಆಡಳಿತ ಎನ್ನುವ ಕುಖ್ಯಾತಿ ಗಳಿಸಿದ್ದ ರಾಜ್ಯವು ಇದೀಗ ಕ್ರಮೇಣ ತನ್ನ ವರ್ಚಸ್ಸು ಬದಲಾಯಿಸಿಕೊಳ್ಳುತ್ತಿದೆ. ಆದರೆ ಇದು ಪೂರ್ಣ ಪ್ರಮಾಣದಲ್ಲಿ ಆಗಿಲ್ಲ.

ಬಿಹಾರ ರಾಜ್ಯವು ಇಲ್ಲಿಯ ವರೆಗೆ 23 ಮುಖ್ಯಮಂತ್ರಿಗಳನ್ನು ಕಂಡಿದೆ. ಆದರೆ ಇಂದಿಗೂ ಈ ರಾಜ್ಯದಲ್ಲಿ ಕನಿಷ್ಠ ವೇತನ, ಉದ್ಯೋಗ, ಶಿಕ್ಷಣ, ಬಡತನ ಹಾಗೂ ಅಭಿವೃದ್ಧಿ ವಿಚಾರಗಳಲ್ಲಿ ಭಾರೀ ಹಿಂದುಳಿದಿದೆ. ಅಲ್ಲದೇ ಹಲವು ರಾಜಕೀಯ ಸ್ಥಿತ್ಯಂತರಗಳು, ಅಚ್ಚರಿಯ ಬೆಳವಣಿಗೆಗಳಿಗೂ ಬಿಹಾರ ಸಾಕ್ಷಿಯಾಗಿದೆ. ಬಿಹಾರದಲ್ಲಿ ಆರಂಭದಲ್ಲಿ ಕಾಂಗ್ರೆಸ್ ಪ್ರಾಬಲ್ಯವಿತ್ತು. ಜೆಪಿ ಚಳವಳಿ ಸೇರಿ ಅನೇಕ ಆಂದೋಲನಗಳ ಬಳಿಕ ಸಮಾಜವಾದಿ ಸಿದ್ಧಾಂತ ಪ್ರಸಿದ್ಧಿ ಗಳಿಸಿತ್ತು.
ಈ ಬಾರಿಯ ಚುನಾವಣೆಯು ನಿತೀಶ್ ಕುಮಾರ್, ನರೇಂದ್ರ ಮೋದಿ, ರಾಹುಲ್ ಗಾಂಧಿ, ತೇಜಸ್ವಿ ಯಾದವ್ ಹಾಗೂ ಪ್ರಶಾಂತ್ ಕಿಶೋರ್ ಸೇರಿದಂತೆ ಹಲವು ರಾಜಕೀಯ ನಾಯಕರಿಗೆ ಪ್ರಮುಖವಾಗಿದೆ.
ಮೋದಿಗೆ ಅಗ್ನಿ ಪರೀಕ್ಷೆ: ಈ ಬಾರಿಯ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಮೋದಿಗೆ ಅಗ್ನಿ ಪರೀಕ್ಷೆ ಶುರುವಾಗಿದೆ. ಇದಕ್ಕೆ ಮುಖ್ಯ ಕಾರಣ ಬಿಹಾರದ ಎರಡನೇ ಹಂತದ ಮತದಾನ ನಡೆಯುವ ಮುಂಚೆ ನಡೆದ ದೆಹಲಿಯ ಬಾಂಬ್ ಸ್ಫೋಟ, ಬಿಹಾರದಲ್ಲಿ ಪ್ರಭಾವಿಗಳಿಗೆ ಕಡಿಮೆ ಬೆಲೆಯಲ್ಲಿ ಭೂಮಿ ದಾನ ಮಾಡಿದ ವಿಚಾರ ಹಾಗೂ ವೋಟ್ ಚೋರಿ ವಿಚಾರ ಭಾರೀ ಚರ್ಚೆಗೆ ಕಾರಣವಾಗಿದೆ. ಬಿಹಾರದಲ್ಲಿ ಆಡಳಿತ ವಿರೋಧಿ ಅಲೆಯೂ ಇರುವುದರಿಂದ ಈ ಬಾರಿಯ ಫಲಿತಾಂಶವು ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಚಾಲೆಂಜಿಂಗ್ ಆಗಿದೆ.
-
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ












Click it and Unblock the Notifications