ಬಿಹಾರ ಚುನಾವಣೆ ಫಲಿತಾಂಶ: ನರೇಂದ್ರ ಮೋದಿಗೆ ಅಗ್ನಿ ಪರೀಕ್ಷೆ, ಯಾಕೆ ?
ಬಿಹಾರ ವಿಧಾನಸಭೆ ಚುನಾವಣೆಯ ಫಲಿತಾಂಶದಲ್ಲಿ ಯಾವುದೇ ಪಕ್ಷ ಅಧಿಕಾರಕ್ಕೆ ಬಂದರೂ ಹೊಸ ಇತಿಹಾಸ ಸೃಷ್ಟಿ ಆಗಲಿದೆ. ಬಿಹಾರದಲ್ಲಿ ಈ ಬಾರಿ ಎನ್ಡಿಎ ಅಥವಾ ಮಹಾಘಟಬಂಧನ್ ಯಾವುದೇ ಮೈತ್ರಿ ಕೂಟ ಅಧಿಕಾರಕ್ಕೇರಿದರೂ ಅದು ಹೊಸ ರಾಜಕೀಯಕ್ಕೆ ಸಾಕ್ಷಿ ಆಗಲಿದೆ. ಇದಕ್ಕೆ ಮುಖ್ಯ ಕಾರಣ ಬಿಹಾರದ ರಾಜಕೀಯದಲ್ಲಿ ಇತ್ತೀಚಿನ ದಿನಗಳಲ್ಲಿ ಆಗಿರುವ ಪ್ರಮುಖ ಬದಲಾವಣೆಗಳು. ದೇಶದ ಎಲ್ಲರ ಗಮನವು ಈಗ ಬಿಹಾರದ ಫಲಿತಾಂಶದ ಮೇಲಿದೆ.
ಈ ಬಾರಿಯ ಬಿಹಾರದ ವಿಧಾನಸಭೆ ಚುನಾವಣೆಯು ಐವರಿಗೆ ಅತ್ಯಂತ ಮಹತ್ವದಾಗಿದೆ. ಕೇಂದ್ರದಲ್ಲೂ ಮೈತ್ರಿ ಹೊಂದಿರುವ ಜನತಾದಳ (ಸಂಯುಕ್ತ)ಕ್ಕೆ ಬಿಹಾರದ ವಿಧಾನಸಭೆ ಚುನಾವಣೆಯು ಅಗ್ನಿ ಪರೀಕ್ಷೆ ಎಂದೇ ಪರಿಗಣಿಸಲಾಗಿದೆ. ಪೂರ್ವ ಭಾರತದ ಪ್ರಮುಖ ರಾಜ್ಯಗಳಲ್ಲಿ ಬಿಹಾರವೂ ಒಂದಾಗಿದೆ. ಆರ್ಥಿಕವಾಗಿ ಹಾಗೂ ಶೈಕ್ಷಣಿಕವಾಗಿಯೂ ಹಿಂದುಳಿದಿರುವ ಈ ರಾಜ್ಯವು ಹೊಸ ಬದಲಾವಣೆಯ ನಿರೀಕ್ಷೆಯಲ್ಲಿದೆ. ಒಂದು ಕಾಲದಲ್ಲಿ ಗೂಂಡಾ ರಾಜ್ಯ, ಜಂಗಲ್ ರಾಜನ ಆಡಳಿತ ಎನ್ನುವ ಕುಖ್ಯಾತಿ ಗಳಿಸಿದ್ದ ರಾಜ್ಯವು ಇದೀಗ ಕ್ರಮೇಣ ತನ್ನ ವರ್ಚಸ್ಸು ಬದಲಾಯಿಸಿಕೊಳ್ಳುತ್ತಿದೆ. ಆದರೆ ಇದು ಪೂರ್ಣ ಪ್ರಮಾಣದಲ್ಲಿ ಆಗಿಲ್ಲ.

ಬಿಹಾರ ರಾಜ್ಯವು ಇಲ್ಲಿಯ ವರೆಗೆ 23 ಮುಖ್ಯಮಂತ್ರಿಗಳನ್ನು ಕಂಡಿದೆ. ಆದರೆ ಇಂದಿಗೂ ಈ ರಾಜ್ಯದಲ್ಲಿ ಕನಿಷ್ಠ ವೇತನ, ಉದ್ಯೋಗ, ಶಿಕ್ಷಣ, ಬಡತನ ಹಾಗೂ ಅಭಿವೃದ್ಧಿ ವಿಚಾರಗಳಲ್ಲಿ ಭಾರೀ ಹಿಂದುಳಿದಿದೆ. ಅಲ್ಲದೇ ಹಲವು ರಾಜಕೀಯ ಸ್ಥಿತ್ಯಂತರಗಳು, ಅಚ್ಚರಿಯ ಬೆಳವಣಿಗೆಗಳಿಗೂ ಬಿಹಾರ ಸಾಕ್ಷಿಯಾಗಿದೆ. ಬಿಹಾರದಲ್ಲಿ ಆರಂಭದಲ್ಲಿ ಕಾಂಗ್ರೆಸ್ ಪ್ರಾಬಲ್ಯವಿತ್ತು. ಜೆಪಿ ಚಳವಳಿ ಸೇರಿ ಅನೇಕ ಆಂದೋಲನಗಳ ಬಳಿಕ ಸಮಾಜವಾದಿ ಸಿದ್ಧಾಂತ ಪ್ರಸಿದ್ಧಿ ಗಳಿಸಿತ್ತು.
ಈ ಬಾರಿಯ ಚುನಾವಣೆಯು ನಿತೀಶ್ ಕುಮಾರ್, ನರೇಂದ್ರ ಮೋದಿ, ರಾಹುಲ್ ಗಾಂಧಿ, ತೇಜಸ್ವಿ ಯಾದವ್ ಹಾಗೂ ಪ್ರಶಾಂತ್ ಕಿಶೋರ್ ಸೇರಿದಂತೆ ಹಲವು ರಾಜಕೀಯ ನಾಯಕರಿಗೆ ಪ್ರಮುಖವಾಗಿದೆ.
ಮೋದಿಗೆ ಅಗ್ನಿ ಪರೀಕ್ಷೆ: ಈ ಬಾರಿಯ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಮೋದಿಗೆ ಅಗ್ನಿ ಪರೀಕ್ಷೆ ಶುರುವಾಗಿದೆ. ಇದಕ್ಕೆ ಮುಖ್ಯ ಕಾರಣ ಬಿಹಾರದ ಎರಡನೇ ಹಂತದ ಮತದಾನ ನಡೆಯುವ ಮುಂಚೆ ನಡೆದ ದೆಹಲಿಯ ಬಾಂಬ್ ಸ್ಫೋಟ, ಬಿಹಾರದಲ್ಲಿ ಪ್ರಭಾವಿಗಳಿಗೆ ಕಡಿಮೆ ಬೆಲೆಯಲ್ಲಿ ಭೂಮಿ ದಾನ ಮಾಡಿದ ವಿಚಾರ ಹಾಗೂ ವೋಟ್ ಚೋರಿ ವಿಚಾರ ಭಾರೀ ಚರ್ಚೆಗೆ ಕಾರಣವಾಗಿದೆ. ಬಿಹಾರದಲ್ಲಿ ಆಡಳಿತ ವಿರೋಧಿ ಅಲೆಯೂ ಇರುವುದರಿಂದ ಈ ಬಾರಿಯ ಫಲಿತಾಂಶವು ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಚಾಲೆಂಜಿಂಗ್ ಆಗಿದೆ.
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
Prem: ಆಗ ಅಪ್ಪಾಜಿ-ಅಂಬರೀಷಣ್ಣ ಇದ್ರು, ಈಗ ಯಾರಿದ್ದಾರೆ; ಕೆಡಿ ವಿವಾದ ಆದಾಗಲೂ ಯಾರೂ ಸಪೋರ್ಟ್ಗೆ ಬರಲಿಲ್ಲ: ಪ್ರೇಮ್ ಬೇಸರ












Click it and Unblock the Notifications