ಬಗೆಹರಿದ ಬಿಹಾರ ಮೈತ್ರಿ ಕೂಟದ ಸೀಟು ಹಂಚಿಕೆ ಕಸರತ್ತು
ಪಾಟ್ನಾ, ಆಗಸ್ಟ್ 12 : ಭಾರೀ ಕುತೂಹಲ ಕೆರಳಿಸಿರುವ ಬಿಹಾರದಲ್ಲಿ ಚುನಾವಣಾ ಮೈತ್ರಿ ಮಾತುಕತೆ ಪೂರ್ಣಗೊಂಡಿದ್ದು, ಸೀಟು ಹಂಚಿಕೆ ಪ್ರಕ್ರಿಯೆಯೂ ಅಂತ್ಯಗೊಂಡಿದೆ. ಆರ್ಜೆಡಿ ಮತ್ತು ಜೆಡಿಯು ತಲಾ 100 ಸ್ಥಾನಗಳಲ್ಲಿ ಸ್ಪರ್ಧಿಸಲಿವೆ.
ಬುಧವಾರ ಪಾಟ್ನಾದಲ್ಲಿ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ಆರ್ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಮತ್ತು ಜೆಡಿಯು ಮಖ್ಯಸ್ಥ ನಿತೀಶ್ ಕುಮಾರ್, ಚುನಾವಣಾ ಮೈತ್ರಿಯ ಬಗ್ಗೆ ಮಾಹಿತಿ ನೀಡಿದರು. ಆಗಸ್ಟ್ 30ರಂದು ಗಾಂಧಿ ಮೈದಾನದಲ್ಲಿ 'ಬಿಹಾರ್ ಸ್ವಾಭಿಮಾನ ಸಮಾವೇಶ' ನಡೆಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.

ಬಿಹಾರ ವಿಧಾನಸಭೆಯ ಒಟ್ಟು ಸದಸ್ಯರ ಸಂಖ್ಯೆ 243. ಮುಂಬರುವ ಚುನಾವಣೆಯಲ್ಲಿ ರಾಷ್ಟ್ರೀಯ ಜನತಾ ದಳ (ಆರ್ಜೆಡಿ) 100, ಸಂಯುಕ್ತ ಜನತಾ ದಳ (ಜೆಡಿಯು) 100 ಹಾಗೂ ಕಾಂಗ್ರೆಸ್ ಪಕ್ಷ 40 ಸೀಟುಗಳನ್ನು ಹಂಚಿಕೆ ಮಾಡಿಕೊಂಡಿವೆ. [ಬಿಹಾರದ ಅದೃಷ್ಟವನ್ನು ಬಿಜೆಪಿ ಬದಲಾಯಿಸಲಿದೆ : ಮೋದಿ]
ಮೋದಿ ಆರೋಪಕ್ಕೆ ಉತ್ತರ : ಕಳೆದ ಭಾನುವಾರ ಬಿಹಾರದಲ್ಲಿ ಸಮಾವೇಶ ಉದ್ದೇಶಿಸಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಹಲವಾರು ಆರೋಪಗಳನ್ನು ಮಾಡಿದ್ದಾರೆ. ಆ.30ರಂದು ಈ ಆರೋಪಗಳಿಗೆ ಉತ್ತರ ನೀಡಲಾಗುತ್ತದೆ ಎಂದು ಲಾಲೂ ಪ್ರಸಾದ್ ಯಾದವ್ ತಿಳಿಸಿದರು. [ನಿತೀಶ್ ಕುಮಾರ್ ಪ್ರಶ್ನೆಗೆ ಮೋದಿ ಖಡಕ್ ಉತ್ತರ]
ಪ್ರಧಾನಿ ನರೇಂದ್ರ ಮೋದಿ ಅವರು ಬಿಹಾರವನ್ನು ಅವಮಾನಿಸಿದ್ದಾರೆ. ಇದಕ್ಕೆ ಚುನಾವಣೆಯಲ್ಲಿಯೇ ಬಿಹಾರದ ಜನರು ಉತ್ತರ ಕೊಡುತ್ತಾರೆ. ನಾವೆಲ್ಲರೂ ಒಂದ್ದಾಗಿದ್ದೇವು, ಈಗ ಒಂದಾಗಿದ್ದೇವೆ. ಕೇಸರಿ ಪಕ್ಷಕ್ಕೆ ಚುನಾವಣೆಯಲ್ಲಿ ಪಾಠ ಕಲಿಸುತ್ತೇವೆ ಎಂದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications