Bihar Exit Poll Result 2025: ಟೈಮ್ಸ್ ನೌ ಜೆವಿಸಿ ಪ್ರಕಾರ ಬಿಹಾರದಲ್ಲಿ ಈ ಪಕ್ಷಕ್ಕೆ ಪೂರ್ಣ ಬಹುಮತ
ಬಿಹಾರ ವಿಧಾನಸಭೆ ಚುನಾವಣೆ ಪೂರ್ಣಗೊಂಡಿದೆ. ಎರಡು ಹಂತಗಳಲ್ಲಿ ಈ ಚುನಾವಣೆ ನಡೆದಿದ್ದು, ಅಂತಿಮ ಹಂತದ ಮತದಾನಕ್ಕೆ ಇಂದು ತೆರೆ ಬಿದ್ದಿದೆ. ಬಿಹಾರದ 243 ವಿಧಾನಸಭಾ ಕ್ಷೇತ್ರಗಳಿಗೆ ಎರಡು ಹಂತಗಳಲ್ಲಿ ಮತದಾನ ನಡೆದಿದ್ದು, ನವೆಂಬರ್ 14ರಂದು ಚುನಾವಣಾ ಫಲಿತಾಂಶ ಘೋಷಣೆಯಾಗಲಿದೆ. ಎಂದಿನಂತೆ ವಿವಿಧ ಏಜೆನ್ಸಿಗಳು ಹಾಗೂ ಮಾಧ್ಯಮ ಸಂಸ್ಥೆಗಳು ಚುನಾವಣೋತ್ತರ ಸಮೀಕ್ಷೆ (ಎಕ್ಸಿಟ್ ಪೋಲ್) ನಡೆಸಿದ್ದು, ಬಿಹಾರದಲ್ಲಿ ಈ ಬಾರಿ ಅಧಿಕಾರಕ್ಕೆ ಬರುವುದು ಯಾರು? ಎಂಬ ಭವಿಷ್ಯ ನುಡಿದಿವೆ. ಟೈಮ್ಸ್ ನೌ ಜೆವಿಸಿ (Times Now JVC) ಸಂಸ್ಥೆ ಕೂಡ ಎಕ್ಸಿಟ್ ಪೋಲ್ ಫಲಿತಾಂಶ ಪ್ರಕಟಿಸಿದೆ.
ನವೆಂಬರ್ 6ರಂದು ಮೊದಲ ಹಂತದಲ್ಲಿ 18 ಜಿಲ್ಲೆಗಳ 121 ಕ್ಷೇತ್ರಗಳಲ್ಲಿ ಶೇ 65.08ರಷ್ಟು ಮತದಾನ ನಡೆದಿತ್ತು. ನವೆಂಬರ್ 11ರಂದು ಇಂದು ಎರಡನೇ ಹಂತದಲ್ಲಿ 20 ಜಿಲ್ಲೆಗಳ ಉಳಿದ 122 ಕ್ಷೇತ್ರಗಳಲ್ಲಿ ಮತದಾನ ನಡೆದಿದೆ. ಚುನಾವಣೆಗೆ ತೆರೆ ಬೀಳುತ್ತಿದ್ದಂತೆ ಚುನಾವಣೋತ್ತರ ಸಮೀಕ್ಷೆಗಳ ಫಲಿತಾಂಶಗಳು ಹೊರಬಿದ್ದಿವೆ. ಬಿಹಾರದಲ್ಲಿ ಈ ಬಾರಿ ಪಟ್ಟಕ್ಕೇರುವುದು ಯಾರು? ಎಂದು ಸುಳಿವು ನೀಡಿವೆ.

ಅದರಂತೆ ಟೈಮ್ಸ್ ನೌ ಜೆವಿಸಿ ಎಕ್ಸಿಟ್ ಪೋಲ್ ಪ್ರಕಾರ ಎನ್ಡಿಎ 135-150 ಸ್ಥಾನಗಳನ್ನು ಪಡೆಯಲಿದೆ. ಮಹಾಘಟಬಂಧನ್ಗೆ 88-103 ಕ್ಷೇತ್ರಗಳಲ್ಲಿ ಗೆಲುವು ಸಿಗಲಿದೆ. ಇತರೆ 3ರಿಂದ 7 ಸ್ಥಾನಗಳನ್ನು ಪಡೆಯಬಹುದು ಎಂದು ಅಂದಾಜಿಸಿದೆ. ಬಿಹಾರ ಚುನಾವಣೆಯ ಎರಡನೇ ಮತ್ತು ಅಂತಿಮ ಹಂತವು ಆಡಳಿತಾರೂಢ ಎನ್ಡಿಎ ಮತ್ತು ವಿರೋಧ ಪಕ್ಷವಾದ "ಇಂಡಿಯಾ" ಬಣಕ್ಕೆ ನಿರ್ಣಾಯಕವಾಗಿದೆ.
243 ವಿಧಾನಸಭಾ ಸ್ಥಾನಗಳಲ್ಲಿ ಒಂದು ಪಕ್ಷ ಅಥವಾ ಮೈತ್ರಿಕೂಟ ಸರ್ಕಾರ ರಚಿಸಲು ಕನಿಷ್ಠ 122 ಸ್ಥಾನಗಳನ್ನು ಗೆಲ್ಲಬೇಕಿದೆ. ಅದರಂತೆ ಟೈಮ್ಸ್ ನೌ ಜೆವಿಸಿ ಎಕ್ಸಿಟ್ ಪೋಲ್ ಪ್ರಕಾರ ಎನ್ಡಿಎ ಒಕ್ಕೂಟಕ್ಕೆ ಪೂರ್ಣ ಬಹುಮತ ಸಿಗಲಿದ್ದು, ಮತ್ತೊಮ್ಮೆ ಅಧಿಕಾರಕ್ಕೇರಲಿದೆ ಎಂಬ ಭವಿಷ್ಯ ನುಡಿದಿದೆ.

ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಜೆಡಿ(ಯು)-ಬಿಜೆಪಿ ನೇತೃತ್ವದ ಎನ್ಡಿಎ ಈ ಬಾರಿಯೂ ಅಧಿಕಾರವನ್ನು ಉಳಿಸಿಕೊಳ್ಳುತ್ತದೆಯೇ? ಅಥವಾ ತೇಜಸ್ವಿ ಯಾದವ್ ನೇತೃತ್ವದ ಮಹಾಘಟಬಂಧನ್ ಕುಮಾರ್ ಅವರ 20 ವರ್ಷಗಳ ಸುದೀರ್ಘ ಅಧಿಕಾರಾವಧಿಯನ್ನು ಕೊನೆಗೊಳಿಸುವಲ್ಲಿ ಯಶಸ್ವಿಯಾಗುತ್ತದೆಯೇ ಎಂಬುದನ್ನು ಈ ಫಲಿತಾಂಶ ನಿರ್ಧರಿಸಲಿದೆ.
2020ರಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ 42 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಆರ್ಜೆಡಿ 33 ಸ್ಥಾನಗಳನ್ನು, ಜನತಾದಳ (ಯುನೈಟೆಡ್) 20 ಸ್ಥಾನಗಳನ್ನು, ಕಾಂಗ್ರೆಸ್ 11 ಮತ್ತು ಎಡಪಕ್ಷಗಳು ಒಟ್ಟಾಗಿ ಐದು ಸ್ಥಾನಗಳನ್ನು ಗೆದ್ದಿತ್ತು.
ಇಂದು ಬಿಹಾರ ವಿಧಾನಸಭಾ ಚುನಾವಣೆಯ ಎರಡನೇ ಹಂತದಲ್ಲಿ ಸಂಜೆ 5 ಗಂಟೆಯವರೆಗೆ ಶೇ 67.14 ರಷ್ಟು ಮತದಾನ ದಾಖಲಾಗಿದೆ ಎಂದು ಭಾರತೀಯ ಚುನಾವಣಾ ಆಯೋಗ ತಿಳಿಸಿದೆ. ಬಿಹಾರ ಚುನಾವಣೆಯ ಎರಡನೇ ಹಂತದಲ್ಲಿ ಶೇ.67.14 ರಷ್ಟು ಅತ್ಯಧಿಕ ಮತದಾನ ದಾಖಲಾಗಿದ್ದು, ಅತಿ ಹೆಚ್ಚು ಕಾಲ ಅಧಿಕಾರದಲ್ಲಿದ್ದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಬಗ್ಗೆ ಜನಾಭಿಪ್ರಾಯ ಸಂಗ್ರಹವಾಗಿದೆ.
-
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು












Click it and Unblock the Notifications