Bihar Exit Poll Result 2025: ಟೈಮ್ಸ್ ನೌ ಜೆವಿಸಿ ಪ್ರಕಾರ ಬಿಹಾರದಲ್ಲಿ ಈ ಪಕ್ಷಕ್ಕೆ ಪೂರ್ಣ ಬಹುಮತ
ಬಿಹಾರ ವಿಧಾನಸಭೆ ಚುನಾವಣೆ ಪೂರ್ಣಗೊಂಡಿದೆ. ಎರಡು ಹಂತಗಳಲ್ಲಿ ಈ ಚುನಾವಣೆ ನಡೆದಿದ್ದು, ಅಂತಿಮ ಹಂತದ ಮತದಾನಕ್ಕೆ ಇಂದು ತೆರೆ ಬಿದ್ದಿದೆ. ಬಿಹಾರದ 243 ವಿಧಾನಸಭಾ ಕ್ಷೇತ್ರಗಳಿಗೆ ಎರಡು ಹಂತಗಳಲ್ಲಿ ಮತದಾನ ನಡೆದಿದ್ದು, ನವೆಂಬರ್ 14ರಂದು ಚುನಾವಣಾ ಫಲಿತಾಂಶ ಘೋಷಣೆಯಾಗಲಿದೆ. ಎಂದಿನಂತೆ ವಿವಿಧ ಏಜೆನ್ಸಿಗಳು ಹಾಗೂ ಮಾಧ್ಯಮ ಸಂಸ್ಥೆಗಳು ಚುನಾವಣೋತ್ತರ ಸಮೀಕ್ಷೆ (ಎಕ್ಸಿಟ್ ಪೋಲ್) ನಡೆಸಿದ್ದು, ಬಿಹಾರದಲ್ಲಿ ಈ ಬಾರಿ ಅಧಿಕಾರಕ್ಕೆ ಬರುವುದು ಯಾರು? ಎಂಬ ಭವಿಷ್ಯ ನುಡಿದಿವೆ. ಟೈಮ್ಸ್ ನೌ ಜೆವಿಸಿ (Times Now JVC) ಸಂಸ್ಥೆ ಕೂಡ ಎಕ್ಸಿಟ್ ಪೋಲ್ ಫಲಿತಾಂಶ ಪ್ರಕಟಿಸಿದೆ.
ನವೆಂಬರ್ 6ರಂದು ಮೊದಲ ಹಂತದಲ್ಲಿ 18 ಜಿಲ್ಲೆಗಳ 121 ಕ್ಷೇತ್ರಗಳಲ್ಲಿ ಶೇ 65.08ರಷ್ಟು ಮತದಾನ ನಡೆದಿತ್ತು. ನವೆಂಬರ್ 11ರಂದು ಇಂದು ಎರಡನೇ ಹಂತದಲ್ಲಿ 20 ಜಿಲ್ಲೆಗಳ ಉಳಿದ 122 ಕ್ಷೇತ್ರಗಳಲ್ಲಿ ಮತದಾನ ನಡೆದಿದೆ. ಚುನಾವಣೆಗೆ ತೆರೆ ಬೀಳುತ್ತಿದ್ದಂತೆ ಚುನಾವಣೋತ್ತರ ಸಮೀಕ್ಷೆಗಳ ಫಲಿತಾಂಶಗಳು ಹೊರಬಿದ್ದಿವೆ. ಬಿಹಾರದಲ್ಲಿ ಈ ಬಾರಿ ಪಟ್ಟಕ್ಕೇರುವುದು ಯಾರು? ಎಂದು ಸುಳಿವು ನೀಡಿವೆ.

ಅದರಂತೆ ಟೈಮ್ಸ್ ನೌ ಜೆವಿಸಿ ಎಕ್ಸಿಟ್ ಪೋಲ್ ಪ್ರಕಾರ ಎನ್ಡಿಎ 135-150 ಸ್ಥಾನಗಳನ್ನು ಪಡೆಯಲಿದೆ. ಮಹಾಘಟಬಂಧನ್ಗೆ 88-103 ಕ್ಷೇತ್ರಗಳಲ್ಲಿ ಗೆಲುವು ಸಿಗಲಿದೆ. ಇತರೆ 3ರಿಂದ 7 ಸ್ಥಾನಗಳನ್ನು ಪಡೆಯಬಹುದು ಎಂದು ಅಂದಾಜಿಸಿದೆ. ಬಿಹಾರ ಚುನಾವಣೆಯ ಎರಡನೇ ಮತ್ತು ಅಂತಿಮ ಹಂತವು ಆಡಳಿತಾರೂಢ ಎನ್ಡಿಎ ಮತ್ತು ವಿರೋಧ ಪಕ್ಷವಾದ "ಇಂಡಿಯಾ" ಬಣಕ್ಕೆ ನಿರ್ಣಾಯಕವಾಗಿದೆ.
243 ವಿಧಾನಸಭಾ ಸ್ಥಾನಗಳಲ್ಲಿ ಒಂದು ಪಕ್ಷ ಅಥವಾ ಮೈತ್ರಿಕೂಟ ಸರ್ಕಾರ ರಚಿಸಲು ಕನಿಷ್ಠ 122 ಸ್ಥಾನಗಳನ್ನು ಗೆಲ್ಲಬೇಕಿದೆ. ಅದರಂತೆ ಟೈಮ್ಸ್ ನೌ ಜೆವಿಸಿ ಎಕ್ಸಿಟ್ ಪೋಲ್ ಪ್ರಕಾರ ಎನ್ಡಿಎ ಒಕ್ಕೂಟಕ್ಕೆ ಪೂರ್ಣ ಬಹುಮತ ಸಿಗಲಿದ್ದು, ಮತ್ತೊಮ್ಮೆ ಅಧಿಕಾರಕ್ಕೇರಲಿದೆ ಎಂಬ ಭವಿಷ್ಯ ನುಡಿದಿದೆ.

ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಜೆಡಿ(ಯು)-ಬಿಜೆಪಿ ನೇತೃತ್ವದ ಎನ್ಡಿಎ ಈ ಬಾರಿಯೂ ಅಧಿಕಾರವನ್ನು ಉಳಿಸಿಕೊಳ್ಳುತ್ತದೆಯೇ? ಅಥವಾ ತೇಜಸ್ವಿ ಯಾದವ್ ನೇತೃತ್ವದ ಮಹಾಘಟಬಂಧನ್ ಕುಮಾರ್ ಅವರ 20 ವರ್ಷಗಳ ಸುದೀರ್ಘ ಅಧಿಕಾರಾವಧಿಯನ್ನು ಕೊನೆಗೊಳಿಸುವಲ್ಲಿ ಯಶಸ್ವಿಯಾಗುತ್ತದೆಯೇ ಎಂಬುದನ್ನು ಈ ಫಲಿತಾಂಶ ನಿರ್ಧರಿಸಲಿದೆ.
2020ರಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ 42 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಆರ್ಜೆಡಿ 33 ಸ್ಥಾನಗಳನ್ನು, ಜನತಾದಳ (ಯುನೈಟೆಡ್) 20 ಸ್ಥಾನಗಳನ್ನು, ಕಾಂಗ್ರೆಸ್ 11 ಮತ್ತು ಎಡಪಕ್ಷಗಳು ಒಟ್ಟಾಗಿ ಐದು ಸ್ಥಾನಗಳನ್ನು ಗೆದ್ದಿತ್ತು.
ಇಂದು ಬಿಹಾರ ವಿಧಾನಸಭಾ ಚುನಾವಣೆಯ ಎರಡನೇ ಹಂತದಲ್ಲಿ ಸಂಜೆ 5 ಗಂಟೆಯವರೆಗೆ ಶೇ 67.14 ರಷ್ಟು ಮತದಾನ ದಾಖಲಾಗಿದೆ ಎಂದು ಭಾರತೀಯ ಚುನಾವಣಾ ಆಯೋಗ ತಿಳಿಸಿದೆ. ಬಿಹಾರ ಚುನಾವಣೆಯ ಎರಡನೇ ಹಂತದಲ್ಲಿ ಶೇ.67.14 ರಷ್ಟು ಅತ್ಯಧಿಕ ಮತದಾನ ದಾಖಲಾಗಿದ್ದು, ಅತಿ ಹೆಚ್ಚು ಕಾಲ ಅಧಿಕಾರದಲ್ಲಿದ್ದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಬಗ್ಗೆ ಜನಾಭಿಪ್ರಾಯ ಸಂಗ್ರಹವಾಗಿದೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications