ಜೀನ್ಸ್ ಮತ್ತು ಟಿ-ಶರ್ಟ್ಗಳಂತಹ ಕ್ಯಾಶುಯಲ್ ಬಟ್ಟೆ ಧರಿಸದಂತೆ ಬಿಹಾರ ಸರ್ಕಾರ ಆದೇಶ
ಪಾಟ್ನಾ, ಜೂನ್ 29: ಸಂಸ್ಕೃತಿಗೆ ವಿರುದ್ಧವಾಗಿರುವುದರಿಂದ ಕೆಲಸದ ಸ್ಥಳಗಳಲ್ಲಿ, ಕಚೇರಿಗಳಲ್ಲಿ ಜೀನ್ಸ್ ಮತ್ತು ಟಿ-ಶರ್ಟ್ಗಳಂತಹ ಕ್ಯಾಶುಯಲ್ ಬಟ್ಟೆಗಳನ್ನು ಧರಿಸಬೇಡಿ ಎಂದು ಬಿಹಾರ ಸರ್ಕಾರವು ರಾಜ್ಯ ಶಿಕ್ಷಣ ಇಲಾಖೆಯ ಸಿಬ್ಬಂದಿಗೆ ತಿಳಿಸಿದೆ.
ಶಿಕ್ಷಣ ಇಲಾಖೆ ನಿರ್ದೇಶಕರು (ಆಡಳಿತ) ಬುಧವಾರ ಹೊರಡಿಸಿದ ಆದೇಶದಲ್ಲಿ ಟಿ-ಶರ್ಟ್ ಮತ್ತು ಜೀನ್ಸ್ನಲ್ಲಿ ಕಚೇರಿಗಳಿಗೆ ಬರುವ ನೌಕರರಿಗೆ ಈ ಸೂಚನೆ ನೀಡಿದ್ದಾರೆ.

ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ನೌಕರರು ಕಚೇರಿ ಸಂಸ್ಕೃತಿಗೆ ವ್ಯತಿರಿಕ್ತ ಉಡುಗೆ ತೊಡುಗೆ ಧರಿಸಿ ಕಚೇರಿಗೆ ಬರುತ್ತಿರುವುದು ಗಮನಕ್ಕೆ ಬಂದಿದ್ದು, ಅಧಿಕಾರಿಗಳು ಅಥವಾ ಇತರೆ ನೌಕರರು ಕಚೇರಿಯಲ್ಲಿ ಕ್ಯಾಶುವಲ್ ಧರಿಸುವುದು ಕಚೇರಿಯಲ್ಲಿ ಕೆಲಸ ಸಂಸ್ಕೃತಿಗೆ ವಿರುದ್ಧವಾಗಿದೆ ಎಂದು ತಿಳಿಸಲಾಗಿದೆ.
ಆದ್ದರಿಂದ ಎಲ್ಲಾ ಅಧಿಕಾರಿಗಳು ಮತ್ತು ನೌಕರರು ಶಿಕ್ಷಣ ಇಲಾಖೆ ಕಚೇರಿಗಳಿಗೆ ಫಾರ್ಮಲ್ ಡ್ರೆಸ್ಗಳಲ್ಲಿ ಮಾತ್ರ ಬರಬೇಕು. ಶಿಕ್ಷಣ ಇಲಾಖೆ ಕಚೇರಿಗಳಲ್ಲಿ ಯಾವುದೇ ಕ್ಯಾಶುಯಲ್ ಉಡುಗೆಗಳನ್ನು ವಿಶೇಷವಾಗಿ ಜೀನ್ಸ್ ಮತ್ತು ಟಿ-ಶರ್ಟ್ಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅನುಮತಿಸಲಾಗುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಆದೇಶದ ಕುರಿತು ಬಿಹಾರ ಶಿಕ್ಷಣ ಸಚಿವ ಚಂದ್ರ ಶೇಖರ್ ನೇರವಾಗಿ ಮಾಧ್ಯಮಗಳಿಗೆ ಹೇಳಿಕೆ ನೀಡಿಲ್ಲ, ಗಮನಾರ್ಹ ಸಂಗತಿಯೆಂದರೆ, ಸರನ್ ಜಿಲ್ಲೆಯ ಜಿಲ್ಲಾ ಮ್ಯಾಜಿಸ್ಟ್ರೇಟ್ ಏಪ್ರಿಲ್ನಲ್ಲಿ ಎಲ್ಲಾ ಸರ್ಕಾರಿ ನೌಕರರು ಸರ್ಕಾರಿ ಕಚೇರಿಗಳಲ್ಲಿ ಜೀನ್ಸ್ ಮತ್ತು ಟಿ-ಶರ್ಟ್ಗಳನ್ನು ಧರಿಸುವುದನ್ನು ನಿರ್ಬಂಧಿಸಿದ್ದರು.
ಔಪಚಾರಿಕ ಉಡುಪುಗಳನ್ನು ಧರಿಸಲು ಮತ್ತು ಗುರುತಿನ ಚೀಟಿಗಳನ್ನು ಹೊಂದಲು ಸಿಬ್ಬಂದಿಗೆ ಸೂಚನೆ ನೀಡಲಾಗಿತ್ತು. ಬಿಹಾರ ಸರ್ಕಾರವು 2019 ರಲ್ಲಿ ರಾಜ್ಯ ಸಚಿವಾಲಯದಲ್ಲಿ ನೌಕರರ ಶ್ರೇಣಿಯನ್ನು ಲೆಕ್ಕಿಸದೆ ಜೀನ್ಸ್ ಮತ್ತು ಟಿ-ಶರ್ಟ್ಗಳನ್ನು ಧರಿಸುವುದನ್ನು ನಿಷೇಧಿಸಿತ್ತು. ಕಚೇರಿ ಶಿಷ್ಟಾಚಾರ ಕಾಯ್ದುಕೊಳ್ಳುವುದು ಇದರ ಉದ್ದೇಶವಾಗಿತ್ತು. ರಾಜ್ಯ ಸರ್ಕಾರವು ಸಚಿವಾಲಯದ ನೌಕರರು ಕಚೇರಿಯಲ್ಲಿ ಸರಳ, ಆರಾಮದಾಯಕ ಮತ್ತು ತಿಳಿ ಬಣ್ಣದ ಬಟ್ಟೆಗಳನ್ನು ಧರಿಸಲು ಸೂಚನೆ ನೀಡಲಾಗಿದೆ.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications