ಬಿಹಾರ: ಆಶ್ರಮದಲ್ಲಿ 34 ಬಾಲಕಿಯರ ಮೇಲೆ ಅತ್ಯಾಚಾರ
ಪಟ್ನಾ, ಜುಲೈ 28: ಬಿಹಾರದ ಮುಜಫ್ಫರ್ ಪುರ ಜಿಲ್ಲೆಯಲ್ಲಿನ ಹೆಣ್ಣುಮಕ್ಕಳ ಸರ್ಕಾರಿ ಸೇವಾಶ್ರಮದಲ್ಲಿ ಒಟ್ಟು 34 ಬಾಲಕಿಯರ ಮೇಲೆ ಅತ್ಯಾಚಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮುಜಫ್ಫರ್ ಪುರ ನಿರ್ವಸಿತರ ಕೇಂದ್ರದಲ್ಲಿ 29 ಬಾಲಕಿಯರ ಮೇಲೆ ಅಮಾನುಷವಾಗಿ ಅತ್ಯಾಚಾರ ನಡೆದಿದೆ ಎಂದು ವರದಿಗಳು ತಿಳಿಸಿದ್ದವು. ಆದರೆ, ಇಲ್ಲಿ ಅತ್ಯಾಚಾರಕ್ಕೆ ಒಳಗಾದವರ ಸಂಖ್ಯೆ 34 ಎಂದು ಮುಜಫ್ಫರ್ ಪುರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಹರಪ್ರೀತ್ ಕೌರ್ ತಿಳಿಸಿದ್ದಾರೆ.
ಈ ಘಟನೆ ದೇಶದಲ್ಲೆಡೆ ತಲ್ಲಣ ಮೂಡಿಸಿದೆ. ಆಶ್ರಮದಲ್ಲಿನ 42 ಬಾಲಕಿಯರನ್ನು ಕಳೆದ ವಾರ ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿತ್ತು. ಅವರಲ್ಲಿ ಹೆಚ್ಚಿನವರ ಮೇಲೆ ಅತ್ಯಾಚಾರ ನಡೆದಿರುವುದು ದೃಢಪಟ್ಟಿದೆ.

ವಿರೋಧ ಪಕ್ಷಗಳ ತೀವ್ರ ಒತ್ತಡಕ್ಕೆ ಮಣಿದಿರುವ ಮುಖ್ಯಮಂತ್ರಿ ನಿತೀಶ್ ಕುಮಾರ್, ಸಿಬಿಐ ತನಿಖೆಗೆ ಶಿಫಾರಸು ಮಾಡಿದ್ದಾರೆ.
ಹೆಣ್ಣುಮಕ್ಕಳ ಪುನರ್ವಸತಿ ಕೇಂದ್ರದಲ್ಲಿದ್ದ ಬಾಲಕಿಯರ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ, ಅತ್ಯಾಚಾರಗಳು ನಡೆಯುತ್ತಿರುವುದು ವರದಿಯಾಗಿತ್ತು.
ಅಲ್ಲದೆ, ಬಾಲಕಿಯೊಬ್ಬಳನ್ನು ಹತ್ಯೆ ಮಾಡಿ ಕೇಂದ್ರದ ಆವರಣದಲ್ಲಿ ಹೂತುಹಾಕಿದ್ದು ಬೆಳಕಿಗೆ ಬಂದಿತ್ತು. ಪ್ರಕರಣ ಸಂಬಂಧ ಹತ್ತು ಮಂದಿ ವಿರುದ್ಧ ದೋಷಾರೋಪ ನಿಗದಿಪಡಿಸಿದ್ದು, ಅವರನ್ನು ಬಂಧಿಸಲಾಗಿದೆ.
ಬಾಲಕಿಯರಿಗೆ ರಕ್ಷಣೆ ಒದಗಿಸುವಲ್ಲಿ ವಿಫಲರಾದ ಸರ್ಕಾರದ ವಿರುದ್ಧ ತೀವ್ರ ಕಿಡಿಕಾರಿರುವ ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್, ಬಿಹಾರವು ರಾಕ್ಷಸ್ ರಾಜ್ ಆಗಿದೆ. ರಾವಣ ತಾಯಿ ಸೀತೆಯನ್ನು ಅಪಹರಿಸಿದ್ದು ಇಲ್ಲಿಂದಲೇ. ಇದು ಬಲಾತ್ಕಾರಗಳ ರಾಜ್ಯ. ಹೇಡಿ ದುರ್ಯೋದನ ದ್ರೌಪದಿಯ ವಸ್ತ್ರಾಪಹರಣ ಮಾಡಿದ.
ಬಿಹಾರದಲ್ಲಿ ರಾವಣ-ದುರ್ಯೋದನರ ಜೋಡಿ ಸಹೋದರಿಯರು ಮತ್ತು ತಾಯಂದಿರು ಹೊರಕ್ಕೆ ಬರುವುದು ಕಷ್ಟವಾಗುವಂತೆ ಮಾಡಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications