ಬಿಹಾರದಲ್ಲಿಯೂ ಅಭಿವೃದ್ಧಿ ಮಂತ್ರ ಪಠಿಸಲಿದೆ ಬಿಜೆಪಿ
ಬೆಂಗಳೂರು, ಸೆಪ್ಟೆಂಬರ್, 14 : ಬಿಹಾರ ವಿಧಾನಸಭೆ ಚುನಾವಣೆಯಲ್ಲೂ ಬಿಜೆಪಿ ಅಭಿವೃದ್ಧಿ ಮಂತ್ರ ಪಠಿಸಲಿದೆ. ಬಿಜೆಪಿ ಮತ್ತು ಮಿತ್ರಪಕ್ಷಗಳ ಸೀಟು ಹಂಚಿಕೆ ಕಸರತ್ತನ್ನು ಪೂರ್ಣಗೊಳಿಸಿವೆ. ಕೆಲವೇ ದಿನಗಳಲ್ಲಿ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.
ಅಭಿವೃದ್ಧಿಯ ಮಂತ್ರದೊಂದಿಗೆ ಚುನಾವಣೆಯನ್ನು ಎದುರಿಸಲಿದ್ದೇವೆ ಎಂದು ಅಮಿತ್ ಶಾ ಹೇಳಿದ್ದಾರೆ. ಬಿಜೆಪಿ ಪ್ರಣಾಳಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ನೀತಿಗಳ ಬಗ್ಗೆ ಜನರಿಗೆ ಮಾಹಿತಿ ತಿಳಿಸಲಾಗುತ್ತದೆ. ಬಿಹಾರದಲ್ಲಿ ಹದಗೆಟ್ಟಿರುವ ಕಾನೂನು ಸುವ್ಯವಸ್ಥೆ ಬಗ್ಗೆಯೂ ಜನರ ಗಮನಸೆಳೆಯಲು ಬಿಜೆಪಿ ನಿರ್ಧರಿಸಿದೆ. [ಬಿಹಾರ ಚುನಾವಣಾ ವೇಳಾಪಟ್ಟಿ]

ರಾಜ್ಯದಲ್ಲಿ ನಿತೀಶ್ ಕುಮಾರ್ ಅವರ ಆಡಳಿತದಲ್ಲಿ ಅಭಿವೃದ್ಧಿಯ ಸೂಚ್ಯಂಕ ಶೇ 15 ರಿಂದ 9ಕ್ಕೆ ಹೇಗೆ ಇಳಿಕೆಯಾಗಿದೆ? ಎಂದು ಬಿಜೆಪಿ ಚುನಾವಣಾ ಪ್ರಚಾರದ ಸಂರ್ಭದಲ್ಲಿ ಜನರಿಗೆ ತಿಳಿಸಲಿದೆ. 'ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳುವ ಅಭಿವೃದ್ಧಿಯ ಅಂಕಿ-ಸಂಖ್ಯೆಗಳನ್ನು ಮತ್ತೊಮ್ಮೆ ಪರಿಶೀಲಿಸಬೇಕು' ಎಂದು ಅಮಿತ್ ಶಾ ಸೋಮವಾರ ಲೇವಡಿ ಮಾಡಿದ್ದಾರೆ.[ಸಮರಕ್ಕೂ ಮುನ್ನವೇ ಹಿಂದೆಸರಿದ ಮೈತ್ರಿ ಕೂಟದ ಕಿಂಗ್]
ಅಭಿವೃದ್ಧಿ ನಂತರ ಕಾನೂನು ಸುವ್ಯವಸ್ಥೆ : ಬಿಹಾರದ ಅಭಿವೃದ್ಧಿ ಮಂತ್ರದ ಜೊತೆ ರಾಜ್ಯದಲ್ಲಿ ಹದಗೆಟ್ಟಿರುವ ಕಾನೂನು ಸುವ್ಯವಸ್ಥೆಯನ್ನು ಬಿಜೆಪಿ ಚುನಾವಣಾ ಅಸ್ತ್ರವಾಗಿ ಉಪಯೋಗಿಸಿಕೊಳ್ಳಲಿದೆ. ಅಂಕಿ-ಸಂಖ್ಯೆಗಳ ಸಮೇತ ರಾಜ್ಯದಲ್ಲಿ ಹದಗೆಟ್ಟಿರುವ ಕಾನೂನು ಸುವ್ಯವಸ್ಥೆ ಬಗ್ಗೆ ವರದಿಯನ್ನು ಬಿಜೆಪಿ ಜನರ ಮುಂದಿಡಲಿದೆ.
NDA Seat Sharing Bihar Elections BJP will contest 160 seats, LJP 40 seats, RLSP 23 seats and HAM 20 seats pic.twitter.com/umoty4025v
— Ananthkumar (@AnanthKumar_BJP) September 14, 2015 ರಾಜ್ಯದಲ್ಲಿ ಅತ್ಯಾಚಾರ ಪ್ರಕರಣಗಳು ಶೇ 22ರಷ್ಟು ಹೆಚ್ಚಾಗಿವೆ. ಅಪಹರಣ ಪ್ರಕರಣಗಳು 4,738ರಿಂದ 6,570ಕ್ಕೆ ಏರಿಕೆಯಾಗಿದೆ. ಬಿಜೆಪಿ ಜೊತೆಗಿನ ಮೈತ್ರಿಯನ್ನು ನಿತೀಶ್ ಕುಮಾರ್ ಕಡಿದುಕೊಂಡ ಬಳಿಕ ರಾಜ್ಯದ ಅಭಿವೃದ್ಧಿ ಬಗ್ಗೆ ಗಮನಹರಿಸಿಲ್ಲ ಎಂದು ಬಿಜೆಪಿ ಆರೋಪಿಸಿದೆ.
ಅಂದಹಾಗೆ 243 ಸದಸ್ಯ ಬಲದ ಬಿಹಾರ ವಿಧಾನಸಭೆಯ ಅಧಿಕಾರಾವಧಿ ನವೆಂಬರ್ 29ಕ್ಕೆ ಮುಕ್ತಾಯವಾಗಲಿದ್ದು, ಅದಕ್ಕೆ ಮುನ್ನ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. ಸೆ.15ರ ಮಂಗಳವಾರ ಚುನಾವಣಾ ಅಧಿಸೂಚನೆ ಹೊರಬೀಳಲಿದ್ದು, ಒಟ್ಟು 5 ಹಂತಗಳಲ್ಲಿ ಚುನಾವಣೆ ನಡೆಯಲಿದೆ. ನವೆಂಬರ್ 8ರಂದು ಚುನಾವಣಾ ಫಲಿತಾಂಶ ಪ್ರಕಟಗೊಳ್ಳಲಿದೆ. [ಪಿಟಿಐ ಚಿತ್ರ]
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications