Get Updates
Get notified of breaking news, exclusive insights, and must-see stories!

ಬಿಹಾರ: ರಾಮನವಮಿ ಹಿಂಸಾಚಾರ ಪೂರ್ವಯೋಜಿತ- ಗಲಭೆಯ ಮಾಸ್ಟರ್ ಮೈಂಡ್ ಬಂಧನ

ಬಿಹಾರಶರೀಫ್/ಹೊಸದಿಲ್ಲಿ ಏಪ್ರಿಲ್ 10: ದೇಶದ ಹಲವೆಡೆ ರಾಮನವಮಿಯ ಆಚರಣೆ ವೇಳೆ ಹಿಂಸಾಚಾರಗಳು ನಡೆದಿರುವುದು ಈಗಾಗಲೇ ಗೊತ್ತಿರುವ ವಿಚಾರ. ಆದರೆ ಈ ಹಿಂಸಾಚಾರಗಳಲ್ಲಿ ಹಲವು ಪೂರ್ವಯೋಜಿತ ಎಂದು ಬಿಹಾರ್ ಪೊಲೀಸರು ತಿಳಿಸಿದ್ದಾರೆ.

ರಾಮನವಮಿಯಂದು ಬಿಹಾರದಲ್ಲಿ ನಡೆದ ಗಲಭೆ ಪೂರ್ವಯೋಜಿತ ಎಂದು ತಿಳಿದುಬಂದಿದೆ. ಈ ಪ್ಲ್ಯಾನ್ ಮಾಡಿದ ಮಾಸ್ಟರ್‌ ಮೈಂಡ್ ಅನ್ನು ಪೊಲೀಸರು ಸದ್ಯ ಬಂಧಿಸಿದ್ದಾರೆ. ಈತ ನಳಂದಾದ ಬಿಹಾರಶರೀಫ್‌ನಲ್ಲಿ ನಡೆದ ಹಿಂಸಾಚಾರದ ರೂವಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ. ಬಂಧಿತ ಆರೋಪಿ ಸಾಮಾಜಿಕ ಮಾಧ್ಯಮ ಮತ್ತು 456 ಸದಸ್ಯರನ್ನು ಹೊಂದಿರುವ ವಾಟ್ಸಾಪ್ ಗುಂಪಿನ ಮೂಲಕ ಗಲಭೆಗೆ ಸಂಚು ರೂಪಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Bihar: Ramnavami violence premeditated- Riot mastermind arrested

ನಳಂದ ಜಿಲ್ಲೆಯ ಬಜರಂಗದಳದ ಸಂಚಾಲಕ ಹಾಗೂ ಬಂಧಿತ ಕುಂದನ್ ಕುಮಾರ್ ಬಂಧಿತ ಆರೋಪಿ. ಇವರು ರಾಮ ನವಮಿಯ ಮುನ್ನ ರಚಿಸಲಾದ ವಾಟ್ಸಾಪ್ ಗ್ರೂಪ್‌ನ ಅಡ್ಮಿನ್ ಆಗಿದ್ದರು. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಬಿಹಾರದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಜಿತೇಂದ್ರ ಸಿಂಗ್ ಗವಾರ್ ಅವರು ಈತನ ಬಗ್ಗೆ ಮಾಹಿತಿಯನ್ನು ನೀಡಿದ್ದಾರೆ.

ರಾಮನವಮಿ ಹಿಂಸಾಚಾರ ಪೂರ್ವಯೋಜಿತ

ಬಿಹಾರ್‌ನಲ್ಲಿ ಗಲಭೆಯ ನಂತರ ಶಾಂತಿ ಕಾಪಾಡಲು ಅಶಾಂತಿ ಉಂಟು ಮಾಡಿದ ಕೆಲ ಶಂಕಿತರನ್ನು ಪೊಲೀಸರು ಬಂಧಿಸಿದ್ದರು. ಆರಂಭದಲ್ಲಿ ಇವರು ಮಾಸ್ಟರ್ ಮೈಂಡ್ ಬಗ್ಗೆ ಯಾವುದೇ ಸುಳಿವು ಬಿಟ್ಟುಕೊಟ್ಟಿರಲಿಲ್ಲ. ಆದರೆ ಪೊಲೀಸರು ಅವರ ಆಸ್ತಿಯನ್ನು ಮುಟ್ಟುಗೋಲು ಹಾಕಲು ಪ್ರಾರಂಭಿಸಿದ ನಂತರ ಕುಂದನ್ ಕುಮಾರ್ ಶರಣಾಗಿದ್ದಾರೆ. ಗ್ರೂಪ್‌ನ ಮತ್ತೋರ್ವ ಅಡ್ಮಿನ್ ಕಿಶನ್ ಕುಮಾರ್ ಕೂಡ ಶರಣಾಗಿದ್ದಾರೆ.

Bihar: Ramnavami violence premeditated- Riot mastermind arrested

ವಾಟ್ಸಾಪ್ ಗುಂಪಿನಲ್ಲಿ ಹಿಂಸಾಚಾರವನ್ನು ಹರಡಲು ಸಂಚು ರೂಪಿಸಲಾಗಿದೆ ಮತ್ತು ಒಂದು ಸಮುದಾಯವನ್ನು ಗುರಿಯಾಗಿಸಿಕೊಂಡು ನಕಲಿ ಪೋಸ್ಟ್‌ಗಳನ್ನು ಹಂಚಿಕೊಳ್ಳಲಾಗಿರುವುದು ತನಿಖೆಯಿಂದ ಬಯಲಾಗಿದೆ. ಇತರ ಸಮುದಾಯದ ಸದಸ್ಯರ ವಿರುದ್ಧ ನಕಲಿ ವಿಡಿಯೋಗಳನ್ನು ಹರಡಲು, ಜನರನ್ನು ಪ್ರಚೋದಿಸಲು ಈ ಗುಂಪನ್ನು ಬಳಸಲಾಗುತ್ತಿತ್ತು ಎಂದು ಆರಂಭಿಕ ತನಿಖೆಗಳು ಬಹಿರಂಗಪಡಿಸುತ್ತವೆ.

ಗಲಭೆಯ ಮಾಸ್ಟರ್ ಮೈಂಡ್ ಬಂಧನ

ನಳಂದದ ಕೋಮು ಘರ್ಷಣೆಗೆ ಸಂಬಂಧಿಸಿದಂತೆ 15 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಮತ್ತು ಅವರಲ್ಲಿ ಐವರನ್ನು ಬಂಧಿಸಲಾಗಿದೆ. ಕುಂದನ್ ಕುಮಾರ್ ಸೇರಿದಂತೆ ಇಬ್ಬರು ಶರಣಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನೂ ನಾಪತ್ತೆಯಾಗಿರುವ ಆರೋಪಿಯನ್ನು ಹಿಡಿಯಲು ಶೋಧ ನಡೆಸಲಾಗುತ್ತಿದೆ. ಬಂಧಿತ ವ್ಯಕ್ತಿಗಳ ವಶದಿಂದ ಕೆಲವು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಅದರ ಮೂಲಕ ಅವರು ಆಪಾದಿತ ವಿಷಯಗಳನ್ನು ಅಪ್‌ಲೋಡ್ ಮಾಡಿದ್ದಾರೆನ್ನುವುದು ಬಯಲಾಗಿದೆ.

Bihar: Ramnavami violence premeditated- Riot mastermind arrested

ರಾಮನವಮಿ ಮೆರವಣಿಗೆಯಲ್ಲಿ ನಡೆದ ಹಿಂಸಾಚಾರ

ಮಾರ್ಚ್ 31 ರಂದು ರಾಮನವಮಿ ಮೆರವಣಿಗೆಯಲ್ಲಿ ಬಿಹಾರ್ ಷರೀಫ್ ಹಿಂಸಾಚಾರ ಯುವಕನ ಸಾವಿಗೆ ಕಾರಣವಾಯಿತು. ಬಿಹಾರದ ರೋಹ್ತಾಸ್ ಜಿಲ್ಲೆಯಲ್ಲಿಯೂ ಎರಡು ಗುಂಪುಗಳ ನಡುವೆ ಘರ್ಷಣೆಗಳು ವರದಿಯಾಗಿವೆ.

ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಈ ಹಿಂದೆ ರಾಜ್ಯದಲ್ಲಿ ಕೋಮು ಉದ್ವಿಗ್ನತೆಯನ್ನು "ಗಡ್ಬದ್" (ಕಿಡಿಗೇಡಿತನ) ದಲ್ಲಿ ತೊಡಗಿಸಿಕೊಂಡಿರುವ ಕಾರಣದಿಂದ ಉಂಟಾಗಿದೆ ಎಂದು ಆರೋಪಿಸಿದ್ದರು.

"ಸಸಾರಾಮ್ ಮತ್ತು ಬಿಹಾರ ಷರೀಫ್‌ನಲ್ಲಿ ರಾಮನವಮಿ ಹಬ್ಬದ ಸಂದರ್ಭದಲ್ಲಿ ಕೋಮು ಉದ್ವಿಗ್ನತೆಗಳು ಗೊಂದಲವನ್ನುಂಟುಮಾಡುತ್ತವೆ. ಇಂತಹ ಘಟನೆಗಳು ಈ ಪ್ರದೇಶದಲ್ಲಿ ಮೊದಲ ಬಾರಿಗೆ ಸಂಭವಿಸಿವೆ. ಇದು ಸ್ವಾಭಾವಿಕವಲ್ಲ," ಶ್ರೀ ಕುಮಾರ್ ಹೇಳಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+