ಬಿಹಾರ ವಿಧಾನಸಭೆ ಚುನಾವಣೆ ವೇಳಾಪಟ್ಟಿ ಪ್ರಕಟ
ನವದೆಹಲಿ, ಸೆ. 09: ಕೇಂದ್ರ ಚುನಾವಣಾ ಆಯೋಗದ ಬುಧವಾರದಂದು ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಘೋಷಿಸಿದೆ. ಚುನಾವಣಾ ಆಯುಕ್ತ ನಸೀಂ ಜೈದಿ ಅವರು ನೀಡಿದ ವಿವರ ಮುಂದಿದೆ.
243 ಸದಸ್ಯರ ಬಿಹಾರ ವಿಧಾನಸಭೆಯ ಅಧಿಕಾರಾವಧಿ ನವೆಂಬರ್ 29ಕ್ಕೆ ಮುಕ್ತಾಯವಾಗಲಿದ್ದು, ಅದಕ್ಕೆ ಮುನ್ನ ಹೊಸ ಶಾಸಕರ ಆಯ್ಕೆ ಪ್ರಕ್ರಿಯೆ ಮುಕ್ತಾಯಗೊಳ್ಳಬೇಕಾಗಿದೆ.
ಜೆಡಿಯು, ಆರ್ಜೆಡಿ, ಕಾಂಗ್ರೆಸ್ ಒಳಗೊಂಡ ಮಹಾಮೈತ್ರಿಕೂಟ ಹಾಗೂ ಬಿಜೆಪಿ ನಡುವೆ ವಿಧಾನಸಭಾ ಚುನಾವಣೆಯಲ್ಲಿ ತೀವ್ರ ಪೈಪೋಟಿಯ ನಿರೀಕ್ಷೆ ಇದೆ. ಅದರೆ, ಇತ್ತೀಚೆಗೆ ಮಹಾ ಮೈತ್ರಿಕೂಟದಿಂದ ಸಮಾಜವಾದಿ ಪಕ್ಷ ಹಿಂದೆ ಸರಿದಿರುವುದು ಎನ್ ಡಿಎ ಮಿತ್ರ ಪಕ್ಷಗಳಿಗೆ ನೆರವಾಗುವ ಸಾಧ್ಯತೆಯಿದೆ.
ಕಳೆದ ಹತ್ತು ವರ್ಷಗಳಿಂದ ಬಿಹಾರ ಮುಖ್ಯಮಂತ್ರಿಯಾಗಿ ಅಧಿಕಾರ ಚಲಾಯಿಸಿರುವ ಜೆಡಿಯುನ ನಿತೀಶ್ಕುಮಾರ್, ಮೂರನೇ ಅವಧಿಗೆ ಅಧಿಕಾರ ಹಿಡಿಯುವ ಹುಮ್ಮಸ್ಸಿನಲ್ಲಿದ್ದಾರೆ. ಈ ಹಿಂದೆ ಬಿಜೆಪಿ ನೇತೃತ್ವದ ಎನ್ಡಿಎ ಭಾಗವಾಗಿದ್ದ ಜೆಡಿಯು, 2013ರ ಜೂನ್ನಲ್ಲಿ ಅದರೊಂದಿಗಿನ ಸಂಬಂಧ ಕಡಿದುಕೊಂಡಿತ್ತು.[ಸಮರಕ್ಕೂ ಮುನ್ನವೇ ಹಿಂದೆಸರಿದ ಮೈತ್ರಿ ಕೂಟದ ಕಿಂಗ್]

* ಬಿಹಾರ ವಿಧಾನಸಭೆಯ ಒಟ್ಟು ಸದಸ್ಯರ ಸಂಖ್ಯೆ 243.
* ಮೈತ್ರಿಕೂಟದಲ್ಲಿರುವ ಎನ್ ಸಿಪಿ ಹಾಗೂ ಐಎನ್ ಎಲ್ ಡಿ ಕೂಡಾ ಇದಕ್ಕೆ ಬಹುತೇಕ ಸಮ್ಮತಿಸಿತ್ತು.
* ಆದರೆ, ಸೀಟು ಹಂಚಿಕೆ ಬಗ್ಗೆ ಅಪಸ್ವರ ತೆಗೆದಿರುವ ಸಮಾಜವಾದಿ ಪಕ್ಷ ಬಿಹಾರದಲ್ಲಿ ಏಕಾಂಗಿಯಾಗಿ ಕಣಕ್ಕಿಳಿಯಲು ನಿರ್ಧರಿಸಿದೆ.
* ಎಲೆಕ್ಟ್ರಾನಿಕ್ ಮತಯಂತ್ರ (ಇವಿಎಂ) ದಲ್ಲಿ ಪಕ್ಷದ ಚಿನ್ಹೆ ಜೊತೆಗೆ ಅಭ್ಯರ್ಥಿಗಳ ಭಾವಚಿತ್ರ ಕೂಡಾ ಇರುತ್ತದೆ.
* ಸುಮಾರು 6.6 ಕೋಟಿ ಜನಕ್ಕೆ ಮತದಾನ ಮಾಡುವ ಹಕ್ಕು ಈ ಬಾರಿ ಸಿಕ್ಕಿದೆ.
ಐದು ಹಂತಗಳಲ್ಲಿ ಚುನಾವಣೆ:
* ಸೆ. 15 ಅಧಿಸೂಚನೆ ಪ್ರಕಟಣೆ ದಿನಾಂಕ
* ಮೊದಲ ಹಂತಕ್ಕೆ- ಸೆ. 23 : ನಾಮ ಪತ್ರ ಸಲ್ಲಿಕೆಗೆ ಕೊನೆ ದಿನಾಂಕ
* ಅಕ್ಟೋಬರ್ 12 ಮೊದಲ ಹಂತದ ಮತದಾನ
* ಎರಡನೇ ಹಂತಕ್ಕೆ- ಸೆ.28: ನಾಮ ಪತ್ರ ಸಲ್ಲಿಕೆಗೆ ಕೊನೆ ದಿನಾಂಕ
* ಅಕ್ಟೋಬರ್ 16 ಎರಡನೇ ಹಂತದ ಮತದಾನ
* ಮೂರನೇ ಹಂತಕ್ಕೆ : ಅಕ್ಟೋಬರ್ 8- ನಾಮ ಪತ್ರ ಸಲ್ಲಿಕೆಗೆ ಕೊನೆ ದಿನಾಂಕ
* ಅಕ್ಟೋಬರ್ 28 : ಮತದಾನ ಮೂರನೇ ಹಂತ
*ನಾಲ್ಕನೇ ಹಂತಕ್ಕೆ : ಅಕ್ಟೋಬರ್ 14 : ನಾಮ ಪತ್ರ ಸಲ್ಲಿಕೆಗೆ ಕೊನೆ ದಿನಾಂಕ
* ನವೆಂಬರ್ 1 ನಾಲ್ಕನೇ ಹಂತಕ್ಕೆ ಮತದಾನ
* ಐದನೇ ಹಂತಕ್ಕೆ: ಅಕ್ಟೋಬರ್ 15 :ನಾಮ ಪತ್ರ ಸಲ್ಲಿಕೆಗೆ ಕೊನೆ ದಿನಾಂಕ
* ನವೆಂಬರ್ 5: 5ನೇ ಹಂತದ ಮತದಾನ
* ನವೆಂಬರ್ 8 ಭಾನುವಾರ ಎಲ್ಲಾ ಹಂತದ ಮತ ಎಣಿಕೆ
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications