Breaking: ಬಿಲ್ಕಿಸ್ ಅಪರಾಧಿಗಳ ಬಿಡುಗಡೆ, ಸುಪ್ರೀಂನಲ್ಲಿ ವಿಚಾರಣೆ
ನವದೆಹಲಿ, ಆಗಸ್ಟ್ 25: ಬಿಲ್ಕಿಸ್ ಬಾನೊ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೊಳಗಾದ 11 ಅಪರಾಧಿಗಳಿಗೆ ಗುಜರಾತ್ ಸರ್ಕಾರ ನೀಡಿದ ವಿನಾಯಿತಿಯನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯನ್ನು ಗುರುವಾರ ಸುಪ್ರೀಂಕೋರ್ಟ್ನಲ್ಲಿ ವಿಚಾರಣೆ ನಡೆಸಲಾಗುತ್ತದೆ.
ಭಾರತದ ಮುಖ್ಯ ನ್ಯಾಯಮೂರ್ತಿ ಎನ್. ವಿ. ರಮಣ ಅರ್ಜಿ ವಿಚಾರಣೆ ನಡೆಸಲಿದ್ದಾರೆ. ವಕೀಲೆ ಅಪರ್ಣಾ ಭಟ್ ಭಾರತದ ಮುಖ್ಯ ನ್ಯಾಯಾಧೀಶರ ಮುಂದೆ ಈ ವಿಷಯವನ್ನು ಪ್ರಸ್ತಾಪಿಸಿ ಅರ್ಜಿಯ ತುರ್ತು ವಿಚಾರಣೆಗೆ ಕೋರಿದ್ದರು.
2002ರ ಗುಜರಾತ್ ಗಲಭೆಗಳ ಸಂದರ್ಭದಲ್ಲಿ ಬಿಲ್ಕಿಸ್ ಬಾನೋ ಅತ್ಯಾಚಾರ ಮತ್ತು ಆಕೆಯ ಕುಟುಂಬದ ಏಳು ಸದಸ್ಯರನ್ನು ಕೊಂದ ಆರೋಪದಲ್ಲಿ 2008 ರಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾದ 11 ಅಪರಾಧಿಗಳನ್ನು ಗುಜರಾತ್ ಸರಕಾರ ಬಿಡುಗಡೆ ಮಾಡಿದೆ. ಇವರ ಬಿಡುಗಡೆಯನ್ನು ವಿರೋಧಿಸಿ, ತಕ್ಷಣ ಅಪರಾಧಿಗಳ ಮರು ಬಂಧನಕ್ಕೆ ಒತ್ತಾಯಿಸುವ ಅರ್ಜಿಯನ್ನು ತುರ್ತಾಗಿ ಪರಿಗಣಿಸಲು ಸಿಜೆಐ ರಮಣ ಒಪ್ಪಿಕೊಂಡಿದ್ದಾರೆ. ಗುಜರಾತ್ ಸರ್ಕಾರವು ಕಳೆದ ವಾರ 11 ಮಂದಿಯನ್ನು ಜೈಲಿನಿಂದ ಬಿಡುಗಡೆ ಮಾಡಿತ್ತು.

ಗುಜರಾತ್ ಸರಕಾರದ ನಡೆಗೆ ಭಾರಿ ಆಕ್ಷೇಪ ಉಂಟಾಗಿತ್ತು. ಅನೇಕ ಮಂದಿ ಸರಕಾರದ ಕ್ರಮವನ್ನು ಪ್ರಶ್ನಿಸಿದ್ದರು. ಅಪರಾಧಿಗಳ ಬಿಡುಗಡೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿವೆ. ಅಪರಾಧಿಗಳು ಜೈಲಿನಿಂದ ಬಿಡುಗಡೆಗೊಂಡಿದ್ದಕ್ಕೆ ಹಲವು ಮಂದಿ ಸಿಹಿ ಹಂಚಿ ಸಂಭ್ರಮಿಸಿದ್ದ ಕೃತ್ಯಗಳು ನಡೆದಿದ್ದವು.
ಬಿಲ್ಕಿಸ್ ಬಾನೊ ಪ್ರಕರಣದಲ್ಲಿ ಶಿಕ್ಷೆಗೊಳಗಾದ 11 ಮಂದಿಯ ಬಿಡುಗಡೆ ವಿರುದ್ಧ ಸುಪ್ರೀಂ ಕೋರ್ಟ್ ವಿಚಾರಣೆಗೆ ಮುನ್ನ, ತೃಣಮೂಲ ಸಂಸದೆ ಮಹುವಾ ಮೊಯಿತ್ರಾ ಅವರು ಗುರುವಾರ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡರು. ಮರಣದಂಡನೆಗೆ ಅರ್ಹರಾಗಿರುವವರಿಗೆ ಲಡ್ಡು, ಹೂಮಾಲೆ ಹಾಕುವುದಲ್ಲ ಎಂದು ಕಿಡಿಕಾರಿದ್ದಾರೆ.

11 ಅಪರಾಧಿಗಳ ಬಿಡುಗಡೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ ಅರ್ಜಿದಾರರಲ್ಲಿ ತೃಣಮೂಲ ಸಂಸದೆ ಕೂಡ ಒಬ್ಬರು.
ಮುಖ್ಯ ನ್ಯಾಯಮೂರ್ತಿ ಎನ್. ವಿ. ರಮಣ ಅಪರಾಧಿಗಳ ಬಿಡುಗಡೆ ವಿರುದ್ಧದ ಮೂರು ಅರ್ಜಿಗಳನ್ನು ಆಲಿಸಲಿದ್ದಾರೆ. ಸಿಪಿಎಂ ನಾಯಕಿ ಸುಭಾಷಿಣಿ ಅಲಿ ಅವರು ವಕೀಲ ಕಪಿಲ್ ಸಿಬಲ್ ಮೂಲಕ ಅರ್ಜಿ ಸಲ್ಲಿಸಿದ್ದಾರೆ, ಎರಡನೆಯದು ಮಹುವಾ ಮೊಯಿತ್ರಾ ಅವರು ಅಭಿಷೇಕ್ ಸಿಂಘ್ವಿ ಮೂಲಕ ಮತ್ತು ಮೂರನೇ ಅರ್ಜಿಯನ್ನು ವಕೀಲೆ ಅಪರ್ಣಾ ಭಟ್ ಸಲ್ಲಿಸಿದ್ದಾರೆ. ಈ ಮೂರು ಅರ್ಜಿಗಳನ್ನು ವಿಚಾರಣೆ ನಡೆಸಲಿದ್ದಾರೆ.
ಇದರ ಜೊತೆಗೆ ನ್ಯಾಯಮೂರ್ತಿ ಎನ್. ವಿ. ರಮಣ ಪೆಗಾಸಸ್ ಕಣ್ಗಾವಲು ಪ್ರಕರಣಸ ಸರಣಿಗಳು ಮತ್ತು ಜಾರಿ ನಿರ್ದೇಶನಾಲಯದ ಅಧಿಕಾರಗಳ ಕುರಿತ ವಿವಾದಾತ್ಮಕ ಜುಲೈ 27ರ ತೀರ್ಪಿನ ಪರಿಶೀಲನೆಯನ್ನು ವಿಚಾರಣೆ ನಡೆಸಲಿದ್ದಾರೆ.
ಪೆಗಾಸಸ್ ಪ್ರಕರಣದಲ್ಲಿ ನ್ಯಾಯಾಲಯವು ನೇಮಿಸಿದ ಸಮಿತಿಯಯು ಜುಲೈನಲ್ಲಿ ವರದಿ ಸಲ್ಲಿಸಿದ ನಂತರ ನ್ಯಾಯಾಲಯವು ಮುಂದಿನ ಕ್ರಮಗಳ ಬಗ್ಗೆ ನಿರ್ಧರಿಸುವ ನಿರೀಕ್ಷೆಯಿದೆ. ಇತರ ಸಂಬಂಧಿತ ವಿಷಯಗಳ ಜೊತೆಗೆ ಭಾರತೀಯ ನಾಗರಿಕರ ಮೇಲೆಯೂ ಪೆಗಾಸಸ್ ಕಣ್ಗಾವಲು ಬಳಸಲಾಗಿದೆಯೇ ಎಂಬುದನ್ನು ಸಮಿತಿಯು ಪರಿಶೀಲಿಸುವ ನಿರೀಕ್ಷೆಯಿದೆ.
-
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ












Click it and Unblock the Notifications