ಭಾರತದ ಸಾಮರ್ಥ್ಯಕ್ಕೆ ಭೇಷ್ ಎಂದ ಬಿಲ್ ಗೇಟ್ಸ್
ನವದೆಹಲಿ, ಜನವರಿ 05: ಭಾರತದಲ್ಲಿ ಕೊರೊನಾ ವೈರಸ್ ವಿರುದ್ಧ ಹೋರಾಡಲು ಸೆರಂ ಇನ್ ಸ್ಟಿಟ್ಯೂಟ್ ಅಭಿವೃದ್ಧಿಪಡಿಸಿದ ಕೋವಿಶೀಲ್ಡ್ ಹಾಗೂ ಭಾರತ್ ಬಯೋಟೆಕ್ ನ ಕೊವ್ಯಾಕ್ಸಿನ್ ಲಸಿಕೆಗಳ ತುರ್ತು ಬಳಕೆಗೆ ಅನುಮೋದನೆ ದೊರೆತಿದೆ.
ಭಾರತದ ಈ ವೈಜ್ಞಾನಿಕ ಮುನ್ನಡೆಗೆ ಹಾಗೂ ಲಸಿಕೆ ಕುರಿತ ದೇಶದ ದಿಟ್ಟ ಕ್ರಮಗಳಿಗೆ ಜಾಗತಿಕ ನಾಯಕರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಕೊರೊನಾ ವಿರುದ್ಧ ಭಾರತ ಹೋರಾಡುತ್ತಿರುವ ರೀತಿಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ಕೊರೊನಾ ಸೋಂಕಿನ ವಿರುದ್ಧ ಹೋರಾಟವನ್ನು ಹಾಗೂ ಭಾರತದ ಲಸಿಕೆ ಉತ್ಪಾದನಾ ಸಾಮರ್ಥ್ಯವನ್ನು ಮೈಕ್ರೊಸಾಫ್ಟ್ ಸಂಸ್ಥಾಪಕ ಬಿಲ್ ಗೇಟ್ಸ್ ಶ್ಲಾಘಿಸಿದ್ದಾರೆ.

ಭಾರತದ ಪ್ರಧಾನಿ ಕಾರ್ಯಾಲಯದ ಅಧೀಕೃತ ಟ್ವಿಟರ್ ಖಾತೆಯನ್ನು ಟ್ಯಾಗ್ ಮಾಡಿ ಟ್ವೀಟ್ ಮಾಡಿರುವ ಬಿಲ್ ಗೇಟ್ಸ್, "ವೈಜ್ಞಾನಿಕ ಆವಿಷ್ಕಾರಗಳಲ್ಲಿ ಭಾರತದ ಮುಂದಾಳತ್ವ ಅದ್ಭುತ ಎನಿಸುತ್ತಿದೆ. ಇಡೀ ಜಗತ್ತು ಕೊರೊನಾ ಸೋಂಕಿನ ಅಂತ್ಯಕ್ಕೆ ಶ್ರಮಿಸುತ್ತಿರುವ ಈ ಹೊತ್ತಿನಲ್ಲಿ ಭಾರತದ ಲಸಿಕೆ ಉತ್ಪಾದನಾ ಸಾಮರ್ಥ್ಯ ಉನ್ನತವಾಗಿದೆ" ಎಂದು ಬರೆದಿದ್ದಾರೆ.
ಇದೇ ರೀತಿ ಉತ್ತಮ ನಿರ್ಧಾರವನ್ನು ಕೈಗೊಳ್ಳಿ ಹಾಗೂ ಅವುಗಳನ್ನು ಜಾರಿಗೊಳಿಸಿ ಕೊರೊನಾ ಸೋಂಕನ್ನು ನಿವಾರಿಸಲು ಮುಂದಡಿ ಇಡಿ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮಹಾನಿರ್ದೇಶಕ ಟೆಡ್ರೋಸ್ ಅಧಾನೊಂ ಗೆಬ್ರಿಯೆಸುಸ್ ಕೂಡ ಹಾರೈಸಿದ್ದಾರೆ.
ಭಾರತದಲ್ಲಿ ಎರಡು ಲಸಿಕೆಗಳ ತುರ್ತು ಬಳಕೆಗೆ ಅನುಮತಿ ದೊರೆಯುತ್ತಿದ್ದಂತೆಯೇ ಸಾಮೂಹಿಕ ಲಸಿಕಾ ಕಾರ್ಯಕ್ರಮಕ್ಕೂ ಸಿದ್ಧತೆ ನಡೆಯುತ್ತಿದೆ. ಹಲವು ರಾಜ್ಯಗಳಲ್ಲಿ ಫೂರ್ವಾಭ್ಯಾಸ ನಡೆಯುತ್ತಿದ್ದು, ಇನ್ನು ಕೆಲವೇ ದಿನಗಳಲ್ಲಿ ಲಸಿಕೆ ದೊರೆಯಲಿದೆ ಎಂದು ಕೇಂದ್ರ ಸರ್ಕಾರ ಭರವಸೆ ನೀಡಿದೆ
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications