ಕೇರಳ: ಹಕ್ಕಿ ಜ್ವರ ದಿಢೀರ್ ಏರಿಕೆ, ನೂರಾರು ಕೋಳಿಗಳ ಮಾರಣಹೋಮ
ತಿರುವನಂತಪುರಂ, ಡಿಸೆಂಬರ್ 20: ಕೋವಿಡ್ ಕಡಿಮೆಯಾಯಿತು ಎಂದು ನಿಟ್ಟುಸಿರುವ ಬಿಟ್ಟ ಬೆನ್ನಲ್ಲಿಯೇ ಕೇರಳ ರಾಜ್ಯದಲ್ಲಿ ಮತ್ತೆ ಹಕ್ಕಿ ಜ್ವರ ಕಾಣಿಸಿಕೊಂಡಿದ್ದು, ಜನರಲ್ಲಿ ಅನಾರೋಗ್ಯದ ಆತಂಕ ಮನೆ ಮಾಡಿದೆ.
ಕೇರಳದ ಕೋಟಯಂ ಜಿಲ್ಲೆಯ ಎರಡು ಗ್ರಾಮಗಳ ನಿವಾಸಿಗಳಲ್ಲಿ ಹಕ್ಕಿ ಜ್ವರ ಕಂಡು ಬಂದಿದ್ದು, ಪ್ರಕರಣಗಳಲ್ಲಿ ದಿಢೀರ್ ಏರಿಕೆ ಕಂಡು ಬಂದಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಈ ರೋಗ ವ್ಯಾಪಕವಾಗಿ ಹರಡದಂತೆ ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ಗ್ರಾಮಗಳ ವ್ಯಾಪ್ತಿಯಲ್ಲಿ ನೂರಾರು ಕೋಳಿಗಳ ಮಾರಣಹೋಮ ಮಾಡಲಾಗಿದೆ. ಈ ಕುರಿತು ಯಾವುದೇ ಆತಂಕ ಬೇಡ. ಹಕ್ಕಿ ಜ್ವರ ನಿಯಂತ್ರಣಕ್ಕೆ ಬರಲಿದೆ ಎಂದು ಆರೋಗ್ಯಾಧಿಕಾರಿಗಳು ಭರವಸೆ ನೀಡಿದ್ದಾರೆ.
ಈ ಎರಡು ಗ್ರಾಮಗಳಲ್ಲಿ ಬ್ರಾಯ್ಲರ್ ಕೋಳಿಗಳಲ್ಲಿ ಕಳೆದ ವಾರ ಜ್ವರ ಕಾಣಿಸಿತ್ತು. ಈ ಕಾರಣಕ್ಕೆ ಈ ರೋಗ ವ್ಯಾಪಿಸದಂತೆ ತಡೆಯಲು ಇಲ್ಲಿನ ನೂರಾರು ಬಾತುಕೋಳಿಗಳು, ಕೋಳಿ ಹಾಗೂ ಇನ್ನಿತರ ಸಾಕು ಪಕ್ಷಿಗಳನ್ನು ಸಂಹರಿಸಲಾಗಿದೆ. ಕಳೆದ ಭಾನುವಾರ ರೈತರು ಕೊಳಗಳಲ್ಲಿನ ಬಾತುಕೋಳಿಗಳನ್ನು ಹಿಡಿದು ಆರೋಗ್ಯಾಧಿಕಾರಿಗಳ ನೀಡಿದ್ದಾರೆ ಎಂದು ಪಶುವೈದ್ಯಕೀಯ ಅಧಿಕಾರಿ ತಿಳಿಸಿದರು.

ಬಾತುಕೋಳಿಗಳು ವಾಸಿಸುವ ಕೊಳಗಳ ಸುತ್ತ ಒಂದು ಕಿ.ಮೀ. ವ್ಯಾಪ್ತಿಯಲ್ಲಿ ಹಕ್ಕಿ ಜ್ವರದ ಸೋಂಕು ಕಾಣಿಸಿಕೊಂಡಿದ್ದು, ಈ ಕಾರಣದಿಂದ ಈ ಭಾಗದಲ್ಲಿ ಸಾಕು ಪಕ್ಷಿಗಳನ್ನು ಕೊಲ್ಲಲಾಗುತ್ತಿದೆ. ಈ ಪ್ರದೇಶದಿಂದ ಬೇರೆ ರೋಗ ಹರಡದಂತೆ ಕ್ರಮ ಕೈಗೊಳ್ಳಲಾಗಿದೆ.
ಕೋಳಿ ವ್ಯಾಪಾರದ ಮೇಲೆ ನಿರ್ಬಂಧ?
ಜಿಲ್ಲೆಯಲ್ಲಿ ಕಂಡು ಬಂದ ಈ ಹಕ್ಕಿ ಜ್ವರ ಒಂದು ವೇಳೆ ನಿಯಂತ್ರಣವಾಗದಂತೆ ವ್ಯಾಪಿಸಿದ್ದೇ ಆದಲ್ಲಿ ದಿನವೂ ನೂರಾರು, ಸಾವಿರಗಟ್ಟಲೇ ಕೋಳಿಗಳ ಮಾರಣ ಹೋಮ ಆಗಲಿದೆ. ಹಕ್ಕಿಗಳಿಂದ ಈ ರೋಗ ಮನುಷ್ಯರಿಗೆ ಹರಡುವ ಸಾಧ್ಯತೆ ಹೆಚ್ಚಿದೆ. ಮಕ್ಕಳು, ಹಿರಿಯ ನಾಗರಿಕರಿಗೆ ಇದರಿಂದ ಅಪಾಯವಿದೆ. ಮುಖ್ಯವಾಗಿ ಕೋಳಿ (ಚಿಕನ್) ಮಾರಾಟಕ್ಕೆ ಈ ಹಕ್ಕಿಜ್ವರದ ಕರಿಛಾಯೆ ಆವರಿಸಲಿದ್ದು, ವ್ಯಾಪಾರಕ್ಕೂ ತಾತ್ಕಾಲಿಕ ನಿರ್ಬಂಧ ಹೇರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಇದು ಈ ಜಿಲ್ಲೆ ಹಾಗೂ ರಾಜ್ಯಾದ್ಯಂತ ಇನ್ನಷ್ಟು ಸಮಸ್ಯೆ ಸೃಷ್ಟಿಸಲಿದೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications