ಮಣಿಪುರ ಮುಖ್ಯಮಂತ್ರಿ ಬೈರೆನ್ ಸಿಂಗ್ ಗೆ ಇಂದು ಅಗ್ನಿ ಪರೀಕ್ಷೆ
ಮಣಿಪುರದ ಚೊಚ್ಚಲ ಬಿಜೆಪಿ ಮುಖ್ಯಮಂತ್ರಿ ಬೈರೆನ್ ಸಿಂಗ್ ಇಂದು ವಿಧಾನಸಭೆಯಲ್ಲಿ ವಿಶ್ವಾಸ ಮತಯಾಚನೆ ಮಾಡಲಿದ್ದಾರೆ. ಕಳೆದ ವಾರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವ ಬೈರೆನ್ ಸಿಂಗ್ ಗೆ ಇದು ಮೊದಲ ಅಗ್ನಿ ಪರೀಕ್ಷೆ.
ಬೆಂಗಳೂರು, ಮಾರ್ಚ್ 20: ಮಣಿಪುರದ ಚೊಚ್ಚಲ ಬಿಜೆಪಿ ಮುಖ್ಯಮಂತ್ರಿ ಬೈರೆನ್ ಸಿಂಗ್ ಇಂದು ವಿಧಾನಸಭೆಯಲ್ಲಿ ವಿಶ್ವಾಸ ಮತ ಯಾಚನೆ ಮಾಡಲಿದ್ದಾರೆ. ಕಳೆದ ವಾರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವ ಬೈರೆನ್ ಸಿಂಗ್ ಗೆ ಇದು ಮೊದಲ ಅಗ್ನಿ ಪರೀಕ್ಷೆಯಾಗಿದೆ.
ಕಳೆದ 15 ವರ್ಷಗಳಿಂದ ರಾಜ್ಯದಲ್ಲಿ ಅಧಿಕಾರ ನಡೆಸಿದ್ದ ಕಾಂಗ್ರೆಸ್ ಚುನಾವಣಾ ಫಲಿತಾಂಶದಲ್ಲಿ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಆದರೆ ಇದನ್ನು ಬದಿಗೆ ತಳ್ಳಿ ಬಿಜೆಪಿ ಇಲ್ಲಿ ಅಧಿಕಾರಕ್ಕೇರಿದೆ. ಇದೀಗ ಬಿಜೆಪಿ ಅಧಿಕಾರ ಉಳಿಸಿಕೊಳ್ಳಲು ಇಂದು ಬಹುಮತ ಸಾಬೀತು ಪಡಿಸಬೇಕಾಗಿದೆ.
60 ಸದಸ್ಯ ಬಲದ ವಿಧಾನಸಭೆಯಲ್ಲಿ ಬಹುಮತ ಸಾಬೀತಿಗೆ ಬೈರೆನ್ ಸಿಂಗ್ 31 ಮತಗಳನ್ನು ಪಡೆಯಬೇಕಾಗಿದೆ.[ಮಣಿಪುರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿಯ ಬೈರೆನ್ ಸಿಂಗ್]

ಈಗಾಗಲೇ ರಾಜ್ಯಪಾಲರಿಗೆ ನೀಡಿರುವ ಪತ್ರದಲ್ಲಿ ಬೈರೆನ್ ಸಿಂಗ್ ತಮಗೆ 32 ಶಾಸಕರ ಬೆಂಬಲ ಇರುವುದಾಗಿ ಹೇಳಿದ್ದಾರೆ. 21 ಬಿಜೆಪಿ ಶಾಸಕರು, ಎನ್.ಪಿ.ಪಿ ಯ 4, ಎನ್.ಪಿ.ಎಫ್ ನ 4, ಟಿಎಂಸಿಯ 1, ಎಲ್.ಜೆ.ಪಿಯ 1 ಶಾಸಕರ ಬೆಂಬಲ ತಮಗಿರುವುದಾಗಿ ಅವರು ಹೇಳಿದ್ದಾರೆ.[ನಾಳೆ ಮಣಿಪುರ ಮುಖ್ಯಮಂತ್ರಿಯಾಗಿ ಬೈರೆನ್ ಸಿಂಗ್ ಪ್ರಮಾಣ ವಚನ]
ಇದೇ ವೇಳೆ ಕಾಂಗ್ರೆಸ್ ಕೂಡಾ ತಮಗೂ 32 ಶಾಸಕರ ಬೆಂಬಲ ಇರುವುದಾಗಿ ಹೇಳಿದೆ. ಕಾಂಗ್ರೆಸ್ ಒಟ್ಟು 28 ಸ್ಥಾನಗಳನ್ನು ಗೆದ್ದಿದ್ದು ತಮಗೆ ನಾಲ್ವರು ಎನ್.ಪಿ.ಪಿ ಶಾಸಕರ ಬೆಂಬಲ ಇರುವುದಾಗಿ ಕಾಂಗ್ರೆಸ್ ಹೇಳಿದೆ. ಆದರೆ ತಾವು ಕಾಂಗ್ರೆಸಿಗೆ ಬಂಬಲ ನೀಡಿಯೇ ಇಲ್ಲ ಎಂದು ಎನ್.ಪಿ.ಪಿ ಹೇಳಿದೆ.
ಇವರಲ್ಲಿ ಯಾರು ಸತ್ಯ, ಯಾರು ಸುಳ್ಳು, ಬೈರೆನ್ ಸಿಂಗ್ ಅಧಿಕಾರ ಉಳಿಸಿಕೊಳ್ಳುತ್ತಾರಾ? ಈ ಎಲ್ಲಾ ಪ್ರಶ್ನೆಗಳಿಗೆ ಮಧ್ಯಾಹ್ನದ ವೇಳೆಗೆ ಉತ್ತರ ದೊರೆಯಲಿದೆ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications