ಗುಜರಾತಿಗೆ ವಿಜಯ್ ರೂಪಾನಿ ಸಿಎಂ, ನಿತಿನ್ ಪಟೇಲ್ ಡಿಸಿಎಂ
ಅಹಮದಾಬಾದ್, ಆಗಸ್ಟ್ 5: ಆನಂದಿಬೆನ್ ರಾಜೀನಾಮೆಯಿಂದ ತೆರವಾಗಿರುವ ಗುಜರಾತ್ ಸಿಎಂ ಸ್ಥಾನಕ್ಕೆ ವಿಜಯ್ ರೂಪಾನಿ ಅವರನ್ನು ಬಿಜೆಪಿ ಹೈಕಮಾಂಡ್ ಆಯ್ಕೆ ಮಾಡಿದೆ. ಗುಜರಾತಿನ ಮುಂದಿನ ಮುಖ್ಯಮಂತ್ರಿಯಾಗಿ ವಿಜಯ್ ರೂಪಾನಿ ಆಯ್ಕೆಯಾಗಿದ್ದು, ನಿತಿನ್ ಭಾಯಿ ಪಟೇಲ್ ಅವರು ಉಪಮುಖ್ಯಮಂತ್ರಿಯಾಗಲಿದ್ದಾರೆ ಎಂದು ಶುಕ್ರವಾರ ಬಿಜೆಪಿ ಘೋಷಿಸಿದೆ.
ಸಿಎಂ ಸ್ಥಾನಕ್ಕೆ ಆರೋಗ್ಯ ಸಚಿವ ನಿತಿನ್ ಪಟೇಲ್ ಹೆಸರು ಬಹುತೇಕ ಅಂತಿಮವಾಗಿತ್ತು. ಆದರೆ, ಕೊನೆ ಕ್ಷಣದಲ್ಲಿ ವಿಜಯ್ ರೂಪಾನಿ ಅವರ ಹೆಸರನ್ನು ಅಧಿಕೃತ ಘೊಷಣೆ ಮಾಡಲಾಗಿದೆ. [ಗುಜರಾತ್ ಮುಂದಿನ ಸಿಎಂ ಅಮಿತ್ ಶಾ ಅಲ್ವಂತೆ!, ಮತ್ತ್ಯಾರು?]

ವಿಜಯ್ ರೂಪಾನಿ ಹಾಗೂ ನಿತಿನ್ ಪಟೇಲ್ ಸಿಎಂ ಹುದ್ದೆಯ ಅಂತಿಮ ಸ್ಪರ್ಧೆಯಲ್ಲಿದ್ದರು. ಆದರೆ, ವಿಜಯ್ ರೂಪಾನಿ ಪಕ್ಷದ ಸಂಘಟನೆಯಲ್ಲಿ ತೊಡಗಿಕೊಳ್ಳಲು ಹಿರಿಯ ನಾಯಕರು ಸೂಚನೆ ನೀಡಿದ್ದಾರೆ.[ಆರೆಸ್ಸೆಸ್ ನಡೆಸಿದ ಆಂತರಿಕ ಸಮೀಕ್ಷೆಯಿಂದ ಬಿಜೆಪಿಗೆ ನಡುಕ]
ಶುಕ್ರವಾರ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಚಿವ ನಿತಿನ್ ಗಡ್ಕರಿ ಹಾಗೂ ಸರೋಜ್ ಪಾಂಡೆ ವೀಕ್ಷಕರಾಗಿ ಪಾಲ್ಗೊಂಡಿದ್ದರು.
ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಜೈಲು ಸೇರಿದ್ದ ವಿಜಯ್ ರೂಪಾನಿ ಅವರು ವಿದ್ಯಾರ್ಥಿ ಜೀವನದಲ್ಲಿ ಸಂಘಟನಾ ಚತುರ ಎನಿಸಿದ್ದರು. ಗುಜರಾತಿನ ಈ ಹಿಂದಿನ ಮುಖ್ಯಮಂತ್ರಿಗಳಾದ ಕೇಶುಭಾಯಿ ಪಟೇಲ್, ನರೇಂದ್ರ ಮೋದಿ, ಅನಂದಿಬೆನ್ ಪಟೇಲ್ ಅವರ ಜತೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಯಾವುದೇ ಹಗರಣಗಳಲ್ಲಿ ರೂಪಾನಿ ಹೆಸರು ಕೇಳಿ ಬಂದಿಲ್ಲ.
ಜೈನ ಸಮುದಾಯದ ವಿಜಯ್ ರೂಪಾನಿ ಅವರು ಗುಜರಾತ್ ಬಿಜೆಪಿಯ ಪ್ರಧಾನ ಕಾರ್ಯದರ್ಶಿಯಾಗಿ, ಸಂಸದರಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಆಗಸ್ಟ್ 3ರಂದು 61ನೇ ಹುಟ್ಟುಹಬ್ಬ ಆಚರಿಸಿಕೊಂಡ ವಿಜಯ್ ಅವರಿಗೆ ಹುಟ್ಟುಹಬ್ಬದ ಗಿಫ್ಟ್ ಸಿಕ್ಕಿದೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications