'ಬಿಜೆಪಿ, ಭಾರತ ಬಿಡಿ' ಚಳವಳಿ: ಆಗಸ್ಟ್ 9 ರಂದು ಉದ್ಘಾಟನೆ!
ಕೋಲ್ಕತ್ತಾ, ಜುಲೈ 21: ಬಿಜೆಪಿ ವಿರುದ್ಧ ಒಂದಿಲ್ಲೊಂದು ಹೇಳಿಕೆ ನೀಡುವುದರಲ್ಲಿ ಸದಾ ಮುಂದಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೊಸ ಚಳವಳಿಯೊಂದನ್ನು ಆರಂಭಿಸುತ್ತಿದ್ದಾರೆ. 'ಬಿಜೆಪಿ ಭಾರತ್ ಚೋಡೋ'(ಬಿಜೆಪಿ ಭಾರತ ಬಿಡಿ) ಎಂದು ಈ ಚಳವಳಿಯ ಹೆಸರು. ಆಗಸ್ಟ್ 9 ರಂದು ಈ ಚಳವಳಿಯನ್ನು ಉದ್ಘಾಟಿಸುವುದಾಗಿ ಮಮತಾ ಹೇಳಿದ್ದಾರೆ.
ಇಂದು (ಜುಲೈ 21) ಕೋಲ್ಕತ್ತಾದಲ್ಲಿ ನಡೆದ ರ್ಯಾಲಿಯೊಂದರಲ್ಲಿ ಭಾಗವಹಿಸಿದ್ದ ಅವರು, ಕೇಂದ್ರ ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. 'ನಾವು ನಿಜಕ್ಕೂ ಪ್ರಜಾಪ್ರಭುತ್ವ ಪದ್ಧತಿಯಲ್ಲಿದ್ದೀವಾ ಎಂದು ಅನುಮಾನ ಹುಟ್ಟಿಸುವಂಥ ಸಂದರ್ಭದಲ್ಲಿ ನಾವಿಂದು ಬದುಕುತ್ತಿದ್ದೇವೆ. 'ನಕಲಿ ಹಿಂದುತ್ವ' ದಿಂದಾಗಿ ಪ್ರಾಮಾಣಿಕ ಹಿಂದುಗಳು ಈ ದೇಶದಲ್ಲಿ ಬದುಕುವುದಕ್ಕೆ ಸಾಧ್ಯವಾಗುತ್ತಿಲ್ಲ. ದಲಿತರು ಮತ್ತು ಮುಸ್ಲಿಮರು ಈ ದೇಶದಲ್ಲಿ ಗೌರವದಿಂದ ಬದುಕುವುದಕ್ಕೆ ಸಾಧ್ಯವಾಗುತ್ತಿಲ್ಲ' ಎಂದು ಮಮತಾ ಕಿಡಿಕಾರಿದ್ದಾರೆ.

'ಅಪನಗದೀಕರಣದ ಸಮಯದಲ್ಲಿ ಬಿಜೆಪಿ ಸಾಕಷ್ಟು ಹಣ ದೋಚಿದೆ. ಅದಕ್ಕೆಂದೇ ಇದುವರೆಗೂ ರಿಸರ್ವ್ ಬ್ಯಾಂಕ್ ಸಹ, ಅಪನಗದೀಕರಣದಿಂದ ಒಟ್ಟು ಸಂಗ್ರಹ ಎಷ್ಟಾಗಿದೆ ಎಂಬ ಕುರಿತು ಮಾಹಿತಿ ನೀಡಿಲ್ಲ. ಈ ಅಪನಗದೀಕರಣ ಎಂಬುದೇ ಒಂದು ದೊಡ್ಡ ಹಗರಣ' ಎಂದು ಬಿಜೆಪಿ ವಿರುದ್ಧದ ತಮ್ಮ ಅಸಮಾಧಾನವನ್ನು ಹೊರಹಾಕಿದರು.
ತೃಣಮೂಲ ಕಾಂಗ್ರೆಸ್ ಗೆ ಜನಪರ ಕಾಳಜಿ ಇಲ್ಲವೆಂದಾಗಿದ್ದರೆ, ಪಶ್ಚಿಮ ಬಂಗಾಳದ ಜನರು ಎಡಪಕ್ಷವನ್ನು ಮೂಲೆಗುಂಪು ಮಾಡಿ ನಮ್ಮನ್ನು ಅಧಿಕಾರಕ್ಕೇರಲು ಬಿಡುತ್ತಿರಲಿಲ್ಲ! ಬಿಜೆಪಿ ಪಶ್ಚಿಮ ಬಂಗಾಳದಿಂದ ಒಂದೇ ಒಂದು ಸೀಟು ಗೆಲ್ಲುವುದಕ್ಕೂ ನಾವು ಅವಕಾಶ ಮಾಡಿಕೊಡುವುದಿಲ್ಲ ಎಂದು ಇದೇ ಸಂದರ್ಭದಲ್ಲಿ ಅವರು ಹೇಳಿದರು.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications