Haryana Election 2024: ಬಿಜೆಪಿ ಅಭ್ಯರ್ಥಿಗಳ 2ನೇ ಪಟ್ಟಿ ಪ್ರಕಟ: ವಿನೇಶ್ ಪೋಗಟ್ ವಿರುದ್ಧ ಟಿಕೆಟ್ ಯಾರಿಗೆ
ನವದೆಹಲಿ, ಸೆಪ್ಟಂಬರ್ 10: ಹರಿಯಾಣ ಹರಿಯಾಣ ವಿಧಾನಸಭೆ (Haryana Assembly Election 2024) ಚುನಾವಣೆಗೆ ಅಖಾಡ ಸಿದ್ಧವಾಗುತ್ತಿದೆ. ಬಿಜೆಪಿ, ಎಎಪಿ ಮತ್ತು ಕಾಂಗ್ರೆಸ್ ಮಧ್ಯೆ ತೀವ್ರ ಹಣಾಹಣಿ ಕಂಡು ಬರುವ ಸಾಧ್ಯತೆ ಇದೆ. ಇಂದು ಮಂಗಳವಾರ ಬಿಜೆಪಿ ಕಣ್ಣಕ್ಕಿಳಿಸಿರುವ ತನ್ನ 21 ಅಭ್ಯರ್ಥಿಗಳ ಹೆಸರುಗಳನ್ನು ಎರಡನೇ ಪಟ್ಟಿಯಲ್ಲಿ ಪ್ರಕಟಿಸಿದೆ.
ಹರಿಯಾಣದಲ್ಲಿ ಒಟ್ಟು 90 ವಿಧಾನಸಭಾ ಸ್ಥಾನಗಳಿಗೆ ಪ್ರಸಕ್ತ ವರ್ಷದಲ್ಲಿ ಚುನಾವಣೆ ನಡೆಯುತ್ತಿದೆ. ಬಿಜೆಪಿಯು ಎರಡನೇ ಪಟ್ಟಿಯ ಬಿಡುಗಡೆ ಮೂಲಕ ವಿಧಾನಸಭೆಗೆ ಒಟ್ಟು 87 ಅಭ್ಯರ್ಥಿಗಳನ್ನು ಘೋಷಿಸಿದಂತಾಗಿದೆ. ಈ ಬಾರಿ ಜುಲಾನಾ ಕ್ಷೇತ್ರವು ಹೈವೋಲ್ಟೇಟ್ ಕ್ಷೇತ್ರವಾಗಿ ಬದಲಾಗಲಿದೆ. ಕಾರಣ ಈ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಕುಸ್ತಿಪಟು ವಿನಿಷ್ ಪೋಗಟ್ ಅವರು ಕಣಕ್ಕಿಳಿದಿದ್ದಾರೆ.

ಅಜುಲಾನಾ ಕ್ಷೇದಿಂದ ಕಾಂಗ್ರೆಸ್ ಟಿಕೆಟ್ನಲ್ಲಿ ಚುನಾವಣೆಗೆ ಸ್ಪರ್ಧಿಸಲಿರುವ ಒಲಿಂಪಿಯನ್ ವಿನೇಶ್ ಫೋಗಟ್ ವಿರುದ್ಧ ಬಿಜೆಪಿಯು ಕ್ಯಾಪ್ಟನ್ ಯೋಗೇಶ್ ಬೈರಾಗಿ ಅವರನ್ನು ಕಣಕ್ಕಿಳಿಸಿದೆ. ಈ ಮೂಲಕ ತೀವ್ರ ಪೈಪೋಟಿ ಒಡ್ಡಲು ಕೇಸರಿಪಡೆ ಕಾರ್ಯತಂತ್ರ ರೂಪಿಸಿದೆ.
ಮತ್ತೊಮ್ಮೆ ಅದೃಷ್ಟ ಪರೀಕ್ಷೆಗೆ ಇಳಿದ ಸಿಎಂ
ಈ ಹಿಂದೆ ಬಿಜೆಪಿಯು ಒಟ್ಟು 67 ಅಭ್ಯರ್ಥಿಗಳ ಹೆಸರಿನ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಇಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ಪಕ್ಷದ ಹಾಲಿ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಅವರು ಕರ್ನಾಲ್ ಕ್ಷೇತ್ರದಿಂದ ಮತ್ತೆ ಅದೃಷ್ಟ ಪರೀಕ್ಷೆ ಇಳಿದಿದ್ದಾರೆ. ಅವರು ಲಾಡ್ವಾದಿಂದ ಸ್ಪರ್ಧಿಸಿದ್ದು, ಮತ್ತೊಮ್ಮೆ ಮುಖ್ಯಮಂತ್ರಿ ಸ್ಥಾನ ಪಡೆಯಲು ತಂತ್ರಗಾರಿಕೆ ಹೆಣೆದಿದ್ದಾರೆ.
ನಯಾಬ್ ಸಿಂಗ್ ಸೈನಿ ಅವರು ಕಳೆದ ಎರಡು ಭಾರಿ ನಡೆದ ಲೋಕಸಭಾ ಚುನಾವಣೆ (2019 ಮತ್ತು 2024)ಯಲ್ಲಿ ಕುರು ಕ್ಷೇತ್ರದಿಂದ ಸಂಸದರಾಗಿ ಆಯ್ಕೆ ಆದವರು. ಇನ್ನೂ ಬಿಜೆಪಿ ಮತ್ತೋರ್ವ ಮುಖಂಡರಾದ ಮಾಜಿ ರಾಜ್ಯ ಬಿಜೆಪಿ ಅಧ್ಯಕ್ಷ ಓಂ ಪ್ರಕಾಶ್ ಧಂಕರ್ ಅವರ ಕ್ಷೇತ್ರವನ್ನು ಪಕ್ಷದ ವರಿಷ್ಠರು ಬದಲಾಯಿಸಿದ್ದಾರೆ.

ಬಿಜೆಪಿ ಹಿರಿಯ ನಾಯಕರು ಆದ ಮಾಜಿ ರಾಜ್ಯ ಸಚಿವ ಅನಿಲ್ ವಿಜ್ ಅವರನ್ನು ಕೇಸರಿ ಪಡೆಯ ಭದ್ರಕೋಟೆಯಾಗಿರುವ ಅಂಬಾಲಾ ಕ್ಯಾಂಟ್ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಸಲಾಗಿದೆ.
ಬಿಜೆಪಿ ನಾಯಕರ ಕುಟುಂಬಸ್ಥರಿಗೆ ಟಿಕೆಟ್
ಇತ್ತೀಚೆಗಷ್ಟೇ ಬಿಜೆಪಿಗೆ ಸೇರಿರುವ ಹಲವು ನಾಯಕರಿಗೆ ಹರಿಯಾಣ ಚುನಾವಣೆಯ ಟಿಕೆಟ್ ಲಭಿಸಿದೆ. ಈ ಹಿಂದೆ ಜನನಾಯಕ್ ಜನತಾ ಪಾರ್ಟಿ (ಜೆಜೆಪಿ) ದೇವೆಂದರ್ ಸಿಂಗ್ ಬಬ್ಲಿ ಅವರು ತೋಹಾನಾ ಕ್ಷೇತ್ರದ ಟಿಕೆಟ್ ಪಡೆದುಕೊಂಡಿದ್ದಾರೆ. ಅದೇ ರೀತಿ ಹರಿಯಾಣದ ಮಾಜಿ ಸಿಎಂ ಬನ್ಸಿ ಲಾಲ್ ಅವರ ಮೊಮ್ಮಗಳು ಶ್ರುತಿ ಚೌಧರಿ ತೋಷಮ್ ಗೂ ಟಿಕೆಟ್ ಸಿಕ್ಕಿದೆ.
ಇನ್ನೂ ರಾವ್ ಇಂದರ್ಜಿತ್ ಸಿಂಗ್ ಅವರ ಪುತ್ರಿ ಆರತಿ ಸಿಂಗ್ ರಾವ್ ಅವರಿಗೆ ಅಟೆಲಿ ಸ್ಥಾನದ ಟಿಕೆಟ್ ನೀಡಲಾಗಿದೆ. ಕೇಂದ್ರ ಸಚಿವರ ಇತರ ಹಲವಾರು ನಿಷ್ಠಾವಂತ ನಾಯಕರ ಮಕ್ಕಳಿಗೆ ಟಿಕೆಟ್ ಲಭಿಸಿದೆ. ಈ ಮೂಲಕ ರಾಜ್ಯದ ದಕ್ಷಿನ ಭಾಗದಲ್ಲಿ ಕೇಸರಿ ಪಡೆ ಮತ್ತಷ್ಟು ಆಳವಾಗಿ ಬೇರೂರಲು ಪ್ಲಾನ್ ಮಾಡಿಕೊಂಡಿರುವುದು ಮೇಲ್ನೋಟಕ್ಕೆ ಗೊತ್ತಾಗುತ್ತದೆ.
ಅಕ್ಟೋಬರ್ 5 ರಂದು ಚುನಾವಣೆ
ಹರಿಯಾಣದಲ್ಲಿ ಮುಂದಿನ ತಿಂಗಳೂ ಅಕ್ಟೋಬರ್ 5 ರಂದು ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಈ ಬಾರಿ ಇಲ್ಲಿ ಬಿಜೆಪಿ ಗೆಲುವು ಸಾಧಿಸಿದ ಸತತ ಮೂರು ಬಾರಿ ಹ್ಯಾಟ್ರಿಕ್ ಗೆಲುವು ಸಾಧಿಸಿದಂತಾಗುತ್ತದೆ. ಆದರೆ ಇಲ್ಲಿ ಕಾಂಗ್ರೆಸ್ ಪಕ್ಷ ತೀವ್ರ ಪ್ರತಿ ಸ್ಪರ್ಧೆ ಒಡ್ಡಲು ಪ್ಲಾನ್ ಮಾಡಿಕೊಂಡಿದೆ. ಘಟಾನುಘಟಿ ನಾಯಕರನ್ನು ಕಣಕ್ಕಿಳಿಸಲು ಪ್ಲಾನ್ ಮಾಡಿಕೊಂಡಿದೆ. ಹೀಗಾಗಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳಿಗೆ ಹರಿಯಾಣದಲ್ಲಿನ ಗೆಲುವು ಪ್ರತಿಷ್ಠೆಯಾಗಿದೆ.
ಅಕ್ಟೋಬರ್ 5 ರಂದು ಚುನಾವಣೆ ನಡೆದರೆ, ಅಕ್ಟೋಬರ್ 8ರಂದು ಮತ ಎಣಿಕೆ ನಡೆಯಲಿದ್ದು, ಅಂದು ಸಂಜೆ ಫಲಿತಾಂಶ ಪ್ರಕಟವಾಗಲಿದೆ ಎಂದು ಕೇಂದ್ರ ಚುನಾವಣೆ ಆಯೋಗ ಮಾಹಿತಿ ನೀಡಿದೆ.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ?











Click it and Unblock the Notifications