ಬಿಜೆಪಿ ಪ್ರಧಾನಿ ಅಭ್ಯರ್ಥಿ ಮೋದಿ ನಾಮಪತ್ರ ಸಲ್ಲಿಕೆ
ವಡೋದರಾ,ಏ.9: 'ವಡೋದರಾ ನನ್ನ ಕರ್ಮಭೂಮಿ ನಾನು ಇಲ್ಲಿ ಅನೇಕ ವರ್ಷಗಳ ಕಾಲ ನೆಲೆಸಿದ್ದೇನೆ. ಈಗ ಇಲ್ಲಿನ ಜನರ ಸೇವೆ ಮಾಡುವ ಸದವಕಾಶ ಸಿಕ್ಕಿದೆ' ಎಂದು ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರು ನಾಮಪತ್ರ ಸಲ್ಲಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.
ನರೇಂದ್ರ ಮೋದಿ ಅವರಿಗೆ ಅನುಮೋದಕ ಬೆಂಬಲಿಗರಾಗಿ ಜನಸಮಾನ್ಯರ ಪ್ರತಿನಿಧಿಯಾಗಿ ಕಿರಣ್ ಮಹೀದಾ ಎಂಬ ಸ್ಥಳೀಯ ಚಾಹ್ ವಾಲ ಹಾಗೂ ರಾಜಮನೆತನ ಸದಸ್ಯರೊಬ್ಬರು ಬಂದಿದ್ದರು. ಮೋದಿ ಅವರ ನಾಮಪತ್ರಕ್ಕೆ ಇಬ್ಬರು ಸಹಿ ಹಾಕಿ ಹರಿಸಿದರು.
ಗುಜರಾತಿನ ಮುಖ್ಯಮಂತ್ರಿ ಅವರ ಈ ನಡೆ ಪಕ್ಷದ ಪ್ರಚಾರಕ್ಕೆ ಇಂಬು ನೀಡಲಿದೆ ಎಂದು ರಾಜಕೀಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಮೋದಿ ಅವರೊಂದಿಗೆ ಬಿಜೆಪಿಯ ಅನಂದಿಬೇನ್ ಪಟೇಲ್ ಅವರು ರೋಡ್ ಶೋ ನಲ್ಲಿ ಪಾಲ್ಗೊಂಡಿದ್ದರು. ಏ.30ರಂದು ನಡೆಯಲಿರುವ ಮತದಾನದಂದು ಎಲ್ಲಾ ಮತದಾರರು ಕಮಲಕ್ಕೆ ಮತ ಹಾಕುತ್ತಾರೆ ಎಂಬ ವಿಶ್ವಾಸವಿದೆ ಎಂದು ಮೋದಿ ಹೇಳಿದರು.
ವಡೋದರಾದಲ್ಲಿ ಕಾಂಗ್ರೆಸ್ ನಿಂದ ಮದುಸೂಧನ್ ಮಿಸ್ತ್ರಿ, ಆಮ್ ಆದ್ಮಿ ಪಕ್ಷದಿಂದ ಸುನಿಲ್ ಕುಲಕರ್ಣಿ ಕಣದಲ್ಲಿದ್ದಾರೆ. ಮೋದಿ ಅವರು ವಡೋದರಾ ಅಲ್ಲದೆ ವಾರಣಾಸಿಯಿಂದಲೂ ಸ್ಪರ್ಧೆಗಿಳಿದಿದ್ದಾರೆ. ಅಲ್ಲಿ ಕಾಂಗ್ರೆಸ್ಸಿನಿಂದ ಅಜಯ್ ರೈ ಹಾಗೂ ಎಎಪಿಯಿಂದ ಅರವಿಂದ್ ಕೇಜ್ರಿವಾಲ್ ಪೈಪೋಟಿ ನೀಡಲಿದ್ದಾರೆ.
ಮೋದಿ ಬ್ಯಾನರ್ ತೆರವು: ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಗುಜರಾತಿನ ವಡೋದರಾ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲು ಬುಧವಾರ ನಾಮಪತ್ರ ಸಲ್ಲಿಸಿದ ಬಳಿಕ ನಗರದ ವಿವಿಧೆಡೆ ಅಳವಡಿಸಲಾಗಿರುವ ಅವರ ಭಾವಚಿತ್ರವಿರುವ ಸಾವಿರಕ್ಕೂ ಅಧಿಕ ಬ್ಯಾನರ್ ಗಳು ಹಾಗೂ ಪೋಸ್ಟರ್ ಗಳನ್ನು ಬಿಜೆಪಿ ತಾನಾಗಿಯೇ ತೆರವುಗೊಳಿಸಿದೆ.

ಮೋದಿ ಭಾವಚಿತ್ರವಿರುವ ಪೋಸ್ಟರ್ ಗಳು
ಮೋದಿ ಭಾವಚಿತ್ರವಿರುವ ಪೋಸ್ಟರ್ ಗಳು ಪಕ್ಷದ ಸಂದೇಶಗಳನ್ನು ಹೊಂದಿರುವುದರಿಂದ, ಅವರು ನಾಮಪತ್ರ ಸಲ್ಲಿಸಿದ ಬಳಿಕವೂ ಅವುಗಳನ್ನು ಪ್ರದರ್ಶಿಸುವುದನ್ನು ಮುಂದುವರಿಸಿದಲ್ಲಿ, ಅವೆಲ್ಲವನ್ನೂ ಅವರ ವೈಯಕ್ತಿಕ ವೆಚ್ಚವಾಗಿ ಚುನಾವಣಾ ಆಯೋಗವು ಪರಿಗಣಿಸುವ ಸಾಧ್ಯತೆ ಇರುವುದರಿಂದ ಗುಜರಾತಿನ ಬಿಜೆಪಿ ಘಟಕ ಈ ಕ್ರಮ ಕೈಗೊಂಡಿದೆ.

ಚುನಾವಣಾ ಪ್ರಚಾರದ ವೆಚ್ಚದ ಗರಿಷ್ಠ ಮಿತಿ
ಲೋಕಸಭೆ ಚುನಾವಣಾ ಕಣದಲ್ಲಿರುವ ಓರ್ವ ಅಭ್ಯರ್ಥಿಯ ಚುನಾವಣಾ ಪ್ರಚಾರದ ವೆಚ್ಚದ ಗರಿಷ್ಠ ಮಿತಿಯನ್ನು ಚುನಾವಣಾ ಆಯೋಗವು 70 ಲಕ್ಷ ರೂ.ಗೆ ನಿಗದಿಪಡಿಸಿದೆ.

ಬಿಜೆಪಿಯು ವಡೋದರಾದಲ್ಲಿ ಮೋದಿ ಪೋಸ್ಟರ್
ಬಿಜೆಪಿಯು ವಡೋದರಾದ ಪ್ರಮುಖ ಸ್ಥಳಗಳಲ್ಲಿ 1 ಸಾವಿರಕ್ಕೂ ಅಧಿಕ ಮೋದಿಯ ಭಾವಚಿತ್ರವಿರುವ ಫಲಕಗಳನ್ನು ಅಳವಡಿಸಿದೆ. ಇದಕ್ಕೆ ಬೇಕಾದ ಜಾಗಗಳನ್ನು ಬಿಜೆಪಿಯು 15 ದಿನ ಮುಂಚಿತವಾಗಿಯೇ ಬುಕ್ ಮಾಡಿತ್ತು.
|
ಮೋದಿ ನಡೆಸಿದ ರೋಡ್ ಶೋ
ವಡೋದರಾದ ಪ್ರಮುಖ ಸ್ಥಳಗಳಲ್ಲಿ ಬಿಜೆಪಿಯು ಪ್ರಧಾನಿ ಅಭ್ಯರ್ಥಿ ಮೋದಿ ನಡೆಸಿದ ರೋಡ್ ಶೋ
-
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ












Click it and Unblock the Notifications