BJP Candidate 3rd List: ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ!
ಹೊಸ ದಿಲ್ಲಿ, ಮಾರ್ಚ್21: 2024ರ ಲೋಕಸಭಾ ಚುನಾವಣೆ ಕಾವು ದಿನದಿಂದಿ ದಿನಕ್ಕೆ ಜೋರಾಗಿದೆ. ಇತ್ತ ಕೇಂದ್ರ ಚುನಾವಣಾ ಆಯೋಗ ಚುನಾವಣಾ ದಿನಾಂಕವನ್ನ ಘೋಷಿಸಿದ್ದು, ಒಟ್ಟು ಏಳು ಹಂತದಲ್ಲಿ ದೇಶದಲ್ಲಿ ಚುನಾವಣೆ ನಡೆಯಲಿದೆ. ಇತ್ತ ಗೆಲ್ಲುವ ಕುದುರೆಯ ಹುಡುಕಾಟದಲ್ಲಿರುವ ಬಿಜೆಪಿ ಮೂರನೇ ಪಟ್ಟಿಯನ್ನ ಇಂದು (ಗುರುವಾರ) ಬಿಡುಗಡೆ ಮಾಡಿದೆ.
ಬಿಜೆಪಿ ಹೈಕಮಾಂಡ್ ಮೊದಲ ಪಟ್ಟಿಯಲ್ಲಿ ಯಾವುದೇ ಗೊಂದಲಗಳಿಲ್ಲದ ಕ್ಷೇತ್ರಗಳಲ್ಲಿ ಪಕ್ಷದ ನಾಯಕರ ಒಮ್ಮತದ ಅಭಿಪ್ರಾಯದ ಮೇರೆಗೆ 195 ಅಭ್ಯರ್ಥಿಗಳನ್ನ ಘೋಷಿಸಿದ್ದು, ಎರಡನೇ ಪಟ್ಟಿಯಲ್ಲಿ 72 ಕ್ಷೇತ್ರದ ಅಭ್ಯರ್ಥಿಯನ್ನ ಘೋಷಿಸಿತ್ತು. ಇದೀಗ ಮೂರನೇ ಪಟ್ಟಿಯಲ್ಲಿ ತಮಿಳುನಾಡಿದ 9 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನ ಪ್ರಕಟಿಸಿದೆ.

ಬಿಜೆಪಿ ಹೈಕಮಾಂಡ್ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ ಅಣ್ಣಾಮಲೈ ಅವರನ್ನು ಕೊಯಮತ್ತೂರಿನಿಂದ ಕಣಕ್ಕಿಳಿಸಿದೆ. ಕೆಲವು ದಿನಗಳ ಹಿಂದೆ ತೆಲಂಗಾಣ ರಾಜ್ಯಪಾಲ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ತಮಿಳಿಸೈ ಸೌಂದರರಾಜನ್ ಚೆನ್ನೈ ದಕ್ಷಿಣದಿಂದ ಮತ್ತು ಎಲ್ ಮುರುಗನ್ ನೀಲಗಿರಿಯಿಂದ ಸ್ಪರ್ಧಿಸಲಿದ್ದಾರೆ.
ಬಿಜೆಪಿಯ ಅಭ್ಯರ್ಥಿಗಳ ಮೂರನೇ ಪಟ್ಟಿ ಇಲ್ಲಿದೆ.
1.ಕೊಯಮತ್ತೂರು: ಅಣ್ಣಾಮಲೈ
2.ಚೆನ್ನೈ ದಕ್ಷಿಣ: ತಮಿಳಿಸೈ ಸೌಂದರರಾಜನ್
3. ನೀಲಗಿರಿ ಕ್ಷೇತ್ರ: ಎಲ್ ಮುರುಗನ್
4.ಕನ್ಯಾಕುಮಾರಿ: ರಾಧಾಕೃಷ್ಣನ್
5. ಚೆನ್ನೈ ಸೆಂಟ್ರಲ್ ಕ್ಷೇತ್ರ: ವಿನೋಜ್ ಪಿ.ಸೆಲ್ವಂ
6. ವೆಲ್ಲೂರು ಕ್ಷೇತ್ರ: ಡಾ.ಎ.ಸಿ ಷಣ್ಮುಗಂ
7. ಕೃಷ್ಣಗಿರಿ ಕ್ಷೇತ್ರ: ಸಿ.ನರಸಿಂಹನ್
8. ಪೆರಂಬಲೂರು ಕ್ಷೇತ್ರ: ಟಿ ಆರ್. ಪರಿವೀಂಧರ್
9. ತೂತುಕುಡಿ ಕ್ಷೇತ್ರ: ಎನ್. ನಾಗೇಂದ್ರನ್
BJP releases its third list of candidates for the upcoming Lok Sabha elections.
— ANI (@ANI) March 21, 2024
K Annamalai to contest from Coimbatore, Tamilisai Soundararajan from Chennai South and L. Murugan from Nilgiris. pic.twitter.com/bJLUyK8Og1
-
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ?












Click it and Unblock the Notifications