"ಮೋದಿಗೆ ಸಿಕ್ತು ಮೌಕಾ ಮಾಡಿದ್ದೆಲ್ಲ ದೋಖಾ"
ನವದೆಹಲಿ, ಏ.19: ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಕೈಗೊಂಡಿರುವ ರೈತ ವಿರೋಧಿ ನೀತಿ ವಿರುದ್ಧ ಕಾಂಗ್ರೆಸ್ ಹಮ್ಮಿಕೊಂಡ ಬೃಹತ್ ಸಮಾವೇಶ ಯಶಸ್ವಿಯಾಗಿದೆ. ಸುಮಾರು ಎರಡು ತಿಂಗಳ ನಂತರ ಅಖಾಡಕ್ಕೆ ಇಳಿದ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಮೋದಿ ಅವರ ವಿರುದ್ಧ ಕಿಡಿಕಾರಿ ಭರ್ಜರಿ ಭಾಷಣ ಮಾಡಿ ಚಪ್ಪಾಳೆ ಗಿಟ್ಟಿಸಿಕೊಂಡಿದ್ದಾರೆ.
'ಜಮೀನ್ ವಾಪಸಿ' ಹೆಸರಿನಲ್ಲಿ ಆಯೋಜನೆಗೊಂಡಿರುವ ಕಿಸಾನ್ ಸಮಾವೇಶದಲ್ಲಿ ಕರ್ನಾಟಕ ಸೇರಿದಂತೆ ದೇಶದ ವಿವಿಧೆಡೆಗಳಿಂದ ಬಂದಿರುವ ಲಕ್ಷಾಂತರ ರೈತರನ್ನು ಉದ್ದೇಶಿಸಿ ಕಾಂಗ್ರೆಸ್ ನಾಯಕರು ಮಾತನಾಡಿದರು. ನರೇಂದ್ರ ಮೋದಿ ಸರ್ಕಾರದ ಉದ್ದೇಶಿತ ಭೂ ಸ್ವಾದೀನ ಕಾಯ್ದೆ ತಿದ್ದುಪಡಿ ವಿರುದ್ಧ ಎಲ್ಲರೂ ಕಿಡಿ ಕಾರಿದರು. [ರಾಹುಲ್ ನಾಪತ್ತೆಯಾಗಿದ್ದೇಕೆ? ಟ್ವಿಟ್ಟರಿನಲ್ಲಿ ರಹಸ್ಯ ಲೀಕ್]
ಲೋಕಸಭೆ ಅಧಿವೇಶನಕ್ಕೂ ಮುನ್ನ ಡ್ರೆಸ್ ರಿಹರ್ಸಲ್ ನಂತೆ ಕಂಡ ಈ ಸಮಾವೇಶದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ರೈತರ ವಿರೋಧಿ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಹಮ್ಮಿಕೊಂಡಿರುವ ಪ್ರತಿಭಟನೆಯ ಮುಂದಾಳತ್ವ ವಹಿಸಿಕೊಳ್ಳುತ್ತೇನೆ ಎಂದು ಘೋಷಿಸಿದರು.

ಪ್ರಧಾನಿ ಮೋದಿ ಮಾಡಿದ್ದು ದೋಖಾ
ಲೋಕಸಭೆ ಚುನಾವಣೆಯಲ್ಲಿ ನನಗೆ ಅವಕಾಶ(ಮೌಕಾ) ನೀಡಿ ನಾನು ನಿಮ್ಮ ಬದುಕು ಹಸನಾಗಿಸುತ್ತೇನೆ ಎಂದು ರೈತರ ಮುಂದೆ ಬೇಡಿಕೊಂಡ ಮೋದಿ ಅವರು ಅವಕಾಶ ಸಿಕ್ಕ ಮೇಲೆ ಮಾಡಿದ್ದೆಲ್ಲ ಮೋಸ(ದೋಖಾ).

ಉದ್ಯಮಿಗಳ ಕೈಗೊಂಬೆಯಾಗಿರುವ ಮೋದಿ
ಗುಜರಾತಿನಲ್ಲಿ ಉದ್ಯಮಿಗಳ ಸಖ್ಯ ಬೆಳೆಸಿಕೊಂಡು ಅಲ್ಲಿನ ರೈತರ ಭೂಮಿಯನ್ನು ಕಬಳಿಸಲು ಯೋಜನೆ ರೂಪಿಸಿದ ಮೋದಿ, ಇದೇ ತಂತ್ರವನ್ನು ರಾಷ್ಟ್ರಮಟ್ಟದಲ್ಲಿ ಯಶಸ್ವಿಗೊಳಿಸಲು ಸಿದ್ದರಾಗಿದ್ದಾರೆ.
ಕಾರ್ಪೊರೇಟ್, ಜಮೀನುದಾರರು, ಉದ್ಯಮಿಗಳಿಂದ ಪಡೆದ ದೇಣಿಗೆಗೆ ಬದಲಾಗಿ ರೈತರ, ಬಡವರ ಬದುಕನ್ನು ಬಲಿ ಕೊಡುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಕಿಡಿ ಕಾರಿದರು. |
ವಿದೇಶಕ್ಕೆ ತೆರಳಿದ ಮೋದಿ ಮಾಡಿದ್ದು ಸರಿಯೇ?
ಪ್ರಧಾನಿಯಾಗಿ ವಿದೇಶಕ್ಕೆ ತೆರಳಿದ ಮೋದಿ ಅವರು ಇತ್ತೀಚೆಗೆ ದೇಶದ ಬಗ್ಗೆ ಮಾತನಾಡಿದ ರೀತಿ ಅವರಿಗೆ ಶೋಭೆ ತರುವುದಿಲ್ಲ. ದೇಶದ ಮಾನ ಹರಾಜು ಹಾಕಿದ್ದು ಏಕೆ? ಅವರು ಪಕ್ಷದ ವಕ್ತಾರರಲ್ಲ, ದೇಶದ ಪ್ರಧಾನಿ ಎಂಬುದನ್ನು ಮರೆತರೆ ಹೇಗೆ?
|
ಅಧ್ಯಕ್ಷೆ ಸೋನಿಯಾ ಗಾಂಧಿ ಪ್ರಶ್ನೆ
ಎಲ್ಲರ ವಿಕಾಸ, ಏಳಿಗೆ ಎಂದ ಮೋದಿ ಅವರ ಪಟ್ಟಿಯಲ್ಲಿ ಬಡವ, ರೈತ, ಕಾರ್ಮಿಕ ವರ್ಗ ಸೇರಿಲ್ಲವೇ? ಸಮಾವೇಶದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಪ್ರಶ್ನೆ
|
ಸಮಾರಂಭದಲ್ಲಿ ಕಾಂಗ್ರೆಸ್ ನಾಯಕರ ಹಾಜರಿ
ರಾಮಲೀಲಾ ಮೈದಾನದಲ್ಲಿ ಮೊದಲಿಗೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ದಿಗ್ವಿಜಯ್ ಸಿಂಗ್. ಎಕೆ ಅಂಟನಿ ಮಾತನಾಡಿದರು.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications