ಲೋಕಸಭಾ ಮೈತ್ರಿ: ಶಿವಸೇನೆಗೆ ಖಡಕ್ ಸಂದೇಶ ರವಾನಿಸಿದ ಅಮಿತ್ ಶಾ

ನವದೆಹಲಿ, ಜ 5: 2014ರಲ್ಲಿದ್ದಂತಹ ಪೂರಕ ವಾತಾವರಣ ಬಿಜೆಪಿಗೆ ಮುಂಬರುವ ಚುನಾವಣೆಯಲ್ಲಿ ಇಲ್ಲ ಎನ್ನುವುದನ್ನು ಅರಿತಿದ್ದರೂ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ತಮ್ಮ ಮಿತ್ರಪಕ್ಷ ಶಿವಸೇನೆಗೆ ಖಡಕ್ ಸಂದೇಶ ರವಾನಿಸಿದೆ.

ಹಿಂದೆ ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟದ ಪಾಲುದಾರ ಪಕ್ಷವಾಗಿದ್ದರೂ, ಶಿವಸೇನೆ ಕಳೆದ ಕೆಲವು ವರ್ಷಗಳಿಂದ ವಿರೋಧ ಪಕ್ಷದವರಿಗಿಂತ ಹೆಚ್ಚು ಬಿಜೆಪಿ, ಮೋದಿ ಮತ್ತು ಅಮಿತ್ ಶಾ ಅವರನ್ನು ಟೀಕಿಸುತ್ತಿದೆ.

ಹಲವು ಬಾರಿ ಅಮಿತ್ ಶಾ, ಶಿವಸೇನೆಯ ವರಿಷ್ಟ ಉದ್ಧವ್ ಠಾಕ್ರೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರೂ, ಬಿಜೆಪಿಯನ್ನು ಟೀಕಿಸುವ ಕೆಲಸವನ್ನು ಉದ್ಧವ್ ಮುಂದುವರಿಸಿಕೊಂಡು ಬರುತ್ತಲೇ ಇದ್ದಾರೆ. ರಾಮಮಂದಿರ ನಿರ್ಮಾಣ ವಿಚಾರದಲ್ಲೂ, ಠಾಕ್ರೆ, ಮೋದಿ ವಿರುದ್ದ ಕಿಡಿಕಾರಿದ್ದರು.

ಮಹಾರಾಷ್ಟ್ರದ ಬಿಜೆಪಿ ಸಂಸದರನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಅಮಿತ್ ಶಾ, ಶಿವಸೇನೆ ನಮ್ಮ ಜೊತೆಗಿರಲಿ ಅಥವಾ ಬಿಡಲಿ, ನೀವು ಚುನಾವಣೆಗೆ ಸಿದ್ದರಾಗಿರಿ ಎನ್ನುವ ಮಾತನ್ನು ಹೇಳಿದ್ದಾರೆ. ಇದು, ಪರೋಕ್ಷವಾಗಿ ಶಿವಸೇನೆಗೆ ನೀಡಿದ ಖಡಕ್ ಸಂದೇಶ ಎಂದೇ ವ್ಯಾಖ್ಯಾನಿಸಲಾಗುತ್ತಿದೆ.

ಪಕ್ಷಕ್ಕೆ ಹೆಚ್ಚಿನ ಸೀಟು ಮಹಾರಾಷ್ಟ್ರದಿಂದ ಬರುವುದು ಮುಖ್ಯ

ಪಕ್ಷಕ್ಕೆ ಹೆಚ್ಚಿನ ಸೀಟು ಮಹಾರಾಷ್ಟ್ರದಿಂದ ಬರುವುದು ಮುಖ್ಯ

ನವದೆಹಲಿಯಲ್ಲಿ ಮಹಾ ಸಂಸದರನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಅಮಿತ್ ಶಾ, ಶಿವಸೇನೆಯ ಜೊತೆ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸುವುದು ನಮ್ಮ ಉದ್ದೇಶ. ಆದರೆ, ಅವರು ನಮ್ಮ ಜೊತೆಗೆ ಬರಲಿ ಬಿಡಲಿ, ನೀವು ಚುನಾವಣೆಗೆ ಸಿದ್ದರಾಗಿ, ಪಕ್ಷಕ್ಕೆ ಹೆಚ್ಚಿನ ಸೀಟು ಮಹಾರಾಷ್ಟ್ರದಿಂದ ಬರುವುದು ಮುಖ್ಯ - ಅಮಿತ್ ಶಾ.

ಎಲ್ಲಾ ವಿಚಾರಗಳನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ

ಎಲ್ಲಾ ವಿಚಾರಗಳನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ

ಮೈತ್ರಿಗೋಸ್ಕರ ಶಿವಸೇನೆ ಡಿಮಾಂಡ್ ಮಾಡುವ ಎಲ್ಲಾ ವಿಚಾರಗಳನ್ನು ಒಪ್ಪಿಕೊಳ್ಳಲು ಆಗುವುವಿಲ್ಲ. ಬಿಹಾರ ಮಾದರಿಯಲ್ಲಿ ಸೀಟು ಹೊಂದಾಣಿಕೆ ಮಾಡಿಕೊಳ್ಳಲು ಸಾಧ್ಯವಿಲ್ಲ. ಮೈತ್ರಿ ಮಾಡಿಕೊಳ್ಳುತ್ತೇವೆಯೋ, ಇಲ್ಲವೋ ಎನ್ನುವುದನ್ನು ಸದ್ಯದಲ್ಲೇ ಅಂತಿಮಗೊಳಿಸಲಾಗುವುದು - ಅಮಿತ್ ಶಾ.

ಮೋದಿ, ದೇವೇಂದ್ರ ಫಡ್ನವೀಸ್

ಮೋದಿ, ದೇವೇಂದ್ರ ಫಡ್ನವೀಸ್

ಮಹಾರಾಷ್ಟ್ರ ಸರಕಾರ ಮತ್ತು ಕೇಂದ್ರ ಸರಕಾರದಲ್ಲಿನ ನಮ್ಮ ಸಾಧನೆಯನ್ನು ಆಧರಿಸಿ ನಾವು ಮುಂಬರುವ ಚುನಾವಣೆಯಲ್ಲಿ ಜನತೆಯ ಮುಂದೆ ಹೋಗಬೇಕು ಎಂದು ಅಮಿತ್ ಶಾ, ಸಂಸದರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಈ ಸಭೆಯ ಮೂಲಕ, ಬಿಜೆಪಿ ಸೀಟು ಹೊಂದಾಣಿಕೆಗಾಗಿ ಶಿವಸೇನೆಯ ಹಿಂದೆ ಬೀಳುವುದಿಲ್ಲ ಎನ್ನುವ ಅತ್ಯಂತ ಸ್ಪಷ್ಟ ಸಂದೇಶವನ್ನು ಶಾ ರವಾನಿಸಿದ್ದಾರೆ.

ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ

ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ

ರಾಮಮಂದಿರ ನಿರ್ಮಾಣದ ವಿಚಾರದಲ್ಲಿ, ಪ್ರಧಾನಿ ಸಂದರ್ಶನದಲ್ಲಿ ನೀಡಿದ್ದ ಹೇಳಿಕೆಯನ್ನು ಟೀಕಿಸಿದ್ದ ಸೇನೆ, ಮೋದಿಗೆ ರಾಮನಿಗಿಂತ ಕಾನೂನೇ ದೊಡ್ಡದು, ಆದರೆ ಅಧಿಕಾರಕ್ಕೆ ಬರಲು ರಾಮನನ್ನು ಬಳಸಿಕೊಂಡರು ಎಂದು ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಮೋದಿ ಇನ್ನು ಮುಂದೆ ಅನ್ಯಗ್ರಹಗಳ ಪ್ರವಾಸವನ್ನೂ ಮಾಡುತ್ತಾರೆ

ಮೋದಿ ಇನ್ನು ಮುಂದೆ ಅನ್ಯಗ್ರಹಗಳ ಪ್ರವಾಸವನ್ನೂ ಮಾಡುತ್ತಾರೆ

ನರೇಂದ್ರ ಮೋದಿ ಕೇವಲ ಸುಳ್ಳು ಭರವಸೆಗಳನ್ನು ನೀಡಿ 2014ರಲ್ಲಿ ಅಧಿಕಾರಕ್ಕೆ ಬಂದಿದ್ದಾರೆ. ಮೋದಿ ಇನ್ನು ಮುಂದೆ ಅನ್ಯಗ್ರಹಗಳ ಪ್ರವಾಸವನ್ನೂ ಮಾಡುತ್ತಾರೆ. ಬಿಜೆಪಿ ವಿರುದ್ಧ ಕೆಂಡಾಮಂಡಲವಾಗಿರುವ ಶಿವಸೇನೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಟೀಕೆಗಳ ಸುರಿಮಳೆಯನ್ನೇ ಇತ್ತೀಚೆಗೆ ಮಾಡುತ್ತಿದೆ. ಶಿವಸೇನೆಯು ಎನ್‌ಡಿಎ ಮೈತ್ರಿಕೂಟದಿಂದ ಜನವರಿಯಲ್ಲಿ ಹೊರಬಂದಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+