Kangana Ranaut: ರೈತರ ಪ್ರತಿಭಟನೆ ಬಗ್ಗೆ ಕಂಗನಾ ರಣಾವತ್ ಹೇಳಿಕೆ: ಛೀಮಾರಿ ಹಾಕಿದ ಬಿಜೆಪಿ
ಪದೇ ಪದೇ ನಾಲಿಗೆ ಹರಿಬಿಟ್ಟು ಒಂದಿಲ್ಲೊಂದು ವಿವಾದ ಮಾಡಿಕೊಳ್ಳುವ ನಟಿ, ಸಂಸದೆ ಕಂಗನಾ ರಣಾವತ್, ಇದೀಗ ರೈತರ ಪ್ರತಿಭಟನೆ ಕುರಿತು ನೀಡಿರುವ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಕಂಗನಾ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಬಿಜೆಪಿ ತನ್ನದೇ ಪಕ್ಷದ ಸಂಸದೆಗೆ ಛೀಮಾರಿ ಹಾಕಿದ್ದು, ಅವರ ಹೇಳಿಕೆಗೂ ಪಕ್ಷಕ್ಕೂ ಸಂಬಂಧವಿಲ್ಲ ಎಂದು ಹೇಳಿದೆ. ಬಿಜೆಪಿಯಿಂದಲೇ ತಮ್ಮ ಹೇಳಿಕೆಗೆ ಖಂಡನೆ ವ್ಯಕ್ತವಾದ ಬಳಿಕ ಕಂಗನಾ ಇದೀಗ ಮುಜುಗರ ಅನುಭವಿಸಿದ್ದಾರೆ.
ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳದೇ ಇದ್ದರೆ ರೈತರ ಪ್ರತಿಭಟನೆಯು ಭಾರತದಲ್ಲಿ ಬಾಂಗ್ಲಾದೇಶದಲ್ಲಿ ಆದಂತೆ ಬಿಕ್ಕಟ್ಟಿಗೆ ಕಾರಣವಾಗಬಹುದು ಎಂದು ಹೇಳಿಕೆ ನೀಡಿದ್ದು, ಭಾರಿ ವಿವಾದಕ್ಕೆ ಕಾರಣವಾಗಿತ್ತು. ಇದೀಗ ಸ್ವಪಕ್ಷವೇ ಅವರ ಹೇಳಿಕೆಯಿಂದ ಅಂತರ ಕಾಯ್ದುಕೊಂಡಿದೆ.

ಇಂತಹ ಹೇಳಿಕೆ ನೀಡದಂತೆ ಸೂಚನೆ
ಕಂಗನಾ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ, ಪಕ್ಷದ ಪರವಾಗಿ ನೀತಿ ವಿಷಯಗಳ ಬಗ್ಗೆ ಮಾತನಾಡಲು ಕಂಗನಾ ರಣಾವತ್ಗೆ ಅಧಿಕಾರವಿಲ್ಲ, ಅವರಿಗೆ ಈ ರೀತಿ ಹೇಳಿಕೆ ಕೊಡಲು ಅನುಮತಿ ನೀಡಿಲ್ಲ. ಮುಂದಿನ ದಿನಗಳಲ್ಲಿ ಇಂತಹ ಹೇಳಿಕೆಗಳನ್ನು ನೀಡದಂತೆ ಸೂಚನೆ ಕೊಡಲಾಗಿದೆ ಎಂದು ತಿಳಿಸಿದೆ.
ಬಿಜೆಪಿ ಪಕ್ಷ ಛೀಮಾರಿ ಹಾಕುವ ಮುನ್ನ ಹರಿಯಾಣ ಮತ್ತು ಬಿಜೆಪಿ ನಾಯಕರು ಪ್ರಚೋದನಕಾರಿ ಹೇಳಿಕೆಗಳನ್ನು ನೀಡದಂತೆ ಸಂಸದೆ ಕಂಗನಾ ರಣಾವತ್ಗೆ ಸಲಹೆ ಕೊಟ್ಟಿದ್ದರು. ರೈತರ ಬಗ್ಗೆ ಮಾತನಾಡುವುದ ಕಂಗನಾ ಅವರ ವ್ಯಾಪ್ತಿಗೆ ಬರುವುದಿಲ್ಲ, ಅದು ಅವರ ವೈಯಕ್ತಿಕ ಹೇಳಿಕೆಯಾಗಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರೈತ ಸ್ನೇಹಿಯಾಗಿದೆ. ವಿರೋಧ ಪಕ್ಷಗಳು ನಮ್ಮ ವಿರುದ್ಧವಾಗಿ ಕೆಲಸ ಮಾಡುತ್ತಿವೆ. ಕಂಗನಾ ಹೇಳಿಕೆ ಕೂಡ ಪಕ್ಷದ ಸಿದ್ಧಾಂತಕ್ಕೆ ವಿರುದ್ಧವಾಗಿದೆ. ಅವರು ಇಂತಹ ಸೂಕ್ಷ್ಮ ವಿಚಾರಗಳ ಬಗ್ಗೆ ಹೇಳಿಕೆ ನೀಡಬಾರದು ಎಂದು ಪಂಜಾಬ್ ಬಿಜೆಪಿ ನಾಯಕ ಹರ್ಜಿತ್ ಗ್ರೆವಾಲ್ ಹೇಳಿದ್ದಾರೆ.
ಕಂಗನಾ ಹೇಳಿಕೆಗೆ ಕಾಂಗ್ರೆಸ್ ಟೀಕೆ
ಕಂಗನಾ ರಣಾವತ್ ಅವರ ಹೇಳಿಕೆಗೆ ಕಾಂಗ್ರೆಸ್ ಕೂಡ ಪ್ರತಿಕ್ರಿಯೆ ನೀಡಿದ್ದು ಬಿಜೆಪಿ ನಾಯಕರನ್ನು ತರಾಟೆಗೆ ತೆಗೆದುಕೊಂಡಿದೆ. ರಣದೀಪ್ ಸುರ್ಜೆವಾಲ ಪ್ರತಿಕ್ರಿಯೆ ನೀಡಿ, ಕಂಗನಾ ರಣವಾತ್ ಶೀಘ್ರವಾಗಿ ಗುಣಮುಖರಾಗಲಿ ಎಂದು ಹೇಳಿದ್ದಾರೆ. ಹರಿಯಾಣದಲ್ಲಿ ಚುನಾವಣಾ ಪ್ರಚಾರದಲ್ಲಿರುವ ಸುರ್ಜೇವಾಲ, "ಇದು ಕಂಗನಾ ಅವರ ಮಾತುಗಳಾ ಅಥವಾ ಬಿಜೆಪಿಯ ಬೇರೆ ನಾಯಕರ ಮಾತುಗಳನ್ನು ಅವರು ನಕಲು ಮಾಡಿದ್ದಾರ ಎಂದು ಪ್ರಶ್ನೆ ಮಾಡಿದ್ದಾರೆ.
ಕಂಗನಾ ರೈತರ ವಿರುದ್ಧ ಹೇಳಿಕೆ ನೀಡುತ್ತಿರುವುದ ಇದೇ ಮೊದಲಲ್ಲ, 2020ರಲ್ಲಿ ರೈತರ ಪ್ರತಿಭಟನೆ ಬಗ್ಗೆ ಮಾತನಾಡಿದ್ದ ಕಂಗನಾ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಮಹಿಳೆಯನ್ನು ಪೌರತ್ವ ತಿದ್ದುಪಡಿ ಕಾನೂನು (ಸಿಎಎ) ವಿರೋಧಿ ಪ್ರತಿಭಟನೆಯಲ್ಲಿ ಕೂಡ ನೋಡಿದ್ದಾಗಿ ಹೇಳಿದ್ದ ಅವರು, 100 ರೂಪಾಯಿ ಕೊಟ್ಟು ಪ್ರತಿಭಟನೆಗೆ ಕರೆತರಲಾಗಿದೆ ಎಂದಿದ್ದರು.
ಇದೇ ವರ್ಷ ಜೂನ್ನಲ್ಲಿ ದೆಹಲಿಗೆ ತೆರಳುತ್ತಿದ್ದಾಗ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಮಹಿಳಾ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಕಂಗನಾ ರಣಾವತ್ ಕಪಾಳಕ್ಕೆ ಬಾರಿಸಿದ್ದರು. ರೈತರ ವಿರುದ್ಧ ಹೇಳಿಕೆ ನೀಡಿದ್ದಕ್ಕೆ ಹೀಗೆ ಮಾಡಿದೆ ಎಂದು ಸಿಐಎಸ್ಎಫ್ ಸಿಬ್ಬಂದಿ ಹೇಳಿದ್ದರು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications