ಕೇರಳದ ಹಲವೆಡೆ ಸಿಪಿಎಂ ಹಾಗೂ ಬಿಜೆಪಿ ಕಾರ್ಯಕರ್ತರ ಮಾರಾಮಾರಿ
ತಿರುವನಂತಪುರಂ, ಜುಲೈ 28: ಕೇರಳದ ಬಿಜೆಪಿ ಕಚೇರಿ ಮೇಲೆ ಸಿಪಿಎಂ ಕಾರ್ಯಕರ್ತರು ದಾಳಿ ನಡೆಸಿದ ಸುದ್ದಿ ಹಬ್ಬುತ್ತಿದ್ದಂತೆ, ರಾಜ್ಯದ ಹಲವೆಡೆ ಸಿಪಿಎಂ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ. ಗುರುವಾರ ತಡರಾತ್ರಿ 1.20ರ ಸುಮಾರಿಗೆ ಬಿಜೆಪಿಯ ಕೇಂದ್ರ ಕಚೇರಿ ಮೇಲೆ ಸಿಪಿಎಂ ಕಾರ್ಯಕರ್ತರು ದಾಳಿ ನಡೆಸಿದ್ದರು.
ಸಿಪಿಎಂ ಮುಖಂಡ ಕೆ ಬಾಲಕೃಷ್ಣ, ಬಿಜೆಪಿ ರಾಜ್ಯಾಧ್ಯಕ್ಷ ಕುಮಾರಂ ರಾಜಶೇಖರನ್ ಅವರನ್ನು ಗುರಿಯನ್ನಾಗಿಸಿಕೊಂಡು ಹಲ್ಲೆ ನಡೆಸಲು ಕಾರ್ಯಕರ್ತರು ಮುಂದಾಗಿದ್ದಾರೆ. ಹಲವೆಡೆ ಉಭಯ ಪಕ್ಷಗಳ ಕಚೇರಿಯ ಕಿಟಕಿ ಗಾಜುಗಳು ಪುಡಿಪುಡಿಯಾಗಿವೆ. ಕಚೇರಿ ಮುಂದೆ ನಿಲ್ಲಿಸಿದ್ದ ವಾಹನಗಳು ಜಖಂಗೊಂಡಿವೆ.

ಮನಕಾಡ್ -ಆಟುಕಳ್-ಚಾಲಾಯಿ ಪ್ರದೇಶದಲ್ಲಿ ಹೆಚ್ಚಿನ ಗಲಭೆಗಳು ಉಂಟಾಗಿವೆ. ರಾಜಕೀಯ ಮುಖಂಡರು, ವಾರ್ಡ್ ಕೌನ್ಸಿಲರ್ ಗಳು ಸೇರಿದಂತೆ 10ಕ್ಕೂ ಅಧಿಕ ಜನಪ್ರತಿನಿಧಿಗಳ ಮನೆಗಳ ಮೇಲೆ ದಾಳಿ ನಡೆಸಲಾಗಿದೆ. ಮನೆಗಳ ಮುಂದಿದ್ದ ವಾಹನಗಳ ಮೇಲೆ ಕಲ್ಲುತೂರಾಟ ಮಾಡಲಾಗಿದೆ. ಒಟ್ಟಾರೆ, ವಿವಿಧೆಡೆ ನಡೆದ ಗಲಭೆಯಲ್ಲಿ 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.
ಮನಕಾಡ್ ಪ್ರದೇಶದ ಸಿಐಟಿಯು ಕಾರ್ಯದರ್ಶಿ ಶ್ಯಾಮ್ ಎಂಬಾತನ ಮೇಲೆ ಮಾರಾಕಾಸ್ತ್ರಗಳಿಂದ ಹಲ್ಲೆ ಮಾಡಲಾಗಿದ್ದು, ತೀವ್ರವಾಗಿ ಗಾಯಗೊಂಡಿರುವ ಆತನನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಡಿವೈ ಎಫ್ ಐ ಕಾರ್ಯದರ್ಶಿ ಉನ್ನಿ ಅವರ ಮೇಲೂ ಹಲ್ಲೆ ಮಾಡಲಾಗಿದೆ. ರಾಜಕೀಯ ಪಕ್ಷಗಳ ಶೀತಲ ಸಮರದ ನಡುವೆ ಸಾರ್ವಜನಿಕರ ಆಸ್ತಿ ಪಾಸ್ತಿಗೆ ನಷ್ಟ ಉಂಟಾಗಿದೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ












Click it and Unblock the Notifications