Arvind Kejriwal: ಅರವಿಂದ್ ಕೇಜ್ರಿವಾಲ್ 'ಮದ್ಯದ ದಲ್ಲಾಳಿ'; ಸಿಎಜಿ ವರದಿ ಬಳಿಕ ಬಿಜೆಪಿ ಟೀಕೆ
ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಸೋಲಿನ ಆಘಾತ ಎದುರಿಸಿದ್ದ ಎಎಪಿ ಮುಖ್ಯಸ್ಥ, ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸಿಎಜಿ ಕೊಟ್ಟಿರುವ ವರದಿ ಮತ್ತಷ್ಟು ಮುಜುಗರ ತಂದಿದೆ. ದೆಹಲಿ ನೂತನ ಮುಖ್ಯಮಂತ್ರಿ ರೇಖಾ ಗುಪ್ತಾ ಅಬಕಾರಿ ಇಲಾಖೆಯ ಸಿಎಜಿ ಲೆಕ್ಕಪರಿಶೋಧನಾ ವರದಿಯನ್ನು ಮಂಡಿಸಿದ್ದು, ಬಿಜೆಪಿ ಕೇಜ್ರಿವಾಲ್ ವಿರುದ್ಧ ಹರಿಹಾಯ್ದಿದೆ.
ಮಂಗಳವಾರ ಸಿಎಜಿ ಲೆಕ್ಕಪರಿಶೋಧನಾ ವರದಿಯನ್ನು ಮಂಡಿಸಿದ ಬಳಿಕ ಅರವಿಂದ್ ಕೇಜ್ರಿವಾಲ್ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ, ಅವರನ್ನು ಮದ್ಯದ ದಲ್ಲಾಳಿ ಎಂದು ಕರೆದಿದೆ.

ಸಿಎಜಿ ವರದಿಯನ್ನು ಮುಖ್ಯಮಂತ್ರಿ ರೇಕಾ ಗುಪ್ತಾ ಮಂಡಿಸಿದ್ದಾರೆ, ಇದು ಎಎಪಿಯ ಕರಾಳ ಕೃತ್ಯಗಳ ಪಟ್ಟಿಯಾಗಿದೆ. ದೆಹಲಿಯಲ್ಲಿ ಯಾರಾದರೂ ಮದ್ಯದ ದಲ್ಲಾಳಿ ಇದ್ದರೆ ಅದು ಅರವಿಂದ್ ಕೇಜ್ರಿವಾಲ್ ಎಂದು ನಾವು ಚುನಾವಣಾ ಪ್ರಚಾರದಲ್ಲೇ ಹೇಳಿದ್ದೇವೆ, ಭ್ರಷ್ಟಾಚಾರ ಮಾಡಿದ ಯಾರೇ ಆದರೂ ಉತ್ತರ ನೀಡಲೇಬೇಕು ಎಂದು ದೆಹಲಿ ಜನತೆಗೆ ಭರವಸೆ ನೀಡಿದ್ದೆವು ಎಂದು ಬಿಜೆಪಿ ನಾಯಕ ಸಚ್ದೇವ್ ತಿಳಿಸಿರುವುದಾಗಿ ಎಎನ್ಐ ವರದಿ ಮಾಡಿದೆ.
ಸಿಎಜಿ ವರದಿಯನ್ನು ದೆಹಲಿ ವಿಧಾನಸಭೆಯಲ್ಲಿ ಮಂಡಿಸದಂತೆ ತಡೆಯಲು ಅರವಿಂದ್ ಕೇಜ್ರಿವಾಲ್ ತಮಗಿದ್ದ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಬಿಜೆಪಿ ನಾಯಕ ಮನೋಜ್ ತಿವಾರಿ ಆರೋಪಿಸಿದ್ದಾರೆ.
ಮಂಗಳವಾರ ಸಿಎಜಿ ವರದಿಯನ್ನು ದೆಹಲಿ ವಿಧಾನಸಭೆಯಲ್ಲಿ ಮಂಡಿಸಲಾಗಿದ್ದು, ದೆಹಲಿಯಲ್ಲಿ ಎರಡು ಅವಧಿಗೆ ಆಡಳಿತ ನಡೆಸಿರುವ ಅರವಿಂದ್ ಕೇಜ್ರಿವಾಲ್ ಮತ್ತು ಅವರ ಪಕ್ಷದ ನಾಯಕರು, ಸಿಎಜಿ ವರದಿಯನ್ನು ವಿಧಾನಸಭೆಯಲ್ಲಿ ಮಂಡಿಸದಂತೆ ತಡೆಯಲು ಸಾಕಷ್ಟು ಪ್ರಯತ್ನ ಮಾಡಿದೆ. ಮದ್ಯ ನೀತಿ ಹಗರಣದಲ್ಲಿ ₹2000 ಕೋಟಿಗೂ ಹೆಚ್ಚು ಹಣ ಅಕ್ರಮ ನಡೆದಿದೆ ಎಂದು ವರದಿಯಲ್ಲಿ ಬಯಲಾಗಿದೆ ಎಂದು ತಿವಾರಿ ಹೇಳಿದ್ದಾರೆ.
ಸಿಎಜಿ ವರದಿಯಲ್ಲಿ ಏನಿದೆ?
ಮಂಗಳವಾರ ಬೆಳಿಗ್ಗೆ ಸಿಎಂ ರೇಖಾ ಗುಪ್ತಾ ದೆಹಲಿಯಲ್ಲಿ ಮದ್ಯದ ನಿಯಂತ್ರಣ ಮತ್ತು ಪೂರೈಕೆಯ ಕಾರ್ಯಕ್ಷಮತೆ ಲೆಕ್ಕಪರಿಶೋಧನೆ ವರದಿಯನ್ನು ಮಂಡಿಸಿದ್ದಾರೆ. 2021-2022 ರಲ್ಲಿ ಜಾರಿಗೆ ತಂದ ಅಬಕಾರಿ ನೀತಿಯಿಂದಾಗಿ ರಾಜ್ಯ ಸರ್ಕಾರಕ್ಕೆ ₹2,000 ಕೋಟಿಗೂ ಹೆಚ್ಚು ನಷ್ಟವಾಗಿದೆ ಎಂದು ವರದಿಯಲ್ಲಿ ತಿಳಿದಿದೆ ಎಂದು ಅವರು ಹೇಳಿದ್ದಾರೆ.
ಸಿಎಜಿ ವರದಿಯನ್ನು ಮಂಡಿಸುತ್ತಿದ್ದಂತೆ ಎಎಪಿ ನಾಯಕಿ, ದೆಹಲಿ ಮಾಜಿ ಮುಖ್ಯಮಂತ್ರಿ ಅತಿಶಿ ರದ್ದುಗೊಂಡಿರುವ ಹೊಸ ಮದ್ಯ ನೀತಿಯನ್ನು ಸಮರ್ಥನೆ ಮಾಡಿದ್ದಾರೆ. ಅಕ್ಕ-ಪಕ್ಕದ ರಾಜ್ಯಗಳಿಂದ ಅಕ್ರಮವಾಗಿ ಮದ್ಯವನ್ನು ಪೂರೈಕೆ ಮಾಡುತ್ತಿರುವುದರಿಂದ ದೆಹಲಿಯ ಜನತೆ ನಷ್ಟ ಅನುಭವಿಸಿದ್ದಾರೆ ಎಂದು ಹೇಳಿದ್ದು, ಹಳೆಯ ಮದ್ಯ ನೀತಿಯಲ್ಲಿ ಅಕ್ರಮ ನಡೆದಿದೆ ಎಂದು ಅವರು ಆರೋಪಿಸಿದ್ದಾರೆ.
-
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್












Click it and Unblock the Notifications